ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು

Date:

Advertisements

ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ರೈಲು ಚೆನ್ನೈ ಬಂದರಿನಿಂದ ಬೆಂಗಳೂರಿಗೆ ಫೆಬ್ರುವರಿ 14ರಂದು ಆಗಮಿಸಿದೆ.

ನಮ್ಮ ಮೆಟ್ರೋದ ಚಾಲಕ ರಹಿತ ರೈಲು ಆರ್.ವಿ.ರಸ್ತೆ ಹಾಗೂ ಬೊಮ್ಮಸಂದ್ರ ಲೈನ್‌ನಲ್ಲಿ ಪ್ರಾಯೋಗಿಕವಾಗಿ ಸಂಚರಿಸಲಿದೆ.

ಚೀನಾದ ಶಾಂಘೈ ಬಂದರಿನಿಂದ ಜನವರಿ 24ರಂದು ಸಮುದ್ರ ಮಾರ್ಗವಾಗಿ ಚಾಲಕ ರಹಿತ ರೈಲು ಬೋಗಿಗಳನ್ನು ಸಾಗಿಸಲಾಗಿತ್ತು. ಫೆ.6ರಂದು ಚೆನ್ನೈ ಬಂದರಿಗೆ ಬಂದು ತಲುಪಿತ್ತು. ಫೆಬ್ರುವರಿ 14ರಂದು ಬೆಳಗ್ಗೆ 3.30ಕ್ಕೆ ಚೆನ್ನೈ ಬಂದರಿನಿಂದ ರಸ್ತೆ ಮಾರ್ಗದ ಮೂಲಕವಾಗಿ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಚಾಲಕ ರಹಿತ ನಮ್ಮ ಮೆಟ್ರೋ ರೈಲು ಬಂದು ತಲುಪಿದೆ.

Advertisements

ಆರು ಬೋಗಿಗಳನ್ನು ಟ್ರೇಲರ್‌ಗಳ ಮೂಲಕ ಸಾಗಿಸಲಾಗಿದೆ. ಪ್ರತಿ ಕೋಚ್ 38.7 ಮೆಟ್ರಿಕ್ ಟನ್ ತೂಕವಿದೆ. ಈ ಚಾಲಕ ರಹಿತ ರೈಲು ಆರ್‌ವಿ ರಸ್ತೆ-ಬೊಮ್ಮಸಂದ್ರ ಲೈನ್‌ನಲ್ಲಿ ಸಂಚರಿಸಲಿದೆ. ಚೀನಾದ ಸಿಆರ್‌ಆರ್‌ಸಿ ನಾನ್ ಜಿಂಗ್ ಪುಜೆನ್ ಕಂ. ಲಿಮಿಟೆಡ್‌ನಿಂದ ಈ ರೈಲು ತಯಾರಾಗಿದೆ.

ಈ ಸುದ್ದಿ ಓದಿದ್ದೀರಾ? ಅಯೋಧ್ಯೆಗೆ ಮೆಮು ರೈಲು ರವಾನೆ; ಕೋಲಾರ ಜನರ ಪರದಾಟ

ನಮ್ಮ ಮೆಟ್ರೋದ ಫೇಸ್ 2 ಯೋಜನೆಯ ಕಾರಿಡಾರ್ 3ರ ಆರ್‌ವಿ ರಸ್ತೆ – ಬೊಮ್ಮಸಂದ್ರ ಮಾರ್ಗವಾಗಿ ಚಲಿಸಲಿದೆ. ಒಟ್ಟು 19.15 ಕಿಲೋಮೀಟರ್ ಉದ್ದದ ಈ ಹಳದಿ ಮಾರ್ಗಕ್ಕೆ 6 ಬೋಗಿಗಳ ಹೊಸ ರೈಲು ಆಗಮಿಸಿದೆ.

ಚಾಲಕ ಇಲ್ಲದಿದ್ದರೂ ಈಗಾಗಲೇ ಅಳವಡಿಸಲಾದ ಪ್ರೋಗ್ರಾಂ ಆಧಾರದ ಮೇಲೆ ಈ ರೈಲು ಸಂಚರಿಸಲಿದೆ. ರೈಲಿನ ಸಂಚಾರವನ್ನು ಕಂಟ್ರೋಲ್‌ ರೂಮ್​ನಲ್ಲಿ ನಿಗಾ ವಹಿಸಲಾಗುತ್ತದೆ. ಚಾಲಕ ಇಲ್ಲದೇ ಈ ಮೆಟ್ರೋ ಗಂಟೆಗೆ 80 ಕಿ.ಮೀ ವೇಗದಲ್ಲಿ ಚಲಿಸಲಿದೆ. 25 ಕೆವಿ ಸಾಮರ್ಥ್ಯದ ವಿದ್ಯುತ್‌ ಸಹಾಯದಿಂದ ಸಂಚರಿಸುತ್ತದೆ.

ಸಿಸಿಟಿವಿ ಕ್ಯಾಮೆರಾಗಳನ್ನೂ ಬೋಗಿಗಳಲ್ಲಿ ಅಳವಡಿಸಲಾಗಿದೆ. ಇನ್ನು ಸಂಚಾರದಲ್ಲಿ ಸಮಸ್ಯೆ ಉಂಟಾದರೆ ತಕ್ಷಣ ಓಸಿಸಿಗೆ ಸಂದೇಶ ರವಾನೆ ಆಗಲಿದೆ. ಆಗ ತಕ್ಷಣ ರೈಲಿನ ಸಂಚಾರವನ್ನು ನಿಲ್ಲಿಸಲಾಗುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X