₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ

Date:

Advertisements

“ಅಮೃತ್ ಭಾರತ ನಿಲ್ದಾಣ ಯೋಜನೆಯಡಿ ₹372.13 ಕೋಟಿ ವೆಚ್ಚದಲ್ಲಿ ರಾಷ್ಟ್ರವ್ಯಾಪಿ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು ಬೆಂಗಳೂರು ವಿಭಾಗದಲ್ಲಿ ಇತರ ಮೂಲಸೌಕರ್ಯ ಕಾಮಗಾರಿಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಜತೆಗೆ, ರಾಜ್ಯದ ನಾನಾ ಜಿಲ್ಲೆಗಳ, ತಾಲೂಕುಗಳ ರೈಲು ನಿಲ್ದಾಣ ಮೇಲ್ದರ್ಜೆಗೇರಿಸಲಾಗಿದೆ. ನೈಋತ್ಯ ವಲಯದ 15 ರೈಲು ನಿಲ್ದಾಣಗಳಿಗೆ ಸ್ಮಾರ್ಟ್​ ಟಚ್​ ನೀಡಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೂಪಿಸಿದ ಅಮೃತ್ ಭಾರತ್ ನಿಲ್ದಾಣ ಯೋಜನೆಯು ಭಾರತೀಯ ರೈಲ್ವೆ ಜಾಲದಾದ್ಯಂತ ರೈಲು ನಿಲ್ದಾಣಗಳನ್ನು ವರ್ಧಿಸಲು ಮತ್ತು ಅಧುನೀಕರಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯು ಪ್ರಸ್ತುತ ಭಾರತೀಯ ರೈಲ್ವೆ ವ್ಯವಸ್ಥೆಯಾದ್ಯಂತ ಒಟ್ಟು 1,275 ನಿಲ್ದಾಣಗಳನ್ನು ನವೀಕರಿಸಲು ಮತ್ತು ಆಧುನೀಕರಿಸಲು ಉದ್ದೇಶಿಸಿದೆ” ಎಂದು ಹೇಳಿದೆ.

“ಅಮೃತ್‌ ಭಾರತ್ ನಿಲ್ದಾಣ ಯೋಜನೆಯು ನಿಲ್ದಾಣಗಳ ನಿರಂತರ ಅಭಿವೃದ್ಧಿಗೆ ದೀರ್ಘಾವಧಿಯ ದೃಷ್ಟಿಕೋನವನ್ನು ಹೊಂದಿದೆ. ಇದು ನಿಲ್ದಾಣದ ನಾನಾ ಸೌಲಭ್ಯಗಳನ್ನು ಹೆಚ್ಚಿಸಲು ಮಾಸ್ಟರ್ ಪ್ಲಾನ್‌ಗಳನ್ನು ರಚಿಸುವುದು ಮತ್ತು ನಾನಾ ಹಂತಗಳಲ್ಲಿ ಅವುಗಳನ್ನು ಕಾರ್ಯಗತಗೊಳಿಸುವುದನ್ನು ಒಳಗೊಂಡಿದೆ” ಎಂದು ತಿಳಿಸಿದೆ.

Advertisements

ಮೊದಲ ಹಂತದಲ್ಲಿ, ಸುಲಭ ನಿಲ್ದಾಣದ ಪ್ರವೇಶ, ತಂಗುವ ಪ್ರದೇಶಗಳು, ಶೌಚಾಲಯ ಸೌಲಭ್ಯಗಳು, ಅಗತ್ಯವಿರುವಂತೆ ಲಿಫ್ಟ್‌ ಮತ್ತು ಎಸ್ಕಲೇಟರ್‌ ಸ್ಥಾಪನೆ, ಸ್ವಚ್ಛತೆ, ಉಚಿತ ವೈ-ಫೈ ನೀಡುವಿಕೆ, ‘ಒಂದು ನಿಲ್ಯಾಣ ಒಂದು ಉತ್ಪನ್ನ’ ದಂತಹ ಉಪಕ್ರಮಗಳ ಮೂಲಕ ಸ್ಥಳೀಯ ಉತ್ಪನ್ನಗಳಿಗೆ ಕಿಯೋಸ್ಕ್‌ಗಳನ್ನು ಸ್ಥಾಪಿಸುವುದು, ಪ್ರಯಾಣಿಕರ ಮಾಹಿತಿ ವ್ಯವಸ್ಥೆಗಳನ್ನು ಹೆಚ್ಚಿಸುವುದು, ಕಾರ್ಯನಿರ್ವಾಹಕ ಲಾಂಜ್‌ಗಳನ್ನು ಸ್ಥಾಪಿಸುವುದು, ವ್ಯಾಪಾರಕ್ಕೆ ಸ್ಥಳಗಳನ್ನು ಗೊತ್ತುಪಡಿಸುವುದು, ಭೂದೃಶ್ಯವನ್ನು ಸಂಯೋಜಿಸುವುದು ಮತ್ತು ಪ್ರತಿ ನಿಲ್ದಾಣದ ವಿಶಿಷ್ಟ ಅವಶ್ಯಕತೆಗಳನ್ನು ಪೂರೈಸುವುದು.

ಯೋಜನೆಯ ಎರಡನೇ ಹಂತವು, ನಿಲ್ಯಾಣದ ರಚನೆಗಳನ್ನು ನವೀಕರಿಸುವುದು, ಎರಡೂ ಬದಿಗಳಲ್ಲಿ ಸುತ್ತಮುತ್ತಲಿನ ನಗರ ಪ್ರದೇಶಗಳೊಂದಿಗೆ ನಿಲ್ದಾಣಗಳನ್ನು ಸಂಯೋಜಿಸುವುದು, ಮಲ್ಟಿ ಮೋಡಲ್ ಸಂಪರ್ಕವನ್ನು ಉತ್ತೇಜಿಸುವುದು, ವಿಕಲಾಂಗ ವ್ಯಕ್ತಿಗಳಿಗೆ (ದಿವ್ಯಾಂಗಜನರು) ಸುಸ್ಥಿರ ಮತ್ತು ಪರಿಸರ ಸ್ನೇಹಿ ಪರಿಹಾರಗಳನ್ನು ಅನುಷ್ಠಾನಗೊಳಿಸುವ ಸೌಲಭ್ಯಗಳನ್ನು ಒದಗಿಸುವುದು, ಬ್ಯಾಲೆಸ್ಟ್‌ ರಹಿತ ಟ್ರ್ಯಾಕ್‌ಗಳನ್ನು ಪರಿಚಯಿಸುವುದು, ಸಂಯೋಜಿಸುವುದು.

ಅಗತ್ಯವಿದ್ಯಾಗ ‘ರೂಫ್ ಪ್ಲಾಜಾಗಳು’, ಮತ್ತು ಸುಧಾರಣೆಗಳ ಕಾರ್ಯಸಾಧ್ಯತೆ ಮತ್ತು ಹಂತಗಳನ್ನು ಪರಿಗಣಿಸಿ. ದೀರ್ಘಾವಧಿಯಲ್ಲಿ ಈ ನಿಲ್ದಾಣಗಳನ್ನು ರೋಮಾಂಚಕ ನಗರ ಕೇಂದ್ರಗಳಾಗಿ ಪರಿವರ್ತಿಸುವುದು ಅಂತಿಮ ಗುರಿಯಾಗಿದೆ.

ಬೆಂಗಳೂರು ವಿಭಾಗದಲ್ಲಿ ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕೆಂಗೇರಿ, ಕೃಷ್ಣರಾಜಪುರಂ, ಕುಪ್ಪಂ, ಮಲ್ಲೇಶ್ವರಂ, ಮಾಲೂರು, ಮಂಡ್ಯ, ರಾಮನಗರ, ತುಮಕೂರು, ವೈಟ್‌ಫೀಲ್ಡ್ ಸೇರಿದಂತೆ ಒಟ್ಟು 15 ನಿಲ್ದಾಣಗಳನ್ನು ಅಮೃತ್ ನಿಲ್ದಾಣ ಯೋಜನೆಯಡಿಯಲ್ಲಿ ಪುನರಾಭಿವೃದ್ಧಿಗಾಗಿ ಗುರುತಿಸಲಾಗಿದೆ.

“ಲೆವೆಲ್ ಕ್ರಾಸಿಂಗ್ 54 ರ ಬದಲಾಗಿ ರಸ್ತೆ ಕೆಳ ಸೇತುವೆಯ, ಚನ್ನಪಟ್ಟಣ-ಸೆಟ್ಟಿಹಳ್ಳಿ ನಿಲ್ದಾಣಗಳ ನಡುವಿನ ಕೋಳೂರು ಗೇಟ್ ಬಳಿ ಬೆಂಗಳೂರು-ಮಂಡ್ಯ ವಿಭಾಗದಲ್ಲಿ ಲೆವೆಲ್ ಕ್ರಾಸಿಂಗ್ 54 ರ ಬದಲಾಗಿ ರಸ್ತೆ ಕೆಳ ಸೇತುವೆಯ ಕಾಮಗಾರಿ ಪೂರ್ಣಗೊಂಡಿದೆ. ಯಲಹಂಕ ಧರ್ಮಾವರಂ ವಿಭಾಗದಲ್ಲಿ ಮಕ್ಕಾಜಿಪಲ್ಲಿ ನಾಗಸಮುದ್ರಂ ನಡುವಿನ ಚಿನ್ನಕೊತ್ತಪಲ್ಲಿಯಲ್ಲಿ ಲೆವೆಲ್ ಕ್ರಾಸಿಂಗ್ ನಂ.97 ರ ಬದಲಾಗಿ ರಸ್ತೆ ಕೆಳ ಸೇತುವೆಯ ಕಾಮಗಾರಿ ಪೂರ್ಣಗೊಂಡಿದೆ. ಬೆಂಗಳೂರು ಪೂರ್ವ ನಿಲ್ದಾಣದ ಬಳಿಯ ಪಾಟರಿ ಟೌನ್‌ನಲ್ಲಿ ನಂ.349 ರಲ್ಲಿ ರಸ್ತೆ ಮೇಲೇತುವೆ (ಮಸೀದಿ ರಸ್ತೆ ರಸ್ತೆ ಮೇಲೇತುವೆ) ಕಾಮಗಾರಿ ಪೂರ್ಣಗೊಂಡಿದೆ. ಲೆವೆಲ್ ಕ್ರಾಸಿಂಗ್ ನಂ.166 ರಲ್ಲಿ ರೋಡ್ ಓವರ್ ಬ್ರಿಡ್ಜ್ ನಿರ್ಮಾಣದ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು” ಎಂದು ಹೇಳಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರುವರಿ 26 ರಂದು ನಿರ್ಮಿಸಲು ಉದ್ದೇಶಿಸಿರುವ ಮೇಲಿನ ನಿಲ್ದಾಣಗಳ ಮರು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ವೀಡಿಯೋ ಲಿಂಕ್ ಮೂಲಕ ಪೂರ್ಣಗೊಂಡು ಕಾರ್ಯಾರಂಭಕ್ಕೆ ಸಿದ್ಧವಾಗಿರುವ ರಸ್ತೆ ಮೇಲ್ಸೆತುವೆಗಳು ಮತ್ತು ರಸ್ತೆ ಕಳಸೇತುವೆಗಳಿಗೆ ಬೆಳಿಗ್ಗೆ 10:45ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆನೇಕಲ್ | ನೀಲಗಿರಿ ತೋಪಿನಲ್ಲಿ ವಿದ್ಯಾರ್ಥಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಪತ್ತೆ

ಅಮೃತ ಭಾರತ ನಿಲ್ದಾಣ ಯೋಜನೆಯಡಿ ಮೇಲ್ದರ್ಜೆಗೇರಿದ/ ಏರುವ ರಾಜ್ಯದ ನಿಲ್ದಾಣಗಳು

ಆಲಮಟ್ಟಿ, ಅಳ್ನಾವರ, ಅರಸೀಕೆರೆ ಜಂಕ್ಷನ್, ಬಾದಾಮಿ, ಬಾಗಲಕೋಟ, ಬಳ್ಳಾರಿ, ಬೆಂಗಳೂರು ಕಂಟೋನ್ಮೆಂಟ್, ಬಂಗಾರಪೇಟೆ, ಬಂಟವಾಳ, ಬೆಳಗಾವಿ, ಬೀದರ್, ವಿಜಯಪುರ, ಚಾಮರಾಜ ನಗರ, ಚನ್ನಪಟ್ಟಣ, ಚನ್ನಸಂದ್ರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ದೊಡ್ಡಬಳ್ಳಾಪುರ, ಗದಗ, ಗಂಗಾಪುರ ರಸ್ತೆ, ಘಟಪ್ರಭಾ, ಗೋಕಾಕ್ ರೋಡ್,  ಹರಿಹರ, ಹಾಸನ, ಹೊಸಪೇಟೆ, ಕಲಬುರಗಿ, ಕೆಂಗೇರಿ, ಕೊಪ್ಪಳ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಬೆಂಗಳೂರು), ಕೃಷ್ಣರಾಜಪುರ, ಮಲ್ಲೇಶ್ವರಂ, ಮಾಲೂರು, ಮಂಡ್ಯ, ಮಂಗಳೂರು ಸೆಂಟ್ರಲ್, ಮಂಗಳೂರು ಜಂ., ಮುನಿರಾಬಾದ್, ಮೈಸೂರು, ರಾಯಚೂರು, ರಾಮನಗರ, ರಾಣಿಬೆನ್ನೂರು, ಸಾಗರ ಜಂಬಗಾರು, ಸಕಲೇಶಪುರ, ಶಹಾಬಾದ್, ಶಿವಮೊಗ್ಗ ಟೌನ್, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂ, ಸುಬ್ರಹ್ಮಣ್ಯ ರೋಡ್, ತಾಳಗುಪ್ಪ, ತಿಪಟೂರು, ತುಮಕೂರು, ವಾಡಿ, ವೈಟ್‌ಫೀಲ್ಡ್, ಯಾದಗಿರಿ, ಯಶವಂತಪುರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X