ಕೆಇಎ ಪರೀಕ್ಷಾ ಅಕ್ರಮ | ಪೊಲೀಸರನ್ನೇ ಸಿನೆಮಾ ಶೈಲಿಯಲ್ಲಿ ಯಮಾರಿಸುತ್ತಿರುವ ಆರ್‌ ಡಿ ಪಾಟೀಲ್

Date:

Advertisements
  • ರುದ್ರಗೌಡ ಪಾಟೀಲ್​ನ ಮೊಬೈಲ್ ಲೊಕೇಷನ್​ ಉತ್ತರ ಪ್ರದೇಶದಲ್ಲಿ ಪತ್ತೆ
  • ‘ಪೊಲೀಸರ ದಾರಿ ತಪ್ಪಿಸಲು ಉತ್ತರ ಪ್ರದೇಶಕ್ಕೆ ತನ್ನ ಫೋನ್ ಕಳುಹಿಸಿದ್ದಾನೆ’

ಕೆಇಎ ಪರೀಕ್ಷೆಯಲ್ಲಿ ಅಕ್ರಮ ಎಸಗಿ, ತಲೆ ಮರೆಸಿಕೊಂಡಿರುವ ಕಿಂಗ್‌ಪಿನ್ ರುದ್ರಗೌಡ ಪಾಟೀಲ್ (ಆರ್‌ ಡಿ ಪಾಟೀಲ್) ಪೊಲೀಸರನ್ನೇ ದಿನ ದಿನ ಸಿನೆಮಾ ಶೈಲಿಯಲ್ಲಿ ಯಮಾರಿಸುತ್ತಿದ್ದಾನೆ.

ನೆರೆಯ ಮಹಾರಾಷ್ಟ್ರ, ತೆಲಂಗಾಣ ಅಥವಾ ಉತ್ತರ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದಾನೆಂದು ಪೊಲೀಸರು ಊಹಿಸಿದ್ದರು. ಅದರಂತೆ ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ನ ಮೊಬೈಲ್ ಲೊಕೇಷನ್​ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.

ಆದರೆ, ಟವರ್ ಲೊಕೇಷನ್ ಜಾಡು ಹಿಡಿದು ಹೊರಟಿದ್ದ ಪೊಲೀಸರಿಗೆ ರುದ್ರಗೌಡ ಚಳ್ಳೇಹಣ್ಣು ತಿನ್ನಿಸಲು ತನ್ನ ಫೋನ್ ಬೇರೊಬ್ಬರಿಗೆ ನೀಡಿ ಉತ್ತರ ಪ್ರದೇಶಕ್ಕೆ ಕಳುಹಿಸಿ ತಾನು ಕಲಬುರಗಿಯಲ್ಲೇ ತಲೆಮರೆಸಿಕೊಂಡಿದ್ದಾನೆ. ರುದ್ರಗೌಡ ಪಾಟೀಲ್ ಕಲಬುರಗಿಯಲ್ಲೇ ಇದ್ದಾನೆ ಎಂದು ತಿಳಿದ ಬಳಿಕ ಪೊಲೀಸರು ಆತನನ್ನು ಬಂಧಿಸಲು ಬಂದಾಗ ಕಪೌಂಡ್ ಹಾರಿ ಎಸ್ಕೇಪ್ ಆಗಿದ್ದಾನೆ.

Advertisements

ಪಿಎಸ್‌ಐ ಪರೀಕ್ಷಾ ಅಕ್ರಮದಲ್ಲೂ ಹೀಗೆ ಸಿಐಡಿ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿಣ್ಣಿಸಿದ್ದ. ಕೊನೆಗೆ ಸಿನೆಮಾ ಶೈಲಿಯಲ್ಲಿ ಸಿಐಡಿ ಅಧಿಕಾರಿಗಳು ದಾಳಿ ಮಾಡಿ, ಸಾಕ್ಷಿ ಸಮೇತ ಬಂಧಿಸಿದ್ದರು. 11 ತಿಂಗಳು ಜೈಲಿನಲ್ಲಿದ್ದ ರುದ್ರಗೌಡ ಪಾಟೀಲ ಷರತ್ತುಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ.

ಪಿಎಸ್‌ಐ ಪ್ರಕರಣದಲ್ಲಿ ಪಾಠ ಕಲಿಯದ ರುದ್ರಗೌಡ ಪಾಟೀಲ್ ತನ್ನ ಹಳೆಯ ಚಾಲಿಯನ್ನೇ ಮುಂದುವರಿಸಿ, ಕಳೆದ ತಿಂಗಳ ಅಕ್ಟೋಬರ್ 28 ರಂದು ನಡೆದಿದ್ದ ಕೆಇಎ ಪರೀಕ್ಷೆಯಲ್ಲಿ ಅಕ್ರಮವೆಸಗಿದ್ದ. ಅಲ್ಲದೆ, ರುದ್ರಗೌಡ ಪಾಟೀಲ್ ಅನೇಕ ದಿನಗಳಿಂದ ಪೊಲೀಸರ ಕೈಗೆ ಸಿಗದೆ ಓಡಾಡಿಕೊಂಡಿದ್ದಾನೆ.

ನಾಲ್ಕು ವಿಶೇಷ ತಂಡಗಳು

ಆರೋಪಿ ರುದ್ರಗೌಡ ಪಾಟೀಲ್ ಬಂಧನಕ್ಕೆ ಹುಡುಕಾಟ ಮುಂದುವರೆದಿದೆ. ನಾಲ್ಕು ವಿಶೇಷ ತಂಡಗಳು ಕಲಬುರಗಿ ಜಿಲ್ಲೆಯ ವಿವಿಧಡೆ ಮತ್ತು ಮಹಾರಾಷ್ಟ್ರ ಹಲವೆಡೆ ಹುಡುಕಾಟ ನಡೆಸುತ್ತಿವೆ. ಮಹಾರಾಷ್ಟ್ರದ ಸೊಲ್ಹಾಪುರ, ಪುಣೆಯಲ್ಲಿ ರುದ್ರಗೌಡ ಅಡಗಿರುವ ಶಂಕೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X