ಗುಜರಾತ್‌ | ಗರ್ಬಾ ನೃತ್ಯ: 24 ಗಂಟೆಗಳಲ್ಲಿ 10 ಮಂದಿ ಹೃದಯಾಘಾತದಿಂದ ಸಾವು; ಹದಿಹರೆಯದವರೇ ಹೆಚ್ಚು!

Date:

Advertisements

ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ನವರಾತ್ರಿ ಸಂಭ್ರಮಾಚರಣೆ ಸಂದರ್ಭದಲ್ಲಿ ಪ್ರದರ್ಶಿಸಲಾಗುವ ಗರ್ಬಾ ನೃತ್ಯದ ವೇಳೆ ಕನಿಷ್ಠ 10 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತಪಟ್ಟವರ ಪೈಕಿ ತರುಣರಿಂದ ಹಿಡಿದು ಮಧ್ಯ ವಯಸ್ಸಿನವರೇ ಇದರಲ್ಲಿ ಹೆಚ್ಚಿನವರು ಎಂದು ವರದಿಯಾಗಿದೆ.

ಬರೋಡಾದ ದಭೋಯಿಯಲ್ಲಿ 13 ವರ್ಷದ ಬಾಲಕ ಅಸುನೀಗಿದ್ದರೆ, ಅಹಮದಾಬಾದ್‌ನಲ್ಲಿ ಶುಕ್ರವಾರ 24 ವರ್ಷದ ಯುವಕ ಗರ್ಬಾ ಪ್ರದರ್ಶಿಸುವಾಗ ಹಠಾತ್ತನೆ ಕುಸಿದು ಬಿದ್ದಿದ್ದಾನೆ. ಅದೇ ರೀತಿ ಕಪಾಡ್ವಂಜ್‌ನಲ್ಲಿ 17 ವರ್ಷದ ಬಾಲಕ ಕೂಡ ಗರ್ಬಾ ನರ್ತನದ ವೇಳೆ ಕುಸಿದುಬಿದ್ದು ಸಾವಿಗೀಡಾಗಿದ್ದಾನೆ. ಹಿಂದಿನ ದಿನ ಕೂಡ ರಾಜ್ಯದ ವಿವಿಧೆಡೆ ಇದೇ ರೀತಿಯ ಘಟನೆಗಳು ವರದಿಯಾಗಿರುವುದಾಗಿ ಗುಜರಾತ್‌ನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

heart attack

ನವರಾತ್ರಿಯ ಮೊದಲ ಆರು ದಿನಗಳಲ್ಲಿ 108 ತುರ್ತು ಆಂಬುಲೆನ್ಸ್ ಸೇವೆಗೆ ಹೃದಯ ಸಂಬಂಧಿ ಸಮಸ್ಯೆಗಳಿಗಾಗಿ 521 ಕರೆಗಳು ಬಂದಿದ್ದವು. ಅಲ್ಲದೆ, ಉಸಿರಾಟ ಸಮಸ್ಯೆ ಕುರಿತು 609 ಕರೆಗಳು ಬಂದಿದ್ದವು. ಈ ಕರೆಗಳು ಗರ್ಬಾ ನೃತ್ಯ ನಡೆಯುವ ಸಮಯವಾಗಿರುವ ಸಂಜೆ 6 ರಿಂದ ನಸುಕಿನ 2 ಗಂಟೆ ನಡುವೆ ದಾಖಲಾಗಿದ್ದವು ಎಂದು ತಿಳಿದುಬಂದಿದೆ.

Advertisements

ಈ ಆಘಾತಕಾರಿ ಬೆಳವಣಿಗೆಯು ಗುಜರಾತ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗರ್ಬಾ ನೃತ್ಯ ಆಯೋಜಕರಿಗೆ ಸೂಚನೆ ನೀಡಿದೆ.

ಗರ್ಬಾ ನಡೆಯುವ ಸ್ಥಳಗಳ ಸಮೀಪದಲ್ಲಿನ ಎಲ್ಲ ಸರ್ಕಾರಿ ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ (ಸಿಜಿಎಚ್) ರಾಜ್ಯ ಸರ್ಕಾರ ಸೂಚನೆ ಹೊರಡಿಸಿದ್ದು, ಹೈ ಅಲರ್ಟ್‌ನಿಂದ ಇರುವಂತೆ ಮನವಿ ಮಾಡಿದೆ.

ಯಾವುದೇ ತುರ್ತು ಸನ್ನಿವೇಶ ಎದುರಾದರೂ, ರೋಗಿಗಳನ್ನು ಕಾರ್ಯಕ್ರಮ ಸ್ಥಳದಿಂದ ತ್ವರಿತವಾಗಿ ಕರೆದುಕೊಂಡು ಹೋಗಲು ಆಂಬುಲೆನ್ಸ್‌ಗಳು ಸುಗಮವಾಗಿ ಬರಲು ಅನುಕೂಲವಾಗುವಂತೆ ಕಾರಿಡಾರ್‌ಗಳನ್ನು ನಿರ್ಮಿಸಲು ಗರ್ಬಾ ಆಯೋಜಕರಿಗೆ ಹಾಗೂ ಪೊಲೀಸ್ ಇಲಾಖೆಗೂ ಸೂಚಿಸಿದೆ.

ಈ ನಡುವೆ ಗರ್ಬಾ ಆಯೋಜಕರು ನೃತ್ಯ ಪ್ರದರ್ಶನಗಳಲ್ಲಿ ಭಾಗಿಯಾಗುವ ಎಲ್ಲರ ಸುರಕ್ಷತೆಗಾಗಿ ವೈದ್ಯರು ಹಾಗೂ ಆಂಬುಲೆನ್ಸ್‌ಗಳನ್ನು ಸ್ಥಳದಲ್ಲಿ ನಿಯೋಜಿಸುತ್ತಿದ್ದಾರೆ. ತಮ್ಮ ಸಿಬ್ಬಂದಿಗೆ ಸಿಪಿಆರ್ ನೀಡುವ ತರಬೇತಿ ಕೊಡಿಸುವಂತೆ ಹಾಗೂ ಭಾಗಿಯಾಗುವವರಿಗೆ ಸಾಕಷ್ಟು ನೀರು ಲಭ್ಯವಾಗುವಂತೆ ನೋಡಿಕೊಳ್ಳಲು ಆಯೋಜಕರಿಗೆ ಸೂಚನೆ ನೀಡಲಾಗಿದೆ. ಈ ವರ್ಷದ ನವರಾತ್ರಿ ಹಬ್ಬ ಆರಂಭಕ್ಕೂ ಮುನ್ನ, ಗರ್ಬಾ ಅಭ್ಯಾಸದ ವೇಳೆ ಗುಜರಾತ್‌ನಲ್ಲಿ ಮೂವರು ಹೃದಯಾಘಾತದಿಂದ ಮತಪಟ್ಟಿದ್ದ ಬಗ್ಗೆಯೂ ವರದಿಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X