ಸಂಸತ್ ಸದನಕ್ಕೆ ಆಗುಂತಕರ ಪ್ರವೇಶ ಖಂಡಿಸಿ ವಿಧಾನಸಭೆ ನಿರ್ಣಯ ಅಂಗೀಕಾರ

Date:

Advertisements

ಇಂದು ದೇಶದ ಪ್ರಜಾಪ್ರಭುತ್ವದ ಪವಿತ್ರ ಸ್ಥಳವಾದ ದೆಹಲಿಯ ಸಂಸತ್ತಿನಲ್ಲಿ ಆಗುಂತಕ ವ್ಯಕ್ತಿಗಳು ಸದನಕ್ಕೆ ಪ್ರವೇಶಿಸಿದ್ದು, ಕಳವಳಕಾರಿಯಾಗಿದ್ದು, ಈ ಭದ್ರತಾ ವೈಫಲ್ಯವನ್ನು ಖಂಡಿಸಿ, ಕರ್ನಾಟಕ ವಿಧಾನಸಭೆ ಇಂದು ಸಂಜೆ ಘಟನೆಯನ್ನು ಖಂಡಿಸಿ, ಸದನದಲ್ಲಿ ಖಂಡನಾ ನಿರ್ಣಯ ಅಂಗೀಕರಿಸಿತು.

ಕಲಾಪ ಮಧ್ಯದಲ್ಲಿ ವಿಷಯ ಪ್ರಸ್ತಾಪಿಸಿದ ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ, ಸಂಸತ್ತಿನಲ್ಲಿ ಇಂದು ಅಪರಿಚಿತ, ಆಂಗುತಕರು ಪ್ರವೇಶಿಸಿ, ಭಯ ಹುಟ್ಟಿಸಿರುವುದು ತೀವ್ರ ಖಂಡನೀಯವಾದದ್ದು. ಈ ಘಟನೆಯನ್ನು ಸದನವು ಖಂಡಿಸಿ ನಿರ್ಣಯ ಕೈಗೊಳ್ಳಬೇಕೆಂದು ವಿಷಯ ಪ್ರಸ್ತಾಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಸಂಸತ್ ಸದನ ಪ್ರವೇಶಿಸಿ ಭಯ ಹುಟ್ಟಿಸಿದ ಘಟನೆ ಅತ್ಯಂತ ಖಂಡನೀಯವಾದದ್ದು. ಇದನ್ನು ರಾಜ್ಯದ ಜನತೆಯ ಪರವಾಗಿ ಖಂಡಿಸಬೇಕು. ರಾಜ್ಯ ವಿಧಾನಮಂಡಲದ ಕಲಾಪಗಳಿಗೂ ಸುರಕ್ಷತೆಯ ದೃಷ್ಟಿಯಿಂದ ಇದು ಪಾಠವಾಗಬೇಕು. ಸದನ ಸದಸ್ಯರು ಪ್ರವೇಶ ಪತ್ರಗಳನ್ನು ನೀಡುವಾಗ ಎಚ್ಚರಿಕೆ ವಹಿಸಿ ಪೂರ್ವಾಪರ ವಿಚಾರಿಸಿ ಪರಿಚಯಸ್ಥರಿಗೆ ಮಾತ್ರ ನೀಡಬೇಕು. ತಪಾಸಣೆ ತೀವ್ರವಾಗಬೇಕು. ಭದ್ರತಾ ಲೋಪವಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು. ಈ ಕುರಿತು ತಮ್ಮ ಸಿಬ್ಬಂದಿಗಳಿಗೂ ಸೂಚನೆ ನೀಡಬೇಕೆಂದು ಸಭಾಧ್ಯಕ್ಷರಿಗೆ ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಕೇವಲ 1 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು : ತನಿಖೆಗೆ ಎಎಪಿ ಆಗ್ರಹ

ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮಾತನಾಡಿ, ಘಟನೆಯನ್ನು ರಾಜ್ಯದ ಪರವಾಗಿ ಕಠಿಣವಾಗಿ ಖಂಡಿಸುತ್ತೇವೆ. ಇಂದು ಸದನಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆಗುಂತಕರಿಗೆ ಕಠಿಣ ಕ್ರಮವಾಗಬೇಕು. ಸದನಗಳ ಪ್ರವೇಶಕ್ಕೆ ಪಾಸ್ ನೀಡುವಾಗ ಅವರ ಆಧಾರ್ ಕಾರ್ಡ್ ಪರಿಶೀಲಿಸಿ, ಸರಿಯಾದ ಪರಿಚಯ ನೋಡಿ ನೀಡಬೇಕು ಎಂದು ಹೇಳಿದರು.

ಘಟನೆಯನ್ನು ಖಂಡಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ, ವಿಪಕ್ಷ ನಾಯಕ ಆರ್. ಅಶೋಕ, ಶಾಸಕರಾದ ಸುರೇಶಕುಮಾರ್, ಅರಗ ಜ್ಞಾನೇಂದ್ರ ಸೇರಿದಂತೆ ಇತರರು ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ: ಕರಾವಳಿ, ಒಳನಾಡಿನ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ...

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರ ಸಾವು : ಮಣ್ಣಿನ ಗಣಪತಿ ಪೂಜಿಸಲು ಸಚಿವ ಈಶ್ವರ ಖಂಡ್ರೆ ಮನವಿ

ಗಣೇಶ ಚತುರ್ಥಿಯಂದು ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ) ದಿಂದಲೇ ಹುಟ್ಟಿದ...

ರಾಜ್ಯದಲ್ಲಿ 31 ತಿಂಗಳಲ್ಲಿ 10,510 ಪೋಕ್ಸೋ ಪ್ರಕರಣ : 162 ಮಂದಿಗಷ್ಟೇ ಶಿಕ್ಷೆ!

ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇದಿನೇ...

‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ...

Download Eedina App Android / iOS

X