ಬೀದರ್‌ | ಜ.17 ರಿಂದ 19ರವರೆಗೆ ಜಾನುವಾರು, ಕುಕ್ಕುಟ ಮತ್ತು ಮತ್ಸ್ಯಮೇಳ

Date:

Advertisements

ಬೀದರ್‌ ತಾಲ್ಲೂಕಿನ ಕಮಠಾಣ ಸಮೀಪದ ನಂದಿನಗರದ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದದ್ಯಾಲಯದಲ್ಲಿ ಜನವರಿ17 ರಿಂದ 19 ರವರೆಗೆ ಮೂರು ದಿನಗಳ ಕಾಲ ವಿವಿಧ ಜಾನುವಾರು, ಕುಕ್ಕುಟ ಮತ್ತು ಮತ್ಸ್ಯಮೇಳ ಆಯೋಜಿಸಲಾಗಿದೆ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ.ವೀರಣ್ಣ ಹೇಳಿದರು.

ʼರೈತರಿಗೆ, ಪಶು ಹಾಗೂ ಮೀನುಗಾರಿಕೆ ಸಾಕಾಣಿಕೆಯಲ್ಲಿ ಆಸಕ್ತಿಯುಳ್ಳ ಯುವ ಜನರಿಗೆ ವಿವಿಧ ತಳಿಗಳ, ಹೊಸ ತಂತ್ರಜ್ಞಾನಗಳು, ಸಾಕಾಣಿಕ ಪದ್ಧತಿಗಳು ಹಾಗೂ ಇತರ ಅವಿಷ್ಕಾರಗಳನ್ನು ತಿಳಿದುಕೊಳ್ಳಲು ಒಂದು ಉತ್ತಮ ಅವಕಾಶವಾಗಿದೆ. ಮೇಳದಲ್ಲಿ 180ಕ್ಕೂ ಹೆಚ್ಚು ಮಳಿಗೆಗಳು ಅಳವಡಿಸಲಾಗುತ್ತದೆ, ಇದರಲ್ಲಿ ವಿವಿಧ ಇಲಾಖೆಗಳಾದ ಕೃಷಿ, ರೇಷ್ಮೆ, ತೋಟಗಾರಿಕೆ ಮತ್ತು ಜಾನುವಾರು ಇಲಾಖೆಗಳು ಭಾಗವಹಿಸುತ್ತಿವೆ. ಎಲ್ಲರಿಗೂ ಉಚಿತ ಪ್ರವೇಶವಿದ್ದು, ವಿವಿಧ ಜಿಲ್ಲೆಯಿಂದ ಆಗಮಿಸುವ ರೈತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ರಾಜ್ಯದ 31 ಜಿಲ್ಲೆಯ ಒಬ್ಬ ರೈತ ಮತ್ತು ರೈತ ಮಹಿಳಾಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಇದಲ್ಲದೆ ರೈತರ ಕಲಿಕೆಗಾಗಿ ವಿಜ್ಞಾನಿ-ರೈತ ಸಂವಾದ ಹಾಗೂ ರೈತರ ಸಂವಾದ ಅದಲ್ಲದೆ ಅತ್ಯುತ್ತಮ ಮಳಿಗೆ ಅತ್ಯುತ್ತಮ ಜಾನುವಾರು ತಳಿ ಹೀಗೆ ವಿವಿಧ ಪ್ರಶಸ್ತಿಗಳನ್ನು ಕೂಡ ವಿತರಿಸಲಾಗುತ್ತದೆ ಎಂದರು.

Advertisements

ಪಶು ಮೇಳದಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಫಲಪುಷ್ಪ ಪ್ರದರ್ಶನವು ʼಶಾಂತಿ ಮತ್ತು ಸಮಾನತೆʼ ಹೆಸರಿನಲ್ಲಿ ಆಯೋಜಿಸಲಾಗುತ್ತಿದೆ. ಗೌತಮ ಬುದ್ಧ, ಭಗವಾನರ ಮೂರ್ತಿ, ಕುವೆಂಪು, ಬಸವಣ್ಣನವರ ಭಾವಚಿತ್ರಗಳನ್ನು ಹೂವಿನ ಅಲಂಕರಿಸಲಾಗುತ್ತದೆ. ತರಕಾರಿಗಳನ್ನು ನೆಲದ ಮೇಲೆ ಕೆತ್ತಿ ತೋರಿಸುವ ವಿನೂತನ ಪ್ರದರ್ಶನ, ಹೂ ಕುಂಡಗಳ ಕಲಾತ್ಮಕ ಜೋಡಣೆ ಪ್ರದರ್ಶನದ ಪ್ರಮುಖ ಆಕಷರ್ಣೆಯಾಗಿರಲಿದೆʼ ಎಂದು ಕುಲಪತಿ ಹೇಳಿದರು.

ಮೇಳದ ಕೊನೆಯ ದಿನದಂದು ಶ್ವಾನ ಪ್ರಿಯರಿಗೆ ಶ್ವಾನ ಪ್ರದರ್ಶನ ಕೂಡ ಆಯೋಜಿಸಲಾಗುತ್ತಿದೆ. ಸುಮಾರು 15 ವಿವಿಧ ತಳಿಗಳ 200 ಶ್ವಾನಗಳು ಇದರಲ್ಲಿ ಭಾಗವಹಿಸಲಿವೆ. ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸುವ ನಮ್ಮದೇ ಆದ ಮುಧೋಳ ಹೌಂಡ್‍ ಕೂಡ ಪ್ರದರ್ಶನಗೊಳ್ಳಲಿದೆ. ಪ್ರತಿ ಗಂಡು ಮತ್ತು ಹೆಣ್ಣು ಶ್ವಾನಗಳಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನ ನೀಡಲಾಗುತ್ತಿದೆ.

ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಶ್ವಾನಗಳನ್ನು ಚಾಂಪಿಯನ್ ಆಫ್ ಚಾಂಪಿಯನ್ಸ್ ಮತ್ತು ರನ್ನರ್-ಅಪ್‍ಚಾಂಪಿಯನ್ ಆಫ್ ಚಾಂಪಿಯನ್ಸ್ ನೀಡಲಾಗುತ್ತದೆ. ಮೊದಲ ಬಹುಮಾನ 5000 ಮತ್ತು ಎರಡನೇ ಬಹುಮಾನ 3000 ಬಹುಮಾನ ಇರಲಿದೆ. ಪ್ರದರ್ಶನದ ಜೊತೆಗೆ ಎಲ್ಲ ಶ್ವಾನಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕೆ ನೀಡಲಾಗುವುದುʼ ಎಂದ ತಿಳಿಸಿದರು.

WhatsApp Image 2025 01 14 at 9.57.42 AM

ಪಶುಸಂಗೋಪನೆ, ಮೀನು ಸಾಕಾಣೆಗೆ ಹಾಗೂ ಕೋಳಿ ಸಾಕಾಣಿಕೆ ಬಗ್ಗೆ ತಿಳಿದು ಕೊಳ್ಳಲು ರಾಜ್ಯದ ರೈತರಿಗೆ, ಯುವ ಜನರಿಗೆ ಹಾಗೂ ಶಾಲಾ ಮಕ್ಕಳಿಗೆ ಒಂದು ಉತ್ತಮ ಅವಕಾಶವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಈ ಮೇಳದಲ್ಲಿ ಪಾಲ್ಗೊಂಡು ಮೇಳದ ಲಾಭವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬೇಡಿಕೆ : ಇಚ್ಚಾಶಕ್ತಿ ತೋರದ ಜನಪ್ರತಿನಿಧಿಗಳು

ಆಡಳಿತ ಮಂಡಳಿ ಸದಸ್ಯರಾದ ಬಸವರಾಜ ಬತಮುರ್ಗೆ, ಡೀನ್ ಎಂ.ಕೆ.ತಾಂದಳೆ, ಡಾ.ವಿವೇಕ ಹೊಸಳ್ಳಿ, ಶ್ರೀಕಾಂತ ಕುಲಕರ್ಣಿ ಮಾಧ್ಯಮ ಸಂಯೋಜಿತ ಚನ್ನಪ್ಪಗೌಡ ಬಿರಾದಾರ ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ನರಸಪ್ಪ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಇತರೆ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X