ಸಂಕ್ರಾಂತಿ ಹಬ್ಬ | ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದ ಕೆಎಸ್‌ಆರ್‌ಟಿಸಿ: ಖಾಸಗಿ ಬಸ್ ದರ ದುಪ್ಪಟ್ಟು

Date:

Advertisements

ಸಂಕ್ರಾಂತಿ ಹಬ್ಬದ ಹಿನ್ನೆಲೆ, ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿರುವ ಜನರಿಗೆ ಅನುಕೂಲವಾಗಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 400 ಬಸ್‌ಗಳ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ.

ಹಬ್ಬದ ಹಿನ್ನೆಲೆ, ಸಂಭ್ರಮಾಚರಣೆ ಮಾಡಲು ಜನರು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಜನ ಕಾಯುತ್ತಿದ್ದಾರೆ. ಅಲ್ಲದೇ ಕೆಲವು ಊರುಗಳಿಗೆ ತೆರಳುವ ಬಸ್‌ಗಳು ಕೂಡ ತುಂಬಿದ್ದು, ಜನರು ಆರಾಮವಾಗಿ ಪ್ರಯಾಣ ಬೆಳೆಸಲು ತೊಂದರೆ ಉಂಟಾಗಿದೆ.

ಕೆಎಸ್‌ಆರ್‌ಟಿಸಿ ಶಿವಮೊಗ್ಗ, ಬೆಂಗಳೂರು, ಉಡುಪಿ, ಬಳ್ಳಾರಿ, ಬೆಳಗಾವಿ ಕಡೆಗೆ ಹೆಚ್ಚಿನ ಜನ ಪ್ರಯಾಣಿಸುತ್ತಿದ್ದು, ಬಸ್‌ ವ್ಯವಸ್ಥೆ ಮಾಡಲಾಗಿದೆ.

Advertisements

ಖಾಸಗಿ ಬಸ್‌ಗಳ ದುಪ್ಪಟ್ಟು ದರ

ಹಬ್ಬ-ಹರಿದಿನ ಹಾಗೂ ರಜಾ ದಿನಗಳನ್ನು ಬಂಡವಾಳ ಮಾಡಿಕೊಂಡ ಖಾಸಗಿ ಬಸ್‌ಗಳು ದುಪ್ಪಟ್ಟು ದರ ನಿಗದಿ ಮಾಡಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ.

ಈ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಜನವರಿ 15ರಂದು ರಜೆ ಇದೆ. ಜನವರಿ 14 ರಂದು ರವಿವಾರ ರಜೆಯಿದೆ. ಇನ್ನು ಜನವರಿ 13ರಂದು ತಾರೀಕು ಎರಡನೇ ಶನಿವಾರದ ಹಿನ್ನೆಲೆ ರಜೆಯಿದೆ. ಮೂರು ದಿನ ರಜೆ ಸಿಕ್ಕ ಹಿನ್ನೆಲೆ, ಜನರು ತಮ್ಮ ಊರುಗಳತ್ತ ತೆರಳುತ್ತಿದ್ದಾರೆ.

ಆದರೆ, ಖಾಸಗಿ ಬಸ್‌ಗಳ ದರ ದುಪ್ಪಟ್ಟಿದ್ದು, ಇದರಿಂದ ಜನರು ಪರದಾಡುವಂತಾಗಿದೆ. ಸಾಮಾನ್ಯ ದಿನಗಳಲ್ಲಿ ₹400 ರಿಂದ ₹700 ವರೆಗೂ ಇರುವ ಖಾಸಗಿ ಬಸ್‌ ಟಿಕೆಟ್‌ ದರ ಹಬ್ಬ ಹರಿದಿನ ಅಥವಾ ರಜಾದಿನ ಬಂದರೆ ₹1500 ರಿಂದ ₹3000ವರೆಗೂ ದರ ಇದೆ.

ಈ ಸುದ್ದಿ ಓದಿದ್ದೀರಾ? ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಗಾಯಕಿ ಪ್ರಭಾ ಅತ್ರೆ ನಿಧನ

ಬೆಂಗಳೂರು-ಶಿವಮೊಗ್ಗ ಖಾಸಗಿ ಬಸ್ ದರ ₹1,000-₹1,250 ಇದೆ. ಬೆಂಗಳೂರು-ಹುಬ್ಬಳಿ ₹1,700-₹2,500, ಬೆಂಗಳೂರು-ಮಂಗಳೂರು ₹1,300-₹2,000, ಬೆಂಗಳೂರು-ಕಲಬುರುಗಿ ₹1,600-₹2200, ಬೆಂಗಳೂರು-ಮಡಿಕೇರಿ ₹1,150-₹1,600, ಬೆಂಗಳೂರು-ಧಾರವಾಡ ₹1,200-₹1,550, ಬೆಂಗಳೂರು-ಬೆಳಗಾವಿ ₹1,300-₹1,800, ಬೆಂಗಳೂರು–ಚಿಕ್ಕಮಗಳೂರು ₹1,100-₹1,300, ಬೆಂಗಳೂರು–ಬೀದರ್ ₹1,600-₹2,000 ದರ ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X