ಯಾದಗಿರಿ | ‘ಓಟು ಕೊಡಿ, ನೋಟೂ ಕೊಡಿ’ ಅಭಿಯಾನದ ಮೂಲಕ ಸೋಮಶೇಖರ್ ಮತಯಾಚನೆ

Date:

Advertisements
  • ಅಮೂಲ್ಯವಾದ ಓಟಿನ ಜೊತೆ ಉದಾರವಾಗಿ ಕಾಣಿಕೆ ಕೊಡಬೇಕೆಂದು ಮನವಿ
  • ಜನಸಾಮಾನ್ಯರ ಜೊತೆ ನಿರಂತರ ಸಂಪರ್ಕವಿರುವ ಅಭ್ಯರ್ಥಿ ಗೆಲ್ಲಿಸುವಂತೆ ಕರೆ

ಯಾದಗಿರಿ ವಿಧಾನಸಭಾ ಕ್ಷೇತ್ರದ ಎಸ್‌ಯುಸಿಐ (ಕಮ್ಯುನಿಸ್ಟ್) ಅಭ್ಯರ್ಥಿ ಕೆ ಸೋಮಶೇಖರ್ ಜನಸಾಮಾನ್ಯರ ಬಳಿ ಹೋಗಿ ‘ಓಟು ಕೊಡಿ, ನೋಟು ಕೊಡಿ’ ಎಂಬ ಅಭಿಯಾನದ ಮೂಲಕ ಮತಯಾಚನೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಯಾದಗಿರಿ ವಿಧಾನಸಭಾ ಕ್ಷೇತ್ರದ ಸುಭಾಷ್ ವೃತ್ತದಲ್ಲಿ ಅಂಗಡಿಮುಗ್ಗಟ್ಟುಗಳಿಗೆ ತೆರಳಿದ ಕೆ ಸೋಮಶೇಖರ್, “ನಾನು ಹಲವು ವರ್ಷಗಳಿಂದ ಜನರ ಸಮಸ್ಯೆಗಳ ಕುರಿತು ನಿರಂತರವಾಗಿ ಹೋರಾಟ ಮಾಡುತ್ತಿದ್ದೇನೆ. ಯಾದಗಿರಿ ಮತಕ್ಷೇತ್ರದ ಜನತೆಯು ತಮ್ಮ ಅಮೂಲ್ಯವಾದ ಓಟನ್ನು ನಮಗೆ ನೀಡುವುದರ ಜೊತೆಗೆ ಉದಾರವಾಗಿ ಕಾಣಿಕೆ ಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ?: ಅರಸೀಕೆರೆ | ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ

Advertisements

“ಕಾಂಗ್ರೇಸ್, ಬಿಜೆಪಿ, ಜೆಡಿಎಸ್‌ಗಳು ಬಂಡವಾಳಶಾಹಿಗಳಿಂದ ದುಡ್ಡು ತೆಗೆದುಕೊಂಡು ಅಧಿಕಾರಕ್ಕೆ ಬಂದ ನಂತರ ಅವರ ಪರವಾಗಿ ನೀತಿಗಳನ್ನು ರೂಪಿಸುತ್ತವೆ. ಆದರೆ, ನಮ್ಮ ಪಕ್ಷವು ಸಂಪೂರ್ಣವಾಗಿ ಜನರ ಮೇಲೆಯೇ ಅವಲಂಬಿತವಾಗಿದ್ದು, ಜನರೇ ಪಕ್ಷಕ್ಕೆ ತನು-ಮನ-ಧನದಿಂದ ಬೆಂಬಲವಾಗಿ ನಿಲ್ಲಬೇಕು” ಎಂದು ಹೇಳಿದರು.

ನಗರದ ಹಲವು ಅಂಗಡಿಗಳಿಗೆ ತೆರಳಿದ ಇವರು ಅಲ್ಲಿ ನೆರೆದಿದ್ದ ಜನರಲ್ಲಿ ಮತ ಯಾಚಿಸುವುದರ ಜೊತೆಗೆ ನಿಧಿ ಸಂಗ್ರಹವನ್ನೂ ಮಾಡಿದರು. ಈ ವೇಳೇ ಪಕ್ಷದ ರಾಜ್ಯ ಸಮಿತಿ ಸದಸ್ಯ ವಿ. ಎನ್. ರಾಜಶೇಖರ್, ಜಿಲ್ಲಾ ಮುಖಂಡ ಡಿ. ಉಮಾದೇವಿ, ರಾಮಲಿಂಗಪ್ಪ ಬಿ ಎನ್, ಶಿವರಾಜ್, ಸುಭಾಷ್ ಚಂದ್ರ, ಶಿಲ್ಪಾ ಬಿ.ಕೆ ಸೇರಿದಂತೆ ಹಲವರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

Download Eedina App Android / iOS

X