ಪ್ರಧಾನಿ ನರೇಂದ್ರ ಮೋದಿ ಎಚ್ಎಎಲ್ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನ.25ರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ.
ನವ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮೋದಿ ಬೆಳಗ್ಗೆ 9.15ಕ್ಕೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್) ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಎಚ್ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ವಿಧಾನಸಭೆ ಚುನಾವಣೆ ಬಳಿಕ ಆ. 26 ರಂದು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದರು. ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದರು. ಅದಾಗಿ 3 ತಿಂಗಳ ಬಳಿಕ ಮೂರು ತಿಂಗಳ ಬಳಿಕ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸನಾತನ ಧರ್ಮ ಹೇಳಿಕೆ ಹಿಂದೂ ಧರ್ಮದ ವಿರುದ್ಧವಲ್ಲ, ಜಾತಿ ವ್ಯವಸ್ಥೆ ವಿರುದ್ಧ: ನ್ಯಾಯಾಲಯಕ್ಕೆ ಉದಯನಿಧಿ ವಿವರಣೆ
ತೇಜಸ್ ಜೆಟ್ಗಳ ಸೌಲಭ್ಯ ಸೇರಿದಂತೆ ಅವುಗಳ ಉತ್ಪಾದನಾ ಸೌಲಭ್ಯವನ್ನು ಪರಿಶೀಲಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಚುನಾವಣಾ ಪ್ರಚಾರಕ್ಕಾಗಿ ಅವರು ತೆಲಂಗಾಣಕ್ಕೆ ಪ್ರಯಾಣ ಬೆಳಸಲಿದ್ದಾರೆ.
ಭಾರತೀಯ ವಾಯುಪಡೆ ಇತ್ತೀಚೆಗೆ 12 Su-30MKI ಯುದ್ಧ ವಿಮಾನಗಳನ್ನು ಖರೀದಿಸಲು ಸರ್ಕಾರಿ ಸ್ವಾಮ್ಯದ ಎಚ್ಎಎಲ್ಗೆ ಟೆಂಡರ್ ನೀಡಿತ್ತು.