ಬಾಗಲಕೋಟೆ ಉಪಚುನಾವಣೆ | ಬದಲಾವಣೆ ಬಯಸುವುದಾದರೆ ನನಗೆ ಅವಕಾಶ ನೀಡಲಿ: ಕೆಪಿಸಿಸಿ ಸದಸ್ಯೆ ರಕ್ಷಿತಾ

Date:

ಹಿರಿಯ ನಾಯಕ ಶಾಸಕ ಎಚ್ ವೈ ಮೇಟಿ ಅಗಲಿಕೆ ಬಹಳಷ್ಟು ನೋವು ತಂದಿದೆ. ಈ ಸ್ಥಾನಕ್ಕೆ ನಡೆಯುತ್ತಿರುವ ಬಾಗಲಕೋಟೆ ಉಪ ಚುನಾವಣೆಗೆ ಅವರ ಕುಟುಂಬದಲ್ಲಿ ಯಾರಿಗೇ ಟಿಕೆಟ್ ನೀಡಿದರೂ ನನ್ನ ಸಂಪೂರ್ಣ ಬೆಂಬಲವಿದೆ. ಪಕ್ಷವು ಬದಲಾವಣೆ ಬಯಸಿ ಬೇರೆಯವರಿಗೆ ಅವಕಾಶ ನೀಡುವುದಾದರೆ ನನ್ನನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಕೆಪಿಸಿಸಿ ಸದಸ್ಯೆ ರಕ್ಷಿತಾ ಭರತ್ ಕುಮಾರ ತಿಳಿಸಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಟಿ ಅವರ ಕುಟುಂಬದಲ್ಲಿ ನಾನು ಜನಿಸಿಲ್ಲ. ಆದರೆ ತಮ್ಮ ಕುಟುಂಬದ ಸದಸ್ಯರಂತೆಯೇ ಕಂಡಿದ್ದಾರೆ. ರಾಜಕೀಯ ಹಾಗೂ ಪಕ್ಷದಲ್ಲಿ ಈ ಮಟ್ಟಿಗೆ ಬೆಳೆಯುವಲ್ಲಿ ಮೇಟಿ ಅವರು ಬೆನ್ನೆಲುಬಾಗಿ ನಿಂತಿದ್ದರು. ಕಳೆದ 17 ವರ್ಷಗಳಿಂದ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ, ಏಳು ವರ್ಷ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈ ಹಿಂದೆ ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೇಳಿದ್ದೆ. ವರಿಷ್ಠರು ಮುಂದೆ ಅವಕಾಶ ಸಿಗಲಿದೆ ಅಂತ ಭರವಸೆ ‌ನೀಡಿದ್ದರು. ಈಗ ಅಕಾಲಿಕವಾಗಿ ಉಪ ಚುನಾವಣೆಯಲ್ಲಿ ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ನೀಡಲು ಪಕ್ಷ ನಿರ್ಧಾರ ಮಾಡಿದರೆ ನನ್ನ ಬೆಂಬಲ ಇದೆ. ಬೇರೆಯವರಿಗೆ ಅವಕಾಶ ನೀಡುವ ಹಾಗೆ ಪಕ್ಷದ ವರಿಷ್ಠರು ಮುಂದುವರೆದಲ್ಲಿ ನನಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ರೇಷ್ಮೆ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಆಯೋಜನೆ

ಶ್ರೀನಿವಾಸಪುರ ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ...

ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು...

ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...