ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟದಿಂದ ರಾಜಭವನ ಚಲೋ

Date:

Advertisements

ರಾಜ್ಯಸರ್ಕಾರವನ್ನು ಅತಂತ್ರಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರವನ್ನು ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದವರು ಮಂಗಳವಾರ ಫ್ರೀಡಂಪಾರ್ಕಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ರಾಜಭವನ ಚಲೋ ನಡೆಸಿದರು. ʼಜೆಡಿಎಸ್‌- ಬಿಜೆಪಿ ಹಠಾವೊ, ರಾಜ್ಯ ಬಚಾವೊʼ ಘೋಷಣೆ ಕೂಗಿದರು.

ನ್ಯಾಯವಾದಿ, ಸಾಮಾಜಿಕ ಚಿಂತಕ ಪ್ರೊ ರವಿವರ್ಮ ಕುಮಾರ್‌ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯಪಾಲರು ಮೊದಲನೆಯದಾಗಿ ಪ್ರಿವೆನ್ಶನ್‌ ಆಫ್‌ ಕರೆಪ್ಶನ್‌ ಆಕ್ಟ್‌ 17 ಎ ಸೆಕ್ಷನ್‌ ಅಡಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ಕೊಟ್ಟಿದ್ದೇನೆ ಎಂದಿದ್ದಾರೆ. ಆದರೆ, 17ಎ ಅನುಮತಿಗೆ ಸಂಬಂಧಿಸಿ ಪರಿಚ್ಛೇದವಲ್ಲ. ಭಾರತೀಯ ನ್ಯಾಯ ಸಂಹಿತೆ 218ನೇ ಪರಿಚ್ಛೇದದಲ್ಲಿ ಸ್ಯಾಂಕ್ಷನ್‌ ಯಾರಿಗೆ, ಯಾವಾಗ ಕೊಡಬಹುದು ಎಂದು ಒಬ್ಬ ಸಾಮಾನ್ಯ ಲಾ ವಿದ್ಯಾರ್ಥಿಯನ್ನು ಕೇಳಿದ್ರೆ ಹೇಳುತ್ತಿದ್ದ. ಎರಡನೆಯದಾಗಿ ಕಾನೂನು ಅರ್ಥ ಮಾಡಿಕೊಳ್ಳದೇ, ಓದದೇ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಏನು ತಪ್ಪು ಮಾಡಿದ್ದಾರೆ ಎಂದು ಒಂದೇ ಒಂದು ಪದದ ವಿವರಣೆ ಕೂಡಾ ಇಲ್ಲ. ಒಬ್ಬ ಘನತೆವೆತ್ತ ರಾಜ್ಯಪಾಲರು ಹೀಗೆ ಮಾಡಿದ್ದು ಖಂಡನೀಯ ಎಂದು ಹೇಳಿದರು.

ಕಾಂಗ್ರೆಸ್‌ನ ಯುವ ನಾಯಕಿ ನಜ್ಮಾ ಚಿಕ್ಕನೇರಳೆ ಮಾತನಾಡಿ, “ಕುಮಾರಸ್ವಾಮಿ ಅವರೇ ನೀವು ಒಂದು ತುಂಡು ಭೂಮಿ ಬಗ್ಗೆ ಇಂದು ಪ್ರಶ್ನೆ ಮಾತನಾಡುತ್ತಿದ್ದೀರಿ ಅಲ್ವಾ, ನೀವು ಯಾವ ಯಾವ ಎಂಎಲ್‌ಸಿ ಹೆಸರಿನಲ್ಲಿ ಯಾವ ಯಾವ ಎಸ್ಟೇಟಿನಲ್ಲಿ ಎಷ್ಟೆಷ್ಟು ಬಚ್ಚಿಟ್ಟಿದ್ದೀರಿ ಚೆಕ್‌ ಮಾಡಿಕೊಳ್ಳಿ. ವಿಜಯೇಂದ್ರ ಅವರೇ ನೀವು ಯಾರ್ಯಾರ ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡಿಕೊಂಡಿದ್ದೀರಿ ಚೆಕ್‌ ಮಾಡಿಕೊಳ್ಳಿ” ಎಂದರು.

“ಸಿದ್ದರಾಮಯ್ಯ ಅವರು ಬಸವಣ್ಣನ ತತ್ವ, ಈ ನಾಡಿನ ತತ್ವಗಳನ್ನು ಅನುಸರಿಸಿ ಎಲ್ಲ ಸಮುದಾಯಗಳಿಗೆ ಸಮಾನ ಸ್ಥಾನಮಾನ ಕೊಡುತ್ತಿದ್ದಾರೆ ಅದಕ್ಕೆ ನಿಮಗೆ ಹೊಟ್ಟೆ ಉರಿ. ಮೇಲ್ವರ್ಗದಲ್ಲಿರುವವರಿಗೂ 10% ಮೀಸಲಾತಿ ಕೊಟ್ಟವರು, ಅದಾನಿ -ಅಂಬಾನಿಯವರಿಗೆ ದುಡ್ಡು ಕೊಡುವವರು ನಿಮಗೆ ಇಷ್ಟ ಆಗುತ್ತಿದ್ದಾರೆ” ಎಂದು ಟೀಕಿಸಿದರು.

Advertisements

ಶೋಷಿತ ಸಮುದಾಯದ ಒಕ್ಕೂಟದ ರಾಜ್ಯ ಸಂಚಾಲಕ ಕೆ ಎಂ ರಾಮಚಂದ್ರ , ಅಹಿಂದ ಒಕ್ಕೂಟದ ಮುಖಂಡರಾದ ಮಾವಳ್ಳಿ ಶಂಕರ್‌, ಅನಂತ ನಾಯ್ಕ್‌, ವೆಂಕಟರಾಮಯ್ಯ ಸೇರಿದಂತೆ ಹಲವು ಮುಖಂಡರು ರಾಜಭವನ ಚಲೋ ಮುಂದಾಳತ್ವ ವಹಿಸಿದ್ದರು. ಸಾವಿರಾರು ಮಂದಿ ಒಕ್ಕೂಟದ ಸದಸ್ಯರು, ಮಹಿಳೆಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X