ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೇಕಿಲ್ಲ ಕ್ಯಾಂಪಸ್ ಸೆಲೆಕ್ಷನ್?: ಎಎಪಿ ಅಭಿಯಾನ

Date:

Advertisements

ಬಹುತೇಕ ಕಂಪನಿಗಳು ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸೆಲೆಕ್ಷನ್‌ಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳನ್ನೇ ಆಶ್ರಯಿಸುತ್ತಿರುವುದು ದುಃಖಕರ ವಿಚಾರವಾಗಿದೆ. ಕ್ಯಾಂಪಸ್ ಸೆಲೆಕ್ಷನ್ ಮಾಡುವ ಎಲ್ಲ ಕಂಪನಿಗಳು ಸರ್ಕಾರಿ ಕಾಲೇಜುಗಳನ್ನು ಪರಿಗಣಿಸಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.

“ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳೂ ಪ್ರತಿಭಾನ್ವಿತರಾಗಿದ್ದಾರೆ. ಒಂದೇ ವಿಷಯವನ್ನು ಅಭ್ಯಾಸ ಮಾಡಿರುತ್ತಾರೆ. ಕಲಿಕೆಯ ಗುಣಮಟ್ಟವೂ ಒಂದೇ ಆಗಿರುತ್ತದೆ. ಎಲ್ಲ ವಿಚಾರಗಳಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಸರಿಸಮನಾಗಿದ್ದಾರೆ. ಆದರೂ, ಕ್ಯಾಂಪಸ್ ಸೆಲೆಕ್ಷನ್‌ಗೆ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಕಂಪನಿಗಳು ಮಣೆಹಾಕುತ್ತಿರುವುದು ನೋವಿನ ಸಂಗತಿಯಾಗಿದೆ” ಎಂದು ಎಎಪಿ ಹೇಳಿದೆ.

“ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕ್ಯಾಂಪಸ್ ಸೆಲೆಕ್ಷನ್‌ಗೆ ಸಿದ್ಧಗೊಳಿಸುವುದು ಹಾಗೂ ಕಂಪನಿಗಳು ಖಾಸಗಿ ಕಾಲೇಜುಗಳಿಗೆ ನೀಡುವ ಮಾನ್ಯತೆಯಂತೆ ಸರ್ಕಾರಿ ಕಾಲೇಜುಗಳಿಗೂ ಸಮನಾಗಿ ಆದ್ಯತೆ ನೀಡುವಂತೆ ಆಯಾ ಜಿಲ್ಲಾಧಿಕಾರಿಗಳು ಜವಾಬ್ದಾರಿ ವಹಿಸಬೇಕು” ಎಂದು ಪಕ್ಷ ಒತ್ತಾಯಿಸಿದೆ.

Advertisements

ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷವು ರಾಜ್ಯಾದ್ಯಂತ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಪರವಾಗಿ ಅಭಿಯಾನವನ್ನು ಹಮ್ಮಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಡಿ.1 ರಿಂದ ಬೆಂಗಳೂರು – ನೀಲಕ್ಕಲ್‌ಗೆ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್‌ ಸಂಚಾರ

“ಡಿಸೆಂಬರ್ 1ರಿಂದ 4ರವರೆಗೆ ಆಮ್ ಆದ್ಮಿ ಪಕ್ಷದ ಯುವ ಘಟಕ ರಾಜ್ಯಾದ್ಯಂತ 4 ದಿನಗಳ ಅಭಿಯಾನವನ್ನು ಹಮ್ಮಿಕೊಂಡಿದೆ. ಪ್ರಮಖವಾಗಿ ಡಿ.1ರಂದು ರಾಮನಗರ, ಡಿ.2ರಂದು ಮಂಡ್ಯ, ಡಿ.3ರಂದು ಮೈಸೂರು ಹಾಗೂ ಡಿ.4ರಂದು ಚಾಮರಾಜನಗರದಲ್ಲಿ ಅಭಿಯಾನವನ್ನು ನಡೆಸಲಿದೆ” ಎಂದು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಲೋಹಿತ್ ಜಿ. ಹನುಮಾಪುರ ಹೇಳಿದ್ದಾರೆ.

“ಉಳಿದಂತೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾ ಮಟ್ಟದ ಅಭಿಯಾನಗಳನ್ನು ನಡೆಸಲಿದ್ದಾರೆ. ಈ ಮೂಲಕ ಜಿಲ್ಲಾಧಿಕಾರಿಗಳ ಗಮನವನ್ನು ಸೆಳೆದು, ಸರ್ಕಾರಿ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಆಯ್ಕೆಗೆ ಪರಿಗಣಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳವಂತೆ ಒತ್ತಡ ಹೇರಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X