ಹವಾಮಾನ | ಬೀಸುವ ಗಾಳಿಯಲ್ಲಿಲ್ಲ ತೇವಾಂಶ: ರಾಜ್ಯದಲ್ಲಿ ಮುಂಗಾರು ಕ್ಷೀಣ

Date:

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಪ್ರಹರವಾಗಿ ಬೀಸುತ್ತಿರುವ ಗಾಳಿಯು ಮಳೆಯ ಭರವಸೆ ಹೊತ್ತು ಬಂದಂತೆ ಕಂಡರೂ ಸಹ, ಮುಂಗಾರು ಚುರುಕಾಗುವ ಸಾಧ್ಯತೆ ಸೃಷ್ಟಿಸಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಉತ್ತರ ಒಳನಾಡಿನಲ್ಲಿ 50-60 ಕಿ.ಮೀ, ದಕ್ಷಿಣ ಒಳನಾಡಿನಲ್ಲಿ 40-50 ಕಿ.ಮೀ. ಮತ್ತು ಕರಾವಳಿ ಕರ್ನಾಟಕದಲ್ಲಿ ಸುಮಾರು 40 ಕಿ.ಮೀ. ವೇಗದ ಗಾಳಿ ಬೀಸುತ್ತಿದೆ. ಆದರೆ ಗಾಳಿ ಹೊತ್ತು ತರುವ ತೇವಾಂಶದ ಮಟ್ಟ ಕಡಿಮೆಯಾಗಿರುವುದರಿಂದ ವಾತಾವರಣ ತಂಪಾಗಿದ್ದರೂ, ಮಳೆಯ ಸಾಧ್ಯತೆ ಕಡಿಮೆ. ಮುಂದಿನ ಏಳು ದಿನಗಳವರೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಈ ವರ್ಷದ ನೈಋತ್ಯ ಮಾನ್ಸೂನ್ ವಿಳಂಬ ಮತ್ತು ದುರ್ಬಲ ಮಾರುತಗಳ ಪರಿಣಾಮ, ಕರ್ನಾಟಕದಲ್ಲಿ ಜೂನ್-ಜುಲೈ ಅವಧಿಯಲ್ಲಿ 27% ರಿಂದ 41% ವರೆಗೆ ಮಳೆ ಕೊರತೆ ದಾಖಲಾಗಿದೆ. ಆಗಸ್ಟ್‌ನಲ್ಲೂ ಸಾಮಾನ್ಯಕ್ಕಿಂತ ಕಡಿಮೆ ಮಳೆ ನಿರೀಕ್ಷೆ ಇದೆ. ಎಲ್ ನಿನೋ ಪರಿಣಾಮ, ಪೆಸಿಫಿಕ್ ಸಾಗರದಲ್ಲಿ ಸಮುದ್ರ ಮೇಲ್ಮೈ ಉಷ್ಣತೆ ಹೆಚ್ಚಾಗುವುದರಿಂದ ವಾಯು ಪ್ರವಹಗಳು ಬದಲಾಗಿ ಭಾರತದತ್ತ ಒಣಗಾಳಿ ಬೀಸುತ್ತಿರುವುದು ಮುಂಗಾರು ಕೊರತೆಗೆ ಪ್ರಮುಖ ಕಾರಣ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ (KSNDMC) ದತ್ತಾಂಶದ ಪ್ರಕಾರ, ಜುಲೈ 31ರ ವೇಳೆಗೆ ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ಪ್ರಸ್ತುತ ನೀರಿನ ಸಂಗ್ರಹ 473.55 ಟಿಎಂಸಿ ಅಡಿ ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ 722.49 ಟಿಎಂಸಿ ಅಡಿ ನೀರಿನ ಸಂಗ್ರಹವಿತ್ತು, ಈ ಬಾರಿ ಸುಮಾರು 34% ಸಂಗ್ರಹಣೆಯ ಪ್ರಮಾಣ ಕಡಿಮೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕಾವೇರಿ ಜಲಾನಯನ ಪ್ರದೇಶದಲ್ಲಿ (ಹಾರಂಗಿ, ಹೇಮಾವತಿ, ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳು) ಪ್ರಸ್ತುತ ಸಂಗ್ರಹ 66.98 ಟಿಎಂಸಿ ಅಡಿ ಇದ್ದರೆ, ಕಳೆದ ವರ್ಷ ಇದೇ ದಿನಕ್ಕೆ 106.41 ಟಿಎಂಸಿ ದಾಖಲಾಗಿತ್ತು.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ (ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಮತ್ತು ನಾರಾಯಣಪುರ ಅಣೆಕಟ್ಟುಗಳು) ಪ್ರಸ್ತುತ ಸಂಗ್ರಹ 269.59 ಟಿಎಂಸಿ ಅಡಿ ಇದೆ. ಕಳೆದ ವರ್ಷ 347.04 ಟಿಎಂಸಿ ಅಡಿ ಇತ್ತು. ಜಲಾಶಯಗಳ ನೀರಿನ ಸಂಗ್ರಹ ಮಟ್ಟ ಕಡಿಮೆಯಾದ ಕಾರಣ ಕುಡಿಯುವ ನೀರು ಮತ್ತು ನೀರಾವರಿಗೆ ಇನ್ನಷ್ಟು ಸಂಕಷ್ಟ ಒದಗುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾದರೆ ಸಂಗ್ರಹ ಸುಧಾರಿಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶೇಖ್‌ ಹಸೀನಾ ಪಕ್ಷದ 7 ನಾಯಕರಿಗೆ ಮರಣದಂಡನೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಅವಾಮಿ ಲೀಗ್‌ ಪಕ್ಷದ...

ವಂದೇ ಮಾತರಂ ಚರಣಗಳ ಮೊಟಕು: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ...

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...