ಹೊಸ ವರ್ಷಾಚರಣೆ | ₹21 ಕೋಟಿ ಮೌಲ್ಯದ ಮಾದಕ ದ್ರವ್ಯ ಪ್ರಕರಣ: ಸಿನಿ ತಾರೆಯರ ಮೇಲೆ ಗುಮಾನಿ

Date:

Advertisements

ಬೆಂಗಳೂರಿನ ರಾಮಮೂರ್ತಿ ನಗರದ ಮನೆಯೊಂದರಲ್ಲಿ ಇತ್ತೀಚೆಗೆ ಜಪ್ತಿ ಮಾಡಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್ ಪ್ರಕರಣದಲ್ಲಿ ಸಿನಿ ತಾರೆಯರು, ಉದ್ಯಮಿಗಳು ಹಾಗೂ ನಾನಾ ಕ್ಷೇತ್ರದ ವ್ಯಕ್ತಿಗಳ ಹೆಸರು ಕೇಳಿಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಡ್ರಗ್ಸ್‌ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಹೆಸರು ಕೇಳಿಬಂದಿತ್ತು.

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜಾಗುತ್ತಿದೆ. ಪಾರ್ಟಿಗಳಿಗೆ ಪೂರೈಸಲೆಂದು ವಿದೇಶದಿಂದ ನಗರಕ್ಕೆ ಡ್ರಗ್ಸ್​ ಸಾಗಿಸಲಾಗುತ್ತಿತ್ತು. ನಗರದ ಮನೆಯೊಂದರಲ್ಲಿ ಡ್ರಗ್ಸ್ ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ವಿಚಾರ ತಿಳಿದ ಸಿಸಿಬಿ ಪೊಲೀಸರು ಇತ್ತೀಚೆಗೆ ₹21 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿದ್ದರು. ನೈಜೀರಿಯಾದ ಪ್ರಜೆ ಲಿಯೋನಾರ್ಡ್ ಒಕ್ವುಡಿಲಿ (44) ಎಂಬಾತನನ್ನು ಬಂಧಿಸಿದ್ದರು.

ಸದ್ಯ, ಆರೋಪಿಯನ್ನು ತೀವ್ರ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಆರೋಪಿಯ ಮೊಬೈಲ್ ಪರಿಶೀಲನೆ ನಡೆಸಿದಾಗ ಕೆಲ ಸಿನಿಮಾ ನಟ–ನಟಿಯರು, ಕೆಲ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ನಾನಾ ಕ್ಷೇತ್ರಗಳ ಕೆಲ ವ್ಯಕ್ತಿಗಳು ಈತನಿಂದ ಡ್ರಗ್ಸ್ ಖರೀದಿಸುತ್ತಿದ್ದರು ಎಂಬ ಮಾಹಿತಿ ಇದೆ. ಆದರೆ, ಅದಕ್ಕೆ ಸಂಬಂಧಪಟ್ಟ ಪುರಾವೆಗಳು ಲಭ್ಯವಾಗಿಲ್ಲ. ಪ್ರಮುಖ ಪೆಡ್ಲರ್ ಆಗಿದ್ದ ಲಿಯೋನಾರ್ಡ್, ನಗರದಲ್ಲಿರುವ ಉಪ ಪೆಡ್ಲರ್‌ಗಳ ಮೂಲಕ ಡ್ರಗ್ಸ್ ಮಾರುತ್ತಿದ್ದನು ಎಂದು ಪೊಲೀಸ್ ಮೂಲಗಳು ಹೇಳಿವೆ.

Advertisements

ಆರೋಪಿ ಲಿಯೋನಾರ್ಡ್, ಎಲ್ಲಿಂದ ಡ್ರಗ್ಸ್ ತಂದಿದ್ದನು? ಯಾರಿಗೆ ಮಾರಾಟ ಮಾಡುತ್ತಿದ್ದನು? ಎಷ್ಟು ಪ್ರಮಾಣದಲ್ಲಿ ವಹಿವಾಟು ನಡೆಸಿದ್ದನು? ಎಂಬಿತ್ಯಾದಿ ಸಂಗತಿಗಳ ಬಗ್ಗೆ ಸದ್ಯಕ್ಕೆ ತನಿಖೆ ನಡೆಸಲಾಗುತ್ತಿದೆ. ಈ ಡ್ರಗ್ಸ್ ಜಾಲದಲ್ಲಿ ಯಾರೆಲ್ಲ ಇದ್ದಾರೆ ಎಂಬುದನ್ನು ತಿಳಿದುಕೊಂಡು, ತನಿಖೆ ಮುಂದುವರಿಸಲಾಗುವುದು. ಅಗತ್ಯವಿದ್ದರೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಐಟಿ ದಾಳಿ | ಜುವೆಲ್ಲರಿ ಶಾಪ್ ಮಾಲೀಕರ ಮನೆಯಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು ಪತ್ತೆ

ಮುಚ್ಚಳಿಕೆ ಬರೆಸಿಕೊಂಡ ಪೊಲೀಸರು

ಹೊಸ ವರ್ಷಾಚರಣೆಯಂದು ಡ್ರಗ್ಸ್ ಮಾರಾಟ ಹೆಚ್ಚಾಗುವ ಮಾಹಿತಿ ತಿಳಿದಿರುವ ಪೊಲೀಸರು, ಹಳೆ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ.

ಡ್ರಗ್ಸ್ ಸಾಗಣೆ, ಮಾರಾಟ ಹಾಗೂ ಸೇವನೆಗೆ ಸಂಬಂಧಪಟ್ಟ ಅಪರಾಧಗಳನ್ನು ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಿಸಿಕೊಳ್ಳಲಾಗುತ್ತಿದೆ. ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ಸುಮಾರು 180 ಮಂದಿ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಅವರೆಲ್ಲರನ್ನೂ ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X