ಡಿಸೆಂಬರ್‌ 20, 21, 22 ರಂದು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Date:

Advertisements

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

“ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇವೆ” ಎಂದು ಹೇಳಿದರು.

Advertisements

“ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ” ಎಂದರು.

“ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸೋಣ. ಆ ವಿಶ್ವಾಸ ನನಗಿದೆ” ಎಂದು ತಿಳಿಸಿದರು.

“ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X