1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ಕರೀಮ್ ತುಂಡಾನನ್ನು ರಾಜಸ್ಥಾನದ ಅಜ್ಮೀರ್ನಲ್ಲಿನ ಟಾಡಾ ನ್ಯಾಯಾಲಯ ಖುಲಾಸೆಗೊಳಿಸಿದೆ.
ಸಾಕ್ಷ್ಯಾಧಾರದ ಕೊರತೆಯಿಂದ 81 ವರ್ಷದ ಲಷ್ಕರ್ ಎ ತಾಯ್ಬಾ ಬಾಂಬರ್ನನ್ನು ಖುಲಾಸೆಗೊಳಿಸಲಾಗಿದೆ.
ಇತರ ಇಬ್ಬರು ಆರೋಪಿಗಳಾದ ಇರ್ಫಾನ್ ಹಾಗೂ ಹಮೀದುದ್ದೀನ್ ಎಂಬುವವರ ಆರೋಪ ಸಾಬೀತಾಗಿದ್ದು, ನ್ಯಾಯಾಲಯ ಇವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
1993ರ ಮುಂಬೈ ಸರಣಿ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂನ ಸಹಚರನಾದ ತುಂಡಾನನ್ನು 1993ರ ಸರಣಿ ಸ್ಫೋಟವಲ್ಲದೆ ಲಖನೌ, ಕಾನ್ಪುರ, ಹೈದರಾಬಾದ್, ಸೂರತ್ ಹಾಗೂ ಮುಂಬೈನಲ್ಲಿ ಉಗ್ರ ಚಟುವಟಿಗೆ ನೆಡೆಸಿದ ಕಾರಣಕ್ಕಾಗಿ 2013ರಲ್ಲಿ ಭಾರತ-ನೇಪಾಳ ಗಡಿಯಲ್ಲಿ ಬಂಧಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ
1992ರಲ್ಲಿ ಅಯೋಧ್ಯೆಯಲ್ಲಿ ನಡೆಸಿದ ಸ್ಫೋಟದಿಂದಾಗಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಸಿಬಿಐ ಕೂಡ ತುಂಡಾನನ್ನು 1993ರ ಪ್ರಮುಖ ಆರೋಪಿ ಎಂದು ಪರಿಗಣಿಸಿತ್ತು.
ಕಳೆದ ವರ್ಷ ಫೆಬ್ರವರಿಯಲ್ಲಿ ಹರಿಯಾಣದ ಕೋರ್ಟ್ ತುಂಡಾನನ್ನು 1997ರ ರೋಟಕ್ ಅವಳಿ ಸ್ಫೋಟದ ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ತುಂಡಾ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಪಿಲ್ಕುವಾ ನಿವಾಸಿಯಾಗಿದ್ದಾನೆ.