ರಾಜ್ಯದಲ್ಲಿ ಮಳೆ ಕೊರತೆ, ನೀರಿನ ಅಭಾವ: ʻಅಕ್ಕಿʼ ದುಬಾರಿ

Date:

ಮುಂಗಾರು ಮಳೆ ಕೊರತೆಯ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ರಾಜ್ಯ ಸರ್ಕಾರವು ಜಲಾಶಯಗಳ ನೀರನ್ನು ಕೃಷಿಗೆ ಬಳಸದಂತೆ ನಿರ್ಬಂಧ ಹೇರಿ, ಕುಡಿಯುವ ನೀರಿಗೆ ಮಾತ್ರ ಆದ್ಯತೆ ನೀಡುವ ನಿರ್ಧಾರ ಕೈಗೊಂಡಿದೆ. ಇದರಿಂದಾಗಿ ತುಂಗಭದ್ರಾ ಮತ್ತು ಕಾವೇರಿ ತೀರದ ಪ್ರಮುಖ ಭತ್ತ ಬೆಳೆ ಪ್ರದೇಶಗಳಲ್ಲಿ ಬಿತ್ತನೆ ಕಾರ್ಯವೇ ನಡೆದಿಲ್ಲ ಪರಿಣಾಮ, ರಾಜ್ಯದ ಪ್ರಮುಖ ಆಹಾರ ಧಾನ್ಯವಾದ ಅಕ್ಕಿ ಬೆಲೆ ಗಗನಕ್ಕೇರಿದೆ.

- Advertisement -

ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಮಟ್ಟಕ್ಕಿಂತ ಕಡಿಮೆ ಬಿದ್ದಿದೆ. ಹಲವು ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆ ತೀರಾ ಕಡಿಮೆ ಮಟ್ಟದಲ್ಲಿದೆ. ತುಂಗಭದ್ರಾ ಜಲಾಶಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿರುವುದರಿಂದ, ಕೃಷಿಗೆ ನೀರು ಬಿಡುವುದನ್ನು ಮುಂದೂಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಪರಿಣಾಮವಾಗಿ ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಮಂಡ್ಯ, ಮೈಸೂರು ಸೇರಿದಂತೆ ತುಂಗಭದ್ರಾ ಮತ್ತು ಕಾವೇರಿ ಕಮಾಂಡ್ ಪ್ರದೇಶಗಳಲ್ಲಿ ರೈತರು ಭತ್ತ ಬಿತ್ತನೆಗೆ ಮುಂದಾಗಿಲ್ಲ. ಸಾಮಾನ್ಯವಾಗಿ ಜುಲೈನಲ್ಲಿ ನಡೆಯುವ ಬಿತ್ತನೆ ಕಾರ್ಯ ಈ ಬಾರಿ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಮಾರುಕಟ್ಟೆಯಲ್ಲಿ ಅಕ್ಕಿ ಪೂರೈಕೆ ಕುಂಠಿತಗೊಂಡಿರುವುದರಿಂದ, ಕಳೆದ ಎರಡು ತಿಂಗಳಲ್ಲಿ ಸೋನಾ ಮಸೂರಿ, ಸ್ಟೀಮ್ ಅಕ್ಕಿ ಸೇರಿದಂತೆ ಪ್ರಮುಖ ವಿಧಗಳಲ್ಲಿ ಕೆಜಿಗೆ ₹6 ರಿಂದ ₹10 ರೂಪಾಯಿ ಹೆಚ್ಚಳವಾಗಿದೆ. ಹಿಂದೆ ಕೆ.ಜಿ ₹40-45 ರೂಪಾಯಿ ಇದ್ದ ಅಕ್ಕಿಯ ಬೆಲೆ, ಈಗ ₹52 ರಿಂದ ₹59 ತಲುಪಿದೆ. ಒಟ್ಟಾರೆ ಶೇ. 30 ರಿಂದ 35 ರಷ್ಟು ಏರಿಕೆ ದಾಖಲಾಗಿದ್ದು, 25 ಕೆಜಿ ಚೀಲದ ಬೆಲೆ ಸುಮಾರು ₹150 ರಿಂದ ₹200 ಹೆಚ್ಚಾಗಿದೆ.

ಸರ್ಕಾರವು ರೈತರಿಗೆ ಜಲಾಶಯ ನೀರನ್ನು ನಂಬಿ ಬೆಳೆ ಬಿತ್ತದಂತೆ ಸಲಹೆ ನೀಡಿದ್ದು, ಮಳೆ ಸುಧಾರಿಸಿ ಜಲಾಶಯಗಳಿಗೆ ಸಾಕಷ್ಟು ನೀರು ಬಂದ ನಂತರವೇ ಕೃಷಿಗೆ ನೀರು ಬಿಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ. ಕುಡಿಯುವ ನೀರಿನ ಅವಶ್ಯಕತೆಯನ್ನು ಪೂರೈಸುವುದು ಮೊದಲ ಆದ್ಯತೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ರೈತರು ಮತ್ತು ಗ್ರಾಹಕರು ಈ ಪರಿಸ್ಥಿತಿಯಿಂದ ಆತಂಕಕ್ಕೊಳಗಾಗಿದ್ದಾರೆ. ಮಳೆ ಸುಧಾರಣೆಯ ನಿರೀಕ್ಷೆಯಲ್ಲಿದ್ದು, ಸರ್ಕಾರವು ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತ ಸಂಘಟನೆಗಳು ಒತ್ತಾಯಿಸುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...