ಪಕ್ಷ ಸೂಚಿಸಿದರೆ ಕುಮಾರಸ್ವಾಮಿ ಪರ ಪ್ರಚಾರ: ಸುಮಲತಾ ಅಂಬರೀಶ್

Date:

“ವಾರದ ಹಿಂದೆಯಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಎನ್‌ಡಿಎ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನನ್ನ ಬೆಂಬಲ ಇದೆ. ಪಕ್ಷ ಸೂಚಿದರೆ, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ” ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಈ ಬಗ್ಗೆ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಗೆಲುವು ಕಂಡ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೇನೆ. ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದರೆ, ನಾನು ಎನ್‌ಡಿಎ ಅಭ್ಯರ್ಥಿ ಪರವಾಗಿದ್ದೇನೆ ಎಂದೇ ಅರ್ಥ. ಯಾರೂ ಗೆದ್ದ ಕ್ಷೇತ್ರವನ್ನ ಬಿಟ್ಟುಕೊಡುವುದಿಲ್ಲ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗನ್ ಇಟ್ಕೊಂಡು ಸಿಎಂಗೆ ಹಾರ : ಪಿಎಸ್​ಐ ಸೇರಿ ನಾಲ್ವರು ಅಮಾನತು

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಯಾರನ್ನು ಬೆಂಬಲಿಸಬೇಕು ಎಂಬುದು ಅವರಿಗೆ ಬಿಟ್ಟ ವಿಚಾರ” ಎಂದಿದ್ದಾರೆ.

“ನನ್ನೊಂದಿಗೆ ಪ್ರಚಾರದಲ್ಲಿ ಪಾಲ್ಗೊಳ್ಳಿ ಎಂದು ನಾನು ದರ್ಶನ್ ಅವರಿಗೆ ಹೇಳುವುದಿಲ್ಲ. ನಾನೂ ಅಭ್ಯರ್ಥಿಯಾದ ಸಮಯದಲ್ಲಿಯೂ ನಾನು ಅವರನ್ನು ಪ್ರಚಾರಕ್ಕೆ ಕರೆದಿಲ್ಲ. ಅವರೇ ಬಂದು ಪ್ರಚಾರ ಮಾಡಿದ್ದರು. ಇದು ನನ್ನ ವಿಷಯದಲ್ಲಿ ಮಾತ್ರವೇ ಹೊರತು ಬೇರೆಯವರ ವಿಷಯದಲ್ಲಿ ಅಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ರೈತರ ಕಬ್ಬಿನ ಬಿಲ್‌ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳು : ರೈತ ಸಂಘ ಪ್ರತಿಭಟನೆ

ಕಬ್ಬು ಪೂರೈಸಿದ ರೈತರಿಗೆ ಆರೇಳು ತಿಂಗಳಾದರೂ ಕಬ್ಬಿನ ಬಿಲ್‌ ಪಾವತಿಸದ ಸಕ್ಕರೆ...

ಮಂಡ್ಯ | ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ ‘ ಸೇರಿದ ಅಣ್ಣೂರು ಗ್ರಾಮ ಪಂಚಾಯಿತಿ

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ...

ಗುಬ್ಬಿ | ಜೂನ್ 16 ರಂದು ಕಸಾಪ ಆಜೀವ ಸದಸ್ಯರ ಸಭೆ : ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಆಜೀವ ಸದಸ್ಯರ ಸಭೆಯನ್ನು ಇದೇ...

ರಾಯಚೂರು | ಹಣ ದುರ್ಬಳಕೆ ಪಿಡಿಒ ಅಮಾನತು

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಲಿಂಗಸೂಗೂರು ತಾಲ್ಲೂಕು ಕೋಠಾ ಗ್ರಾಮ...

Download Eedina App Android / iOS

X