ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಬ್ಯಾನರ್‌ನಲ್ಲಿ ಹಿಂದೂ ಹುಲಿಗಳೆಂದು ಸ್ವಾಗತ

Date:

Advertisements

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಆರೋಪಿಗಳಾದ ಅಮಿತ್ ಬದ್ಧಿ ಮತ್ತು ಗಣೇಶ್‌ ಮಿಸ್ಕಿನ್‌ಗೆ ಬ್ಯಾನರ್ ಹಾಕಿ ಸ್ವಾಗತಿಸಿದ ಘಟನೆ ಹುಬ್ಬ‍ಳ್ಳಿಯಲ್ಲಿ ನಡೆದಿದೆ.

ಈ ಹಿನ್ನಲೆಯಲ್ಲಿ ನಗರದ ಕೆಲವೆಡೆ ಸ್ವಾಗತ ಕೋರಿ ಆರೋಪಿಗಳ ಬೆಂಬಲಿಗರು ಬ್ಯಾನರ್ ಹಾಕಿದ್ದು, 7 ವರ್ಷಗಳ ನಂತರ ಬಿಡುಗಡೆಗೊಂಡ ಹಿಂದೂ ಹುಲಿಗಳು ಎಂದು ಬ್ಯಾನರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಹುಬ್ಬಳ್ಳಿಯ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾರೆ. ಈ ವೇಳೆ ಆರೋಪಿಗಳ ಬೆಂಬಲಿಗರು ಇಬ್ಬರನ್ನೂ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಕುಂಬಳಕಾಯಿ ಒಡೆದು, ಮೆರವಣಿಗೆ ಮೂಲಕ ಸ್ವಾಗತ ಕೋರಿದ್ದಾರೆ.

Advertisements

ಇದೇ ವೇಳೆ ನಗರದ ತುಳುಜಾ ಭವಾನಿ ಮಂದಿರದ ಬಳಿಯೂ ಹತ್ಯೆ ಆರೋಪಿಗಳನ್ನು ಸ್ವಾಗತಿಸಿ ಬ್ಯಾನರ್ ಹಾಕಲಾಗಿತ್ತು, ಆದರೆ ಇದನ್ನು ದೇವಸ್ಥಾನದ ಆಡಳಿತ ಮಂಡಳಿಯವರು ತೆಗೆದು ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪತಂಜಲಿ ರಾಮದೇವ್ ವಿರುದ್ಧ ಬಂಧನ ವಾರೆಂಟ್ ಜಾರಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ತವರಿಗೆ ಆಗಮಿಸಿದ್ದಾಗ ಸಂಘಪರಿವಾರದ ಕಾರ್ಯಕರ್ತರು ಅವರಿಬ್ಬರನ್ನೂ ಸನ್ಮಾನಿಸಿ ಅದ್ದೂರಿ ಸ್ವಾಗತವನ್ನು ನೀಡಿದ್ದರು.

ಹತ್ಯೆ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ್ ಯಡವೆಗೆ ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದರು. ಇದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿತ್ತು.

2017ರ ಸಪ್ಟೆಂಬರ್ 5 ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬಳಿಕ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) ಒಟ್ಟು 25 ಜನ ಆರೋಪಿಗಳನ್ನು ಬಂಧಿಸಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X