ಚೆಕ್ ಬೌನ್ಸ್ ಪ್ರಕರಣ: ಸಚಿವ ಮಧು ಬಂಗಾರಪ್ಪಗೆ 6 ಕೋಟಿ ರೂ. ದಂಡ ವಿಧಿಸಿದ ನ್ಯಾಯಾಲಯ

Date:

ಸುಮಾರು 12 ವರ್ಷಗಳ ಹಿಂದಿನ ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಕರ್ನಾಟಕದ ಜನಪ್ರತಿನಿಧಿ ನ್ಯಾಯಾಲಯ 6 ಕೋಟಿ 96 ಲಕ್ಷದ 70 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದೆ.

- Advertisement -

ದಂಡ ಪಾವತಿಸಲು ವಿಫಲರಾದಲ್ಲಿ 6 ತಿಂಗಳುಗಳ ಸೆರೆವಾಸ ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮಧು ಬಂಗಾರಪ್ಪ ಅವರು 6 ಕೋಟಿ, 96 ಲಕ್ಷದ 70 ಸಾವಿರ ರೂ.ಗಳನ್ನು ದಂಡವನ್ನಾಗಿ ಕಟ್ಟಬೇಕು. ಅದರಲ್ಲಿ ಅವರು 6 ಕೋಟಿ, 96 ಲಕ್ಷದ, 60 ಸಾವಿರ ರೂ.ಗಳನ್ನು ಫಿರ್ಯಾದುದಾರರಾದ ರಾಜೇಶ್ ಎಕ್ಸ್ ಪೋರ್ಟ್ಸ್ ಅವರಿಗೆ ನೀಡಬೇಕು. ಉಳಿದ 10 ಸಾವಿರ ರೂ.ಗಳನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಕಟ್ಟಬೇಕು ಎಂದು ಹೇಳಿದೆ. ಈ ಎಲ್ಲ ಪ್ರಕ್ರಿಯೆಗಳಿಗೆ ತಪ್ಪಿದರೆ 6 ತಿಂಗಳ ಕಾರಾಗೃಹ ವಾಸವನ್ನು ಅನುಭವಿಸಬೇಕು ಎಂದು ಹೇಳಿದೆ.

ತೀರ್ಪು ಪ್ರಕಟಿಸಿದ ಜನಪ್ರತಿನಿಧಿ ನ್ಯಾಯಾಲಯ, ಇದರ ನಡುವೆಯೇ, ಮಧು ಬಂಗಾರಪ್ಪನವರು ಕೋರ್ಟ್ ನಲ್ಲಿ ಮುಚ್ಚಳಕೆಯೊಂದನ್ನು ಸಲ್ಲಿಸಿದರು. ಸದ್ಯಕ್ಕೆ 50 ಲಕ್ಷ ರೂ. ಗಳನ್ನು ಈಗ ಫಿರ್ಯಾದುದಾರರಿಗೆ ಪಾವತಿಸಿ, ಉಳಿದ 6 ಕೋಟಿ, 10 ಸಾವಿರ ರೂಗಳನ್ನು ಜ. 30ರೊಳಗೆ ಕೊಡುವುದಾಗಿ ಅದರಲ್ಲಿ ತಿಳಿಸಿದ್ದರು. ಆದರೆ, ಅದನ್ನು ನ್ಯಾಯಾಲಯ ಒಪ್ಪಿಕೊಳ್ಳಲಿಲ್ಲ. ಈ ಹಿಂದೆಯೂ ಇಂಥದ್ದೇ ಮುಚ್ಚಳಿಕೆಯನ್ನು ಬರೆದುಕೊಟ್ಟು ಅದನ್ನು ಮಧು ಬಂಗಾರಪ್ಪನವರು ಪಾಲಿಸಿಲ್ಲ. ಹಾಗಾಗಿ, ಈ ಬಾರಿ ಮುಚ್ಚಳಿಕೆಯನ್ನು ಒಪ್ಪಲಾಗದು ಎಂದು ಹೇಳಿದ ನ್ಯಾಯಾಧೀಶರು, ದಂಡ ವಿಧಿಸಿ ಆದೇಶ ಹೊರಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

2011ರಲ್ಲಿ ದಾಖಲಾಗಿದ್ದ ಪ್ರಕರಣವಾಗಿದ್ದು ಮಧು ಬಂಗಾರಪ್ಪನವರು ಅವರೇ ಸ್ಥಾಪಿಸಿದ್ದ ಆಕಾಶ್ ಆಡಿಯೋ ಸಂಸ್ಥೆಯಲ್ಲಿ ಅವರೇ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಆ ಸಂಸ್ಥೆಯಿಂದ ರಾಜೇಶ್ ಎಕ್ಸ್’ಪೋರ್ಟ್ಸ್ ಎಂಬುವವರಿಗೆ 6 ಕೋಟಿ, 96 ಲಕ್ಷದ 60 ಸಾವಿರ ರೂ. ಸಂದಾಯ ಮಾಡಬೇಕಾಗಿತ್ತು. ಹಲವಾರು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಹಣಕ್ಕೆ ಮಧು ಬಂಗಾರಪ್ಪನವರು ಚೆಕ್ ನೀಡಿದ್ದರು. ಆದರೆ, ಅದು ಬೌನ್ಸ್ ಆಗಿತ್ತು. ಇದರಿಂದ, ರಾಜೇಶ್ ಎಕ್ಸ್ ಪೋರ್ಟ್ಸ್ ಸಂಸ್ಥೆ ಮಧು ಬಂಗಾರಪ್ಪ ವಿರುದ್ಧ ಪ್ರಕರಣ ದಾಖಲಿಸಿತ್ತು. ಅಂದಿನಿಂದ ವಿಚಾರಣೆ ನಡೆಯುತ್ತಿದ್ದ ಪ್ರಕರಣಕ್ಕೆ ಈಗ ತೀರ್ಪು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ‌ 2 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಹಲವಾರು ತಾಲೂಕುಗಳು ಬರದ ಪರಿಸ್ಥಿತಿ ಎದುರಿಸುತ್ತಿವೆ....

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...

ಸ್ತಬ್ಧ ಚಿತ್ರ ಮಾತಾಡಿದಂತೆ, ಶಬ್ದ ಕಣ್ಣಿಗೆ ಕಾಣಿಸುವಂತೆ- ಸಿನೆಮಾದ ತೆರೆಮರೆಯ ತಾತ್ವಿಕತೆ

ಆಫ್-ಸ್ಕ್ರೀನ್ ಶಬ್ದ ಸಿನೆಮಾದ ಕೇವಲ ತಾಂತ್ರಿಕ ಕುಶಲತೆಯಾಗಿರದೆ, ಅದರ ತಾತ್ವಿಕ ದೃಷ್ಟಿಕೋನವನ್ನೇ...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ...