ಪ್ರಧಾನ ಮಂತ್ರಿ ಆವಾಸ್ ಯೋಜನೆ; ವಸತಿರಹಿತ, ನಿವೇಶನರಹಿತರ ಸಮೀಕ್ಷೆ ನಡೆಸಲು ಏ.30ರವರೆಗೆ ಗಡುವು ವಿಸ್ತರಣೆ

Date:

Advertisements

ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ಯಡಿ ಅರ್ಹ ವಸತಿರಹಿತರ ಹಾಗೂ ನಿವೇಶನರಹಿತರ ಸಮೀಕ್ಷೆ ನಡೆಸಲು ಮಾರ್ಚ್‌ 31ರವರೆಗೆ ನೀಡಿದ್ದ ಕಾಲಾವಕಾಶವನ್ನು ಏಪ್ರಿಲ್‌ 30ರವರೆಗೆ ವಿಸ್ತರಿಸಿ ರಾಜೀವ್‌ ಗಾಂಧಿ ವಸತಿ ನಿಗಮದಿಂದ ಆದೇಶ ನೀಡಿದೆ.

ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ)ಯಡಿ ಅರ್ಹ ವಸತಿ ರಹಿತರ ಹಾಗೂ ನಿವೇಶನರಹಿತರ ಸಮೀಕ್ಷೆ ನಡೆಸುವ ಕುರಿತು ನಿಗಮವು ಮಾರ್ಚ್‌ 25ರ ಪತ್ರದಲ್ಲಿ ಜನರಿಗೆ ಜಾಗೃತಿ ಮೂಡಿಸಲು ಗ್ರಾಮ ಪಂಚಾಯಿತಿ/ಗ್ರಾಮ ಮಟ್ಟದಲ್ಲಿ ಜಾಗೃತಿ ಅಭಿಯಾನ(IEC Activity) ಕೈಗೊಂಡು, ಶೇಕಡಾ 100ರಷ್ಟು ಅರ್ಹ ವಸತಿರಹಿತರ ಕುಟುಂಬಗಳ ಸಮೀಕ್ಷೆ ನಡೆಸಲು ಈಗಾಗಲೇ ತಿಳಿಸಿತ್ತು. ‌

ರಾಜೀವ್‌ ಗಾಂಧಿ ವಸತಿ ನಿಗಮ ನಿಯಮಿತ

ಈ ಸುದ್ದಿ ಓದಿದ್ದೀರಾ? ಮಂಡ್ಯ | ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಕಳಪೆ ಸೌಲಭ್ಯ; ವಾರ್ಡನ್‌ಗೆ ನೋಟಿಸ್ ನೀಡುವಂತೆ ಜಿ.ಪಂ ಸಿಇಒ ಸೂಚನೆ

Advertisements

ಸದರಿ ಸಮೀಕ್ಷೆಯಲ್ಲಿ ಅರ್ಹ ವಸತಿರಹಿತರು ಕೈಬಿಟ್ಟುಹೋಗಬಾರದೆಂಬ ಕಾರಣದಿಂದ ಏಪ್ರಿಲ್‌ 4ರವರೆಗೆ ಸಮೀಕ್ಷೆ ನಡೆಸಲು ಗಡುವು ವಿಸ್ತರಿಸಿರುವುದರಿಂದ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಾಗೃತಿ ಅಭಿಯಾನ(IEC Activity) ಕೈಗೊಂಡು ಯಶಸ್ವಿಯಾಗಿ, ನಿಗದಿತ ಅವಧಿಯೊಳಗೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲು ಸೂಕ್ತ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಎಲ್ಲ ಜಿಲ್ಲಾ ಪಂಚಾಯತ್‌ ಸಿಇಒಗಳಿಗೆ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X