ಬೆಂಗಳೂರು | ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ: ಬಿಎಂಆರ್‌ಸಿಎಲ್‌

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, “ಮುಂದೆ ಇಂತಹ ಘಟನೆಗಳು ನಡೆಯದಿರಲು ಹಾಗೂ ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸೇವೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಸಿಬ್ಬಂದಿ ಯಾವಾಗಲು ಸಿದ್ಧರಾಗಿದ್ದಾರೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆ” ಎಂದು ಎಂದು ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, “ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರಿಗೆ ಸಹಾಯ ಮಾಡಲು ನಮ್ಮ ಮೆಟ್ರೋ ಸಿದ್ಧವಾಗಿದೆ. ಭದ್ರತಾ ಸಿಬ್ಬಂದಿಯು ಯಾವಾಗಲೂ ಜಾಗರೂಕರಾಗಿದ್ದು, ತುರ್ತು ಸಂದರ್ಭದಲ್ಲಿ ಯಾವುದೇ ಸಹಾಯಕ್ಕಾಗಿ ಸಿದ್ಧರಾಗಿರುತ್ತಾರೆ. ಪ್ರಯಾಣಿಕರು ನಿಯಂತ್ರಣ ಕೇಂದ್ರವನ್ನು ದೂರವಾಣಿ ಸಂಖ್ಯೆ 080 2519 1208, 080 2216 2258 / 2208 ಮತ್ತು ಟೋಲ್ ಫ್ರೀ ಸಹಾಯವಾಣಿ 1800-425-12345ಗೆ ಸಂಪರ್ಕಿಸಬಹುದು” ಎಂದು ತಿಳಿಸಿದೆ.

“ಹೆಚ್ಚುವರಿಯಾಗಿ, ತುರ್ತು ಸಮಯದಲ್ಲಿ ಪ್ರಯಾಣಿಕರು ಸಹಾಯ ಪಡೆಯಲು ಎಲ್ಲ ಮೆಟ್ರೋ ಬೋಗಿಯಲ್ಲಿ (ಪ್ರತಿ ಬೋಗಿಯಲ್ಲಿ-4) ಅಳವಡಿಸಿರುವ ತುರ್ತು ಎಚ್ಚರಿಕೆ (Passenger Emergency Alarm) ವ್ಯವಸ್ಥೆಯನ್ನು ಬಳಸಿ, ರೈಲು ನಿರ್ವಾಹಕರೊಂದಿಗೆ ಸಂವಹನ ನಡೆಸಬಹುದು. ಇದರಿಂದಾಗಿ, ಸಮೀಪಿಸುತ್ತಿರುವ ಅಥವಾ ಮುಂದಿನ ನಿಲ್ದಾಣದಲ್ಲಿ ಸಹಾಯ ಒದಗಿಸಲು ಅನುಕೂಲವಾಗುತ್ತದೆ” ಎಂದು ಹೇಳಿದೆ.

Advertisements

“ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ, ನಿಯಂತ್ರಣ ಕೇಂದ್ರದ ದೂರವಾಣಿ ಸಂಖ್ಯೆಗಳು ಮತ್ತು ಪ್ಯಾಸೆಂಜ‌ರ್ ಎಮರ್ಜೆನ್ಸಿ ಅಲಾರ್ಮ್ (Passenger Emergency Alarm) ವ್ಯವಸ್ಥೆಯನ್ನು ಸಾರ್ವಜನಿಕರು ಬಳಸಿಕ್ಕೊಳ್ಳಬೇಕು” ಎಂದು ತಿಳಿಸಿದೆ.

ಡಿ.7 ರಂದು ಮುಂಜಾನೆ 9.40 ಗಂಟೆಗೆ ರಾಜಾಜಿನಗರದಿಂದ ಎಂ.ಜಿ ರಸ್ತೆ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಒಬ್ಬ ಮಹಿಳಾ ಪ್ರಯಾಣಿಕರು, ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಲ್ಲಿ ರೈಲಿನಿಂದ ಹೊರ ಬರುವ ಸಂದರ್ಭದಲ್ಲಿ ಓರ್ವ ವ್ಯಕ್ತಿ ದೌರ್ಜನ್ಯ ಎಸಗಿದ್ದಾನೆ ಎಂದು ಭದ್ರತಾ ಸಿಬ್ಬಂದಿಯ ಸಹಾಯ ಕೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎರಡಂತಸ್ತಿನ ಕಟ್ಟಡ ಜತೆಗೆ ಧರೆಗುರುಳಿದ ಮೊಬೈಲ್ ಟವರ್

ಕೂಡಲೇ ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ಹಿಡಿದು ಸಮೀಪದ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಅಲ್ಲದೆ, ಆಕೆಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಕೂಡ ಸಹಾಯ ಮಾಡಿದ್ದಾರೆ.

ಈ ಹಿಂದೆ, 2023ರ ಏಪ್ರಿಲ್‌ನಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನಿಂದ 20 ಮೊಬೈಲ್ ಫೋನ್ ಗಳು ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಜಾಮೀನಿನ ಮೇಲೆ ಹೊರಬಂದಿದ್ದಾನೆ ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X