ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಜನರಿಗೆ ಕೋಟ್ಯಂತರ ರೂ. ವಂಚನೆ: ದೂರು ದಾಖಲು

Date:

Advertisements

ಬೆಂಗಳೂರಿನಲ್ಲಿ ಜನರಿಗೆ ವಂಚನೆ ಮಾಡುವ ಜಾಲಗಳು ಹೆಚ್ಚಾಗಿ ಸಕ್ರಿಯವಾಗುತ್ತಿವೆ. ಇದೀಗ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್‌ಬಿಐ ಹೆಸರು ಹೇಳಿಕೊಂಡು ಸಬ್ಸಿಡಿಯಲ್ಲಿ ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ಮಹಿಳೆಯೊಬ್ಬರು ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಬ್ಲೂ ವಿಂಗ್ಸ್ ಎಂಬ ಹೆಸರಿನ ನಕಲಿ ಟ್ರಸ್ಟ್ ಮಾಡಿಕೊಂಡು ಪವಿತ್ರಾ ಮತ್ತು ಆಕೆಯ ಗ್ಯಾಂಗ್ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಪವಿತ್ರ ವಿರುದ್ಧ ಸದ್ಯ ಆನೇಕಲ್, ಚಂದಾಪುರ, ಸೂರ್ಯನಗರ, ಹೊಸಕೋಟೆ ಅತ್ತಿಬೆಲೆಯಲ್ಲಿ ವಂಚನೆ ಪ್ರಕರಣ ಬಯಲಾಗಿದೆ.

ಪವಿತ್ರಾ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಆಲ್ಬರ್ಟ್ ಮಾರ್ಟಿನ್, ಹೇಮಲತಾ ಹಾಗೂ ಶಾಲಿನಿ ಎಂಬವರು ಆರೋಪಿಗಳು ಎನ್ನಲಾಗಿದೆ.

Advertisements

ಆರೋಪಿಗಳು ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡು ಸಬ್ಸಿಡಿ ಸಾಲದ ಆಮಿಷವೊಡ್ಡಿ ಅಮಾಯಕರಿಗೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಪ್ರಕರಣ?

ಆರೋಪಿಗಳು ತಾವು ಆರಂಭಿಸಿದ ಬ್ಲೂ ವಿಂಗ್ಸ್ ಎಂಬ ಹೆಸರಿನ ನಕಲಿ ಟ್ರಸ್ಟ್‌ಗೆ ಕೇಂದ್ರ ಸರ್ಕಾರದಿಂದ ₹17,000 ಕೋಟಿ ಹಣ ಬಂದಿದೆ. ನಿರ್ಮಲಾ ಸೀತಾರಾಮನ್ ಅವರು ನಮಗೆ ಹಣ ವರ್ಗಾವಣೆ ಮಾಡಿದ್ದಾರೆ. ಅಲ್ಲದೇ, ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಸಹಿ ಇರುವ ನಕಲಿ ಕಾಪಿ ತೋರಿಸಿ ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ನೂರಾರು ಜನರಿಗೆ ವಂಚಿಸಿದ್ದಾರೆ.

ವಂಚಕಿ
ಆರೋಪಿ ಪವಿತ್ರಾ

ಈ ಹಣವನ್ನು ಟ್ರಸ್ಟ್ ಮೂಲಕ ಸಬ್ಸಿಡಿಯಲ್ಲಿ ಸಾಲ ವಿತರಿಸುತ್ತೇವೆ. ಅಮೆರಿಕದಿಂದಲೂ ನಮ್ಮ ಟ್ರಸ್ಟ್‌ಗೆ ಹಣ ಸಂದಾಯ ಆಗಿದೆ. ಆ ಹಣವನ್ನು ಲೋನ್ ಮೂಲಕ ನಿಮಗೆ ಕೊಡುತ್ತೇವೆ. ₹10 ಲಕ್ಷ ಸಾಲ ಪಡೆದರೆ ₹5 ಲಕ್ಷ ಮಾತ್ರ ವಾಪಸ್ ಕಟ್ಟಿದರೆ ಸಾಕು. ₹5 ಲಕ್ಷ ನಿಮಗೆ ಸಬ್ಸಿಡಿಯಾಗಿ ಸಿಗುತ್ತದೆ. ಆದರೆ, ನೀವು ಲೋನ್ ಪಡೆಯಬೇಕು ಎಂದರೆ ಮುಂಚಿತವಾಗಿ ಹಣ ಕಟ್ಟಬೇಕು ಎಂದು ನಂಬಿಸಿ ನಯವಂಚಕರ ತಂಡ ಹಣ ಪಡೆದು ವಂಚಿಸಿದೆ ಎಂದು ದೂರಲಾಗಿದೆ.

ಮಹಿಳೆಯರನ್ನು ಕೇಂದ್ರೀಕರಿಸಿ ಕಾರ್ಯಾಚರಿಸಿದ ವಂಚಕರ ತಂಡ ನೂರಾರು ಮಹಿಳೆಯರಿಂದ ಈ ರೀತಿ ಹಣ ವಸೂಲಿ ಮಾಡಿದೆ. ಅಲ್ಲದೇ, ಕಂತೆ ಕಂತೆ ಹಣದ ನೋಟುಗಳ ವಿಡಿಯೋಗಳನ್ನ ಕಳುಹಿಸಿ ಜನರನ್ನು ಮರುಳು ಮಾಡಿದೆ. ಇದನ್ನು ನಂಬಿದ ಜನರು ಲಕ್ಷಾಂತರ ರೂಪಾಯಿ ಹಣ ನೀಡಿದ್ದಾರೆ. ಕೆಲವರು ಸಾಲ ಮಾಡಿ ಹಣ ನೀಡಿದ್ದಾರೆ. 2019ರಿಂದ ನಿರಂತರವಾಗಿ ಐದು ಸಾವಿರದಿಂದ ಇಪ್ಪತ್ತೈದು ಸಾವಿರ ರೂ.ವರೆಗೆ ಮಹಿಳೆಯರು ಈ ಟ್ರಸ್ಟ್‌ಗೆ ಹಣ ಕಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಪ್ರೀತಿಸಿದ ಯುವತಿಗೆ ಮತ್ತೊಬ್ಬನೊಂದಿಗೆ ವಿವಾಹೇತರ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ

ತಿಂಗಳುಗಳು ಕಳೆದರೂ ಲೋನ್ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಸಾಲದ ಸುಳಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ. ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ಈಕೆ ವಂಚನೆ ಮಾಡಿದ್ದು, ನೂರಾರು ಮಂದಿಗೆ ಮಹಿಳೆ ವಂಚಿಸಿದ್ದಾಳೆ.

ಪ್ರಕರಣ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪವಿತ್ರ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಆಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

ಆನೇಕಲ್, ಚಂದಾಪುರ, ಸೂರ್ಯನಗರ, ಹೊಸಕೋಟೆ, ಅತ್ತಿಬೆಲೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳ ವಿರುದ್ಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X