ವರ್ಗಾವಣೆ ನಂತರ ಎನ್‌ಒಸಿ ಮತ್ತು ಎಲ್‌ಪಿಸಿ ಪಡೆಯದ ಪೊಲೀಸ್ ಅಧಿಕಾರಿ ಸಂಬಳ ಕಟ್

Date:

Advertisements

“ವರ್ಗಾವಣೆ ನಂತರ ಕೆಲಸಕ್ಕೆ ಸೇರುವ ಅಧಿಕಾರಿಗಳು ಕಡ್ಡಾಯವಾಗಿ ಎನ್‌ಒಸಿ (NOC) ಮತ್ತು ಎಲ್‌ಪಿಸಿ (LPC) ಪಡೆಯಬೇಕು. ಇಲ್ಲದಿದ್ದರೇ, ಅಂತಹವರ ಸಂಬಳ ಕಟ್ ಮಾಡಲಾಗುವುದು” ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ನಂತರ ಮನಬಂದಂತೆ ವರ್ತನೆ ತೋರುತ್ತಿದ್ದ ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಬಿಸಿ ಮುಟ್ಟಿಸಿದ್ದಾರೆ. ಆಯುಕ್ತರು ನಗರದಲ್ಲಿರುವ ಪ್ರತಿ ಠಾಣೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದಾಗ ಪೊಲೀಸರ ಕಳ್ಳಾಟ ಬಯಲಾಗಿದೆ. ಈ ಹಿನ್ನೆಲೆ, ನಿಯಮಗಳನ್ನು ಪಾಲನೆ ಮಾಡುವಂತೆ ಆಯುಕ್ತರು ಆದೇಶಿಸಿದ್ದಾರೆ.

ಪೊಲೀಸ್ ಅಧಿಕಾರಿ ತಮ್ಮ ವರ್ಗಾವಣೆ ನಂತರ ಕಡ್ಡಾಯವಾಗಿ ಎನ್‌ಓಸಿ (ನೋ ಅಬ್ಜಕ್ಷನ್ ಸರ್ಟಿಫಿಕೇಟ್) ಮತ್ತು ಎಲ್‌ಪಿಸಿ (ಲಾಸ್ಟ್ ಪೇ ಸರ್ಟಿಫಿಕೇಟ್) ಪಡೆಯಬೇಕು. ಪಡೆಯದೆ ಇದ್ದವರಿಗೆ ಸಂಬಳ ಕಟ್ ಮಾಡಲು ಆದೇಶ ಜಾರಿ ಮಾಡಿದ್ದಾರೆ.

Advertisements

ಪೊಲೀಸ್ ಇಲಾಖೆಯ ಇನ್ಸ್‌ಪೆಕ್ಟರ್, ಸಬ್‌ ಇನ್ಸಪೆಕ್ಟರ್ ಹಾಗೂ ಸಿಬ್ಬಂದಿ ಎನ್‌ಒಸಿ ಮತ್ತು ಎಲ್‌ಪಿಸಿ ಕಡ್ಡಾಯಗೊಳಿಸಲಾಗಿದ್ದು, ವರ್ಗಾವಣೆಗೊಳ್ಳುತ್ತಿದ್ದಂತೆ ಆಯಾ ಠಾಣಾಧಿಕಾರಿಗೆ ರಿವಾಲ್ವರ್, ವಾಕಿಟಾಕಿ, ಕೇಸ್ ಫೈಲ್, ಸಿಮ್ ಸೇರಿದಂತೆ ಎಲ್ಲವನ್ನು ಹ್ಯಾಂಡ್ ಓವರ್ ಮಾಡಬೇಕು. ಇವೆಲ್ಲವನ್ನು ಟೇಕ್ ಓವರ್ ಮಾಡಿಕೊಳ್ಳುವವರು ಸಂಪೂರ್ಣವಾಗಿ ಪರಿಶೀಲನೆ ಮಾಡಬೇಕು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಬಂಧನ

ಇದೆಲ್ಲವನ್ನೂ ವರ್ಗಾಯಿಸಿದ ನಂತರ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳಿಂದ ಎನ್‌ಒಸಿ ಮತ್ತು ಎಲ್‌ಪಿಸಿ ಪಡೆಯಬೇಕು ಎಂದು ಎಚ್ಚರಿಕೆ ನೀಡಲಾಗಿದೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X