ಬೆಂಗಳೂರಿನ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ!

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ ಎಂಬಂತೆ ಆಗಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ವಿಶ್ವ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಜೆ.ಬಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಗ್ಗದಾಸಪುರ ಮುಖ್ಯ ರಸ್ತೆಯ ವರ್ಸೋವಾ ಲೇಔಟ್ಬಳಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಸೇತುವೆ ನಿರ್ಮಾಣ ಕಾಮಗಾರಿ ನಡೆಸುತ್ತಿದೆ. ಈ ಹಿನ್ನೆಲೆ, ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸುವ ಸಲುವಾಗಿ ಕೆಲವು ಮಾರ್ಗಸೂಚಿ ನೀಡಿದ್ದಾರೆ.

“ಕಾಮಗಾರಿಯ ಸಮಯದಲ್ಲಿ ಪೂರ್ವಂಕರ ಅಪಾರ್ಟ್ಮೆಂಟ್‌ನಿಂದ ಕಗ್ಗದಾಸಪುರ ರೈಲ್ವೇ ಗೇಟ್ ಜಂಕ್ಷನ್ವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಿದ್ದು, ಕಗ್ಗದಾಸಪುರ ಮುಖ್ಯ ರಸ್ತೆಯಲ್ಲಿ ನಾಗವಾರ ಪಾಳ್ಯ ಕಡೆಯಿಂದ ಕಗ್ಗದಾಸಪುರ ರೈಲ್ವೇ ಗೇಟ್ ಸಂಚರಿಸುವ ಹಾಗೂ ಕಗ್ಗದಾಸಪುರ ರೈಲ್ವೇ ಗೇಟ್ ಕಡೆಯಿಂದ ನಾಗವಾರ ಪಾಳ್ಯ ಕಡೆಗೆ ಸಂಚರಿಸುವ ವಾಹನಗಳ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದೆ” ಎಂದು ಬೆಂಗಳೂರು ಸಂಚಾರ ಪೊಲೀಸ್ ಮಾಹಿತಿ ನೀಡಿದೆ.

“ಕಾಮಗಾರಿಯ ಸಮಯದಲ್ಲಿ ಕಗ್ಗದಾಸಪುರ ಮುಖ್ಯ ರಸ್ತೆಯಲ್ಲಿ ನಾಗವಾರ ಪಾಳ್ಯ ಕಡೆಯಿಂದ ಕಗ್ಗದಾಸಪುರ ರೈಲ್ವೇ ಗೇಟ್ ಸಂಚರಿಸುವ ವಾಹನಗಳು ಪೂರ್ವಂಕರ ಅಪಾರ್ಟ್ಮೆಂಟ್ ಎದುರಿನ ಬೈರಸಂದ್ರ 5ನೇ ಕ್ರಾಸ್ ಜಂಕ್ಷನ್ನಲ್ಲಿ ಬಲ ತಿರುವು ಪಡೆದು, ಬೈರಸಂದ್ರ ಮುಖ್ಯ ರಸ್ತೆಯ ಮೂಲಕ ಜಿ.ಎಂ.ಪಾಳ್ಯ ಜಂಕ್ಷನ್ ಕಡೆಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ” ಎಂದು ತಿಳಿಸಿದೆ.

Advertisements

ಕಗ್ಗದಾಸಪುರ ರೈಲ್ವೇ ಗೇಟ್ ಕಡೆಯಿಂದ ನಾಗವಾರ ಪಾಳ್ಯ ಕಡೆಗೆ ಸಂಚರಿಸುವ ವಾಹನಗಳು ಕಗ್ಗದಾಸಪುರ ರೈಲ್ವೇ ಗೇಟ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಕಗ್ಗದಾಸಪುರ ಮುಖ್ಯ ರಸ್ತೆ ವಿಜ್ಞಾನ ನಗರ ಜಂಕ್ಷನ್ಬಲತಿರುವು ಜಿ.ಎಂ ಪಾಳ್ಯ ಮುಖ್ಯ ರಸ್ತೆಬೆಮೆಲ್ ಜಂಕ್ಷನ್ ಬಲ ತಿರುವುಗೀತಾಂಜಲಿ ಲೇಔಟ್ ಜಂಕ್ಷನ್ ಬಲ ತಿರುವು ಪಡೆದು ಡಿ.ಆರ್.ಡಿ. ಮೂಲಕ ನಾಗವಾರ ಪಾಳ್ಯ ಕಡೆಗೆ ಸಂಚರಿಸಬಹುದು ಅಥವಾ ಜಿ.ಎಂ.ಪಾಳ್ಯ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಬೈರಸಂದ್ರ ಮುಖ್ಯ ರಸ್ತೆ ಮೂಲಕ ನಾಗವಾರ ಪಾಳ್ಯ ಕಡೆಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

ಬಿಬಿಎಂಪಿ ಕೈಗೆತ್ತಿಕೊಂಡಿರುವ ನಿರ್ಮಾಣ ಕಾಮಗಾರಿ ಮುಗಿಯುವವರೆಗೂ ಪೂರ್ವಂಕರ ಅಪಾರ್ಟ್ಮೆಂಟ್ನಿಂದ ಕಗ್ಗದಾಸಪುರ ರೈಲ್ವೆ ಗೇಟ್ ನಿಲ್ದಾಣದವರೆಗೆ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X