ಮೇ 31ರವರೆಗೆ ಬೆಂಗಳೂರಿಗೆ ಬರುವ ಕೆಲವು ರೈಲುಗಳು ರದ್ದು; ವಿವರ ಇಲ್ಲಿದೆ!

Date:

Advertisements

ಬೈಯಪ್ಪನಹಳ್ಳಿ ವೆಸ್ಟ್ ಕ್ಯಾಬಿನ್ ಮತ್ತು ಬೈಯಪ್ಪನಹಳ್ಳಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ ವಾರ್ಷಿಕ ಕೇಬಲ್ ಮೇಗರಿಂಗ್ ನಿರ್ವಹಣೆ ಕಾಮಗಾರಿ ನಡೆಯುತ್ತಿರುವುದರಿಂದ ಮೇ 29ರಂದು ಮೂರು ಮೆಮು ರೈಲುಗಳು ರದ್ದುಗೊಳ್ಳಲಿದ್ದು, ಎಂಟು ಮೆಮು ರೈಲುಗಳು ಭಾಗಶಃ ರದ್ದಾಗಲಿವೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಜತೆಗೆ, ಭಟ್ಕಳ ನಿಲ್ದಾಣದಲ್ಲಿ ಮೇ 29 ರಿಂದ 31 ರವರೆಗೆ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವುದರಿಂದ ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಕೊಂಕಣ ರೈಲ್ವೆಯು ಮಾಹಿತಿ ನೀಡಿದೆ.

3 ವಿಶೇಷ ಮೆಮು ರೈಲುಗಳು ರದ್ದು

Advertisements

ರೈಲು ಸಂಖ್ಯೆ 01766 ವೈಟ್‌ಫೀಲ್ಡ್‌ – ಕೆಎಸ್ಆರ್ ಬೆಂಗಳೂರು, 06561 ಕೆಎಸ್ಆರ್ ಬೆಂಗಳೂರು-ವೈಟ್‌ಫೀಲ್ಡ್ ಮತ್ತು 01773 ಬಂಗಾರಪೇಟ್-ಕೆಎಸ್ಆರ್ ಬೆಂಗಳೂರು ವಿಶೇಷ ಮೆಮು ರೈಲುಗಳು ಮೇ 29 ರಂದು ತಾತ್ಕಾಲಿಕವಾಗಿ ರದ್ದಾಗಲಿದೆ.

8 ವಿಶೇಷ ಮೆಮು ರೈಲುಗಳು ಭಾಗಶಃ ರದ್ದು

  • (ರೈಲು ಸಂಖ್ಯೆ 06389) ಕೆಎಸ್ಆರ್ ಬೆಂಗಳೂರು-ಬಂಗಾರಪೇಟೆ ವಿಶೇಷ ಮೆಮು ರೈಲು ಕೆಎಸ್ಆರ್ ಬೆಂಗಳೂರು-ವೈಟ್ ಫೀಲ್ಡ್ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
  • (ರೈಲು ಸಂಖ್ಯೆ 06535/06536) ಚಿಕ್ಕಬಳ್ಳಾಪುರ- ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ ವಿಶೇಷ ಮೆಮು ರೈಲು ಯಲಹಂಕ-ಬೆಂಗಳೂರು ಕಂಟೋನ್ಮೆಂಟ್ ನಡುವೆ ಭಾಗಶಃ ರದ್ದಾಗಲಿದೆ.
  • (ರೈಲು ಸಂಖ್ಯೆ 01776/01775) ಮಾರಿಕುಪ್ಪಂ-ಕೆಎಸ್ಆರ್ ಬೆಂಗಳೂರು-ಮಾರಿಕುಪ್ಪಂ ವಿಶೇಷ ಮೆಮು ರೈಲು ಕೃಷ್ಣರಾಜಪುರಂ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
  • (ರೈಲು ಸಂಖ್ಯೆ 01793/01794) ಮಾರಿಕುಪ್ಪಂ-ಕೃಷ್ಣರಾಜಪುರಂ-ಮಾರಿಕುಪ್ಪಂ ವಿಶೇಷ ಮೆಮು ರೈಲು ಬಂಗಾರಪೇಟೆ-ಕೃಷ್ಣರಾಜಪುರಂ ನಡುವೆ ಭಾಗಶಃ ರದ್ದಾಗಲಿದೆ.
  • (ರೈಲು ಸಂಖ್ಯೆ 06529) ಕೆಎಸ್ಆರ್ ಬೆಂಗಳೂರು-ಕುಪ್ಪಂ ವಿಶೇಷ ಮೆಮು ರೈಲು ಕೆಎಸ್ ಆರ್ ಬೆಂಗಳೂರು-ಕೃಷ್ಣರಾಜಪುರಂ ನಡುವೆ ಬಾಗಶಃ ರದ್ದಾಗಲಿದೆ.

ಈ ಸುದ್ದಿ ಓದಿದ್ದೀರಾ? ಪ್ರಭಾಸ್‌ ಅಭಿನಯದ ‘ಕಲ್ಕಿ 2898 ಎಡಿ’ ಏಕಕಾಲದಲ್ಲೇ ಮೂರು ‘ಒಟಿಟಿ’ಗಳಿಗೆ ಮಾರಾಟ

ರೈಲುಗಳ ಭಾಗಶಃ ರದ್ದು

  • ಮೇ 29 ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16585 ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮುರುಡೇಶ್ವರ ಎಕ್ಸ್ ಪ್ರೆಸ್ ರೈಲು ಶಿರೂರು ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಶಿರೂರು- ಮುರುಡೇಶ್ವರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
  • ಮೇ 30ರಂದು ರೈಲು ಸಂಖ್ಯೆ 16586 ಮುರುಡೇಶ್ವರ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಶಿರೂರು ನಿಲ್ದಾಣದಿಂದ ಮಧ್ಯಾಹ್ನ 2.35 ಗಂಟೆಗೆ ಪ್ರಾರಂಭವಾಗಲಿದ್ದು. ಮುರುಡೇಶ್ವರ ಮತ್ತು ಶಿರೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

Download Eedina App Android / iOS

X