ರಸ್ತೆ ಸುರಕ್ಷತಾ ಅಭಿಯಾನ | 1.5 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಸಂಚಾರ ಪೊಲೀಸರು

Date:

Advertisements

ಸುರಕ್ಷಿತ ಹೆಲ್ಮೆಟ್ ಧರಿಸುವಿಕೆ ಮತ್ತು ಸೀಟ್ ಬೆಲ್ಟ್ ಬಳಕೆ, ಪಾದಚಾರಿ ಸುರಕ್ಷತೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು 1.5 ಲಕ್ಷ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಅಭಿಯಾನದ ಮುಖಾಂತರ ತರಬೇತಿ ನೀಡಿದ್ದಾರೆ.

ಸ್ಟೂಡೆಂಟ್ಸ್ ಅಸೋಸಿಯೇಷನ್ ​​ಫಾರ್ ರೋಡ್ ಸೇಫ್ಟಿ (ಎಸ್‌ಎಆರ್‌ಎಸ್‌) ಕಾರ್ಯಕ್ರಮದ ಅಡಿಯಲ್ಲಿ ಒಂದು ವಾರದ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಬೆಂಗಳೂರು ಸಂಚಾರ ಪೊಲೀಸರು 1.5 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

ಐದು ದಿನಗಳಲ್ಲಿ 1 ಲಕ್ಷ ವಿದ್ಯಾರ್ಥಿಗಳನ್ನು ತಲುಪುವ ಗುರಿ ಹೊಂದಿದ್ದ  ಕಾರ್ಯಕ್ರಮವು ಸುರಕ್ಷಿತ ರಸ್ತೆ ಶಿಷ್ಟಾಚಾರ ಮತ್ತು ಸಂಚಾರ ನಿಯಮಗಳನ್ನು ಪಾಲಿಸುವುದರ ಮಹತ್ವದ ಬಗ್ಗೆ ಅರಿವು ನೀಡಿದೆ.

Advertisements

ಜೂನ್ 24 ರಿಂದ 28ರವರೆಗೆ ನಡೆಸಲಾದ ಅಭಿಯಾನವು ಸಂವಾದ, ಕಾರ್ಯಾಗಾರಗಳು ಮತ್ತು ಪ್ರಾಯೋಗಿಕ ಪ್ರದರ್ಶನಗಳ ಮೂಲಕ 566 ಶಿಕ್ಷಣ ಸಂಸ್ಥೆಗಳ 1.5 ಲಕ್ಷ ವಿದ್ಯಾರ್ಥಿಗಳನ್ನು ತಲುಪಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮುಕ್ತಾಯ ಹಂತದಲ್ಲಿರುವ ಕಾವೇರಿ 5ನೇ ಹಂತದ ಯೋಜನೆ; ಮುಂದೇನು?

ಸುರಕ್ಷಿತ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಬಳಕೆ, ಪಾದಚಾರಿ ಸುರಕ್ಷತೆ, ಅಪಾಯಕಾರಿ ಚಾಲನೆ ಹಾಗೂ ಜೀಬ್ರಾ ಕ್ರಾಸಿಂಗ್‌ಗಳ ಸರಿಯಾದ ಬಳಕೆ ಮತ್ತು ಟ್ರಾಫಿಕ್ ಸಿಗ್ನಲ್‌ಗಳನ್ನು ಆರ್ಥಮಾಡಿಕೊಳ್ಳುವುದರ ಬಗ್ಗೆ ಕಾರ್ಯಕ್ರಮಳಲ್ಲಿ ವಿವರಿಸಲಾಗಿದೆ. ಅನುಭವಿ ಟ್ರಾಫಿಕ್ ಅಧಿಕಾರಿಗಳು ಪ್ರಸ್ತುತಿಗಳು ಮತ್ತು ಪ್ರಾಯೋಗಿಕ ಪ್ರದರ್ಶನಗಳನ್ನು ನಡೆಸಿದ್ದಾರೆ.

ಹಲವಾರು ರಸ್ತೆ ಅಪಘಾತಗಳಲ್ಲಿ ಯುವ ಪಾದಚಾರಿಗಳು, ಸೈಕ್ಲಿಸ್ಟ್ಗಳು ಮತ್ತು ಬೈಕ್‌ ಸವಾರರು ಹೆಚ್ಚು ತುತ್ತಾಗಿರುವ ಕಾರಣ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X