ಸಕಾಲಕ್ಕೆ ಸಿಗದ ವೇತನ; ಎಲೆಕ್ಟ್ರಿಕ್ ಬಸ್‌ ಚಾಲಕರ ಪ್ರತಿಭಟನೆ

Date:

Advertisements

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಎಲೆಕ್ಟ್ರಿಕ್​ ಬಸ್​ ಚಾಲಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಗುತ್ತಿಗೆ ಕೆಲಸ ಮಾಡುತ್ತಿರುವ ಚಾಲಕರು ಬೆಂಗಳೂರಿನ ಶಾಂತಿನಗರ ಡಿಪೋ 3ರ ಮುಂದೆ ಮಂಗಳವಾರ ಧರಣಿ ನಡೆಸಿದ್ದು, ವೇತನಕ್ಕಾಗಿ ಆಗ್ರಹಿಸಿದ್ದಾರೆ.

ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​ಗಳು ಸರಿಯಾಗಿ ಸೇವೆ ನೀಡುತ್ತಿಲ್ಲ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಇದೀಗ ಚಾಲಕರು ತಮಗೆ ವೇತನ ನೀಡುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ.

“ಮೊದಲಿಗೆ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳುವಾಗ ಟಾಟಾ ಕಂಪನಿಯಲ್ಲಿ ಕೆಲಸ ಎಂದು ಹೇಳಿದ್ದರು. ಇದೀಗ, ಆರ್ಯ ಕಂಪನಿಯಲ್ಲಿ ಕೆಲಸ ನೀಡಿದ್ದಾರೆ. ಅಲ್ಲದೇ, ತಿಂಗಳಿಗೆ ₹26 ಸಾವಿರ ವೇತನ ನೀಡುತ್ತೇವೆ ಎಂದಿದ್ದರು. ಆದರೀಗ, ಕೇವಲ ₹18 ಸಾವಿರ ನೀಡುತ್ತಿದ್ದಾರೆ. ಬರುವ ವೇತನದಲ್ಲಿ ಕಡಿತ ಮಾಡುತ್ತಿರುವ ಹಣ ಪಿಎಫ್‌ ಖಾತೆಗೂ ಜಮೆ ಆಗುತ್ತಿಲ್ಲ. ವಸತಿ ಸೌಲಭ್ಯ ನೀಡುತ್ತೇವೆ ಎಂದಿದ್ದರು. ಇದೀಗ ಅದೂ ಇಲ್ಲ” ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ನಮಗೆ ಸರಿಯಾಗಿ ತಿಂಗಳಿಗೆ ವೇತನ ಆಗುತ್ತಿಲ್ಲ. ಜತೆಗೆ ನಾವು ಡ್ಯೂಟಿ ಮತ್ತು ಓಟಿ ಸೇರಿ (8ಗಂಟೆ ಡ್ಯೂಟಿ ಮತ್ತು 8ಗಂಟೆ ಓಟಿ) ಅಂದರೆ ತಿಂಗಳಲ್ಲಿ 40-42 ಸಾವಿರ ರೂ. ವರೆಗೆ ದುಡಿದ್ದೇವೆ. ಆದರೆ, ನಮಗೆ ಸುಮಾರು 42 ಸಾವಿರ ರೂಪಾಯಿ ಕೊಡುವ ಬದಲಿಗೆ ಕೇವಲ 18-20 ಸಾವಿರ ರೂಪಾಯಿ ಮಾತ್ರ ಕೊಟ್ಟಿದ್ದಾರೆ. ಈ ಪುರುಷಾರ್ಥಕ್ಕೆ ನಾವು ಡ್ಯೂಟಿ ಏಕೆ ಮಾಡಬೇಕು” ಎಂದು ಪ್ರತಿಭಟನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ಲೈಂಗಿಕ ಹಗರಣ | ಸಂತ್ರಸ್ತೆಯರಿಗೆ ರಕ್ಷಣೆ ನ್ಯಾಯ ಹಾಗೂ ಅಪರಾಧಿಗಳಿಗೆ ಶಿಕ್ಷೆ ನೀಡಬೇಕೆಂದು ಆಗ್ರಹ ಸಮಾವೇಶ

“ಸುಮಾರು 180 ಮಂದಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ನಿತ್ಯ ಕೆಲಸ ಮಾಡುತ್ತಿದ್ದೇವೆ. ನಮ್ಮನ್ನು ನೇಮಕ ಮಾಡಿಕೊಳ್ಳುವಾಗ ತಿಂಗಳಿಗೆ 22 ಸಾವಿರ ರೂಪಾಯಿ ವೇತನ ಮತ್ತು ಇತರ ಭತ್ಯೆಗಳನ್ನು ಕೊಡಲಾಗುವುದು ಎಂದು ಹೇಳಿದ್ದರು. ಜತೆಗೆ ಓಟಿ ಮಾಡಿದರೆ ನೀವು ಡಬಲ್‌ ವೇತನ ಪಡೆಯಬಹುದು ಎಂದಿದ್ದರು. ಆದರೆ, ವೇತನವನ್ನೇ ಸರಿಯಾಗಿ ಕೊಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಎಂಟಿಸಿಯಲ್ಲಿ ಒಟ್ಟು 6842 ಬಸ್​​ಗಳಿವೆ. ಅದರಲ್ಲಿ ಸಾಮಾನ್ಯ 5642 ಬಸ್​​ಗಳಿದ್ದರೆ, 600 ಎಸಿ ಬಸ್​​ಗಳಿವೆ. 600 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳಿವೆ. ಡಿಪೋ-3 ಒಂದರಲ್ಲೇ 113 ಎಲೆಕ್ಟ್ರಿಕ್​ ಬಸ್​ಗಳು ಸಂಚರಿಸುತ್ತೇವೆ. ಇಲ್ಲಿ ಚಾಲಕರು ಮೂರು ಶಿಫ್ಟ್​​​ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X