ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ; ಡಿ.6ರ ಬಳಿಕ ಎಲ್ಲ ವಿಚಾರ ತಿಳಿಸುತ್ತೇನೆ: ವಿ ಸೋಮಣ್ಣ

Date:

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಯ ವಿಚಾರವಾಗಿ ಸ್ವಪಕ್ಷದ ವಿರುದ್ಧವೇ ಪರೋಕ್ಷ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ವಿ ಸೋಮಣ್ಣ, ‘ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ’ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಡಿ.6ರವರೆಗೆ ಏನೂ ಮಾತನಾಡಬೇಡಿ ಎಂದು ನನಗೆ ವರಿಷ್ಠರು ತಿಳಿಸಿದ್ದಾರೆ. ಡಿಸೆಂಬರ್​ 6ರ ಬಳಿಕ ನನ್ನ ಮನಸ್ಸಿ‌ನ ಭಾವನೆ ಹೇಳುತ್ತೇನೆ. 45 ವರ್ಷದ ರಾಜಕೀಯ ಅನುಭವವನ್ನು ತಿಳಿಸುತ್ತೇನೆ. ನನ್ನ ಹೋರಾಟವನ್ನು ಸಾಮಾನ್ಯ ಕಾರ್ಯಕರ್ತರಿಗೂ ತಿಳಿಸಬೇಕಿದೆ. ಆ ಕಾಲ ಬರಲಿ ಅಂತ ಕಾಯುತ್ತಿದ್ದೇನೆ’ ಎಂದು ತಿಳಿಸಿದರು.

ಬಿ.ವೈ. ವಿಜಯೇಂದ್ರರನ್ನು ನಾವು ಅಳೆದು ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂಬ ಅರವಿಂದ ಲಿಂಬಾವಳಿ ಅವರ ಹೇಳಿಕೆಯ ಬಗ್ಗೆ ಉತ್ತರಿಸಿದ ಸೋಮಣ್ಣ, ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ’ ಎಂದು ಸೋಮಣ್ಣ ಹೇಳಿಕೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಬಸವತತ್ವಗಳ ಪ್ರಚಾರಕ್ಕೆ ರೂಪುರೇಷೆ: ’ಅನುಭವ ಮಂಟಪ’ ಸಭೆಯಲ್ಲಿ ಸ್ವಾರಸ್ಯಕರ ಚರ್ಚೆ

ನನ್ನನ್ನು ಯಾರು ಸಂಪರ್ಕಿಸಿಲ್ಲ, ನಾನೂ ಯಾರನ್ನು ಸಂಪರ್ಕಿಸಿಲ್ಲ. ಪಕ್ಷದಲ್ಲಿ ಹೋರಾಟ ಅನ್ನುವುದಕ್ಕಿಂತ ಹೆಚ್ಚಾಗಿ ಕೆಲಸಗಾರ ಅಂದರೆ ಏನು? ಅದಕ್ಕೆ ಮಾನದಂಡ ಏನು? ಹೈಕಮಾಂಡ್‌ ಪಕ್ಷಕ್ಕಾಗಿ ದುಡಿದವರನ್ನು ತಿರುಗಿ ನೋಡಿಲ್ಲವಾದ್ದರಿಂದ ಯಾವ ರೀತಿ ಹೊಡೆತ ಆಯ್ತು ಎಂಬುದು ಎಲ್ಲರಿಗೂ ಗೊತ್ತಿದೆ. ರಾಜಕಾರಣ ಡೊಂಬರಾಟ ಅಲ್ಲ, ನಾಟಕದ ಕಂಪನಿಯೂ ಅಲ್ಲ, ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ, ಒಳಒಪ್ಪಂದಕ್ಕೂ ಸೀಮಿತ ಅಲ್ಲ ಎಂದು ಹೇಳುವ ಮೂಲಕ ಆರ್‌. ಅಶೋಕ ವಿಧಾನಸಭೆ ಪ್ರತಿಪಕ್ಷ ನಾಯಕರಾಗಿರುವುದು ಮತ್ತು ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

‘ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ’ ಎಂದು ಸೋಮಣ್ಣ ಮತ್ತೆ ಮತ್ತೆ ಹೇಳುವ ಮೂಲಕ ಪ್ರತಿಪಕ್ಷವಾದ ಬಿಜೆಪಿಯಲ್ಲಿ ಮತ್ತೆ ಎಲ್ಲವೂ ಸರಿ ಇಲ್ಲ ಎಂಬ ಸೂಚನೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಎಫ್‌ಐಆರ್

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್...