ದಸರಾ ಹಬ್ಬದ ಪ್ರಯುಕ್ತ ಬೆಂಗಳೂರು-ವಾಸ್ಕೋ ಡ ಗಾಮಾ ನಡುವೆ ವಿಶೇಷ ರೈಲು ಸೇವೆ

Date:

Advertisements

ದಸರಾ ಹಬ್ಬದ ಹಿನ್ನೆಲೆ, ಪ್ರಯಾಣಿಕರ ಹೆಚ್ಚಿನ ಬೇಡಿಕೆಗೆ ಅನುಗುಣವಾಗಿ ವಾಸ್ಕೋ ಡ ಗಾಮಾ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆಯನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ.

(ರೈಲು ಸಂಖ್ಯೆ 07357) ಅ.20 ರಂದು ಸಂಜೆ 5:30ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಪ್ರಯಾಣವನ್ನು ಆರಂಭಿಸಿ, ಮರುದಿನ ಬೆಳಗ್ಗೆ 9:30ಕ್ಕೆ ವಾಸ್ಕೋ ಡ ಗಾಮಾ ನಿಲ್ದಾಣವನ್ನು ತಲುಪಲಿದೆ.

(ರೈಲು ಸಂಖ್ಯೆ 07358) ಅಕ್ಟೋಬರ್ 24ರಂದು ಮಧ್ಯಾಹ್ನ 02:30ಕ್ಕೆ ವಾಸ್ಕೋ ಡ ಗಾಮಾದಿಂದ ಹೊರಟು ಮರುದಿನ ಬೆಳಗ್ಗೆ 5 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

Advertisements

ಎರಡೂ ಮಾರ್ಗಗಳಲ್ಲಿ ಈ ವಿಶೇಷ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಎಸ್.ಎಂ.ಎಂ ಹಾವೇರಿ, ಎಸ್.ಎಸ್.ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಕ್ಯಾಸಲ್ ರಾಕ್, ಕುಲೆಮ್, ಸ್ಯಾನ್ವೊರ್ಡೆಮ್ ಮತ್ತು ಮಡಗಾಂವ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹22 ಲಕ್ಷ ಮೌಲ್ಯದ ವಿದೇಶಿ ಸಿಗರೇಟ್​ ಅಕ್ರಮ ದಾಸ್ತಾನು ಪತ್ತೆ; ಸಿಸಿಬಿ ಪೊಲೀಸ್​ ದಾಳಿ

ವಿಶೇಷ ರೈಲುಗಳು ಎಸಿ ಪ್ರಥಮ ದರ್ಜೆ (1), ಎಸಿ ಎರಡನೇ ದರ್ಜೆ (1), ಎಸಿ ಮೂರನೇ ದರ್ಜೆ (2), ಸ್ಲೀಪರ್ ಕ್ಲಾಸ್ (9), ಸಾಮಾನ್ಯ ದ್ವಿತೀಯ ದರ್ಜೆ (2) ಮತ್ತು ಎಸ್ಎಲ್ಆರ್ (2) ಸೇರಿದಂತೆ ಒಟ್ಟು 17 ಬೋಗಿಗಳು ಒಳಗೊಂಡಿದೆ.

ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು ಅಧಿಕೃತ ವೆಬ್ಸೈಟ್ https://enquiry.indianrail.gov.in ಅನ್ನು ಪರಿಶೀಲಿಸಬಹುದು ಅಥವಾ 139ಗೆ ಡಯಲ್ ಮಾಡಿ ಅಥವಾ ತಮ್ಮ ಹತ್ತಿರದ ರೈಲ್ವೆ ನಿಲ್ದಾಣವನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X