ಮಾಲ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು: ಹೈಕೋರ್ಟ್‌

Date:

Advertisements

“ಮಾಲ್‌ ಆಫ್‌ ಏಷ್ಯಾಗೆ ಇಷ್ಟು ದಿನ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ್ದು ಏಕೆ? ಸಾರ್ವಜನಿಕರನ್ನು ಮಾಲ್​ಗೆ ನಿರ್ಬಂಧಿಸುವುದು ಪರಿಹಾರವೇ? ಸರ್ಕಾರ ಮತ್ತು ಮಾಲ್ ಇಬ್ಬರೂ ಸೇರಿ ಸೂಕ್ತ ಪರಿಹಾರ ರೂಪಿಸಿ. ಜನವರಿ 2 ರಂದು ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು. ಅಲ್ಲಿಯವರೆಗೂ ಮಾಲ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು” ಎಂದು ಹೈಕೋರ್ಟ್‌ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ಹೋಬಳಿ ಬ್ಯಾಟರಾಯನಪುರದ (ಬಳ್ಳಾರಿ ರಸ್ತೆ) ಮಾಲ್‌ ಆಫ್‌ ಏಷ್ಯಾಗೆ ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಸರ್ಕಾರದ ಈ ಕ್ರಮದ ಬಗ್ಗೆ ಪ್ರಶ್ನಿಸಿ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್​ ಲಿಮಿಟೆಡ್​ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿದೆ.

ಈ ರಿಟ್​​ ಅರ್ಜಿಯನ್ನು ಏಕಸದಸ್ಯ ಪೀಠ ನ್ಯಾ. ಎಂ.ಜಿ.ಎಸ್. ಕಮಲ್ ಅವರು ವಿಚಾರಣೆ ನಡೆಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹೊಸ ವರ್ಷಾಚರಣೆ | ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ, ಮೆಟ್ರೋ ಸಂಚಾರ

ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಮಾಲ್‌ಗೆ ಸಾರ್ವಜನಿಕರ ನಿರ್ಬಂಧ ಮಾಡುವುದರಿಂದ ಪರಿಹಾರ ದೊರೆಯುತ್ತದೆಯೇ? ಇನ್ನು ಮಾಲ್‌ನಲ್ಲಿ ಆವುದೇ ರೀತಿಯ ಧಾರ್ಮಿಕ ಪ್ರವಚನಗಳು ನಡೆಯುತ್ತಿಲ್ಲ. ಸರ್ಕಾರದ ಆದೇಶ ಸ್ಪಷ್ಟವಾಗಿರಬೇಕು. ಸರ್ಕಾರ ಮತ್ತು ಮಾಲ್ ಇಬ್ಬರೂ ಸೇರಿ ಸೂಕ್ತ ಪರಿಹಾರ ರೂಪಿಸಿ ಎಂದು ನ್ಯಾಯಾಲಯ ಸೂಚಿಸಿದೆ.

ಅಕ್ಟೋಬರ್ ತಿಂಗಳಿನಿಂದ ಮಾಲ್ ಕಾರ್ಯಾಚರಣೆ ನಡೆಸುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X