ಭಟ್ಕಳ | ಮುರುಡೇಶ್ವರದಲ್ಲಿ ಯುವಕನ ಪ್ರಾಮಾಣಿಕತೆ; ಕಳೆದುಹೋದ ಬ್ಯಾಗ್‌ ಹಸ್ತಾಂತರ

Date:

Advertisements

ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರದಲ್ಲಿ ಮೌಲ್ಯಯುತ ವಸ್ತುಗಳನ್ನು ಕಳೆದುಕೊಂಡಿದ್ದ ಹೈದರಾಬಾದ್ ಪ್ರವಾಸಿಗರಿಗೆ ಸ್ಥಳೀಯ ಯುವಕ ವಿಷ್ಣು ನಾಯ್ಕ ಅವರು ಪ್ರವಾಸಿಗರ ಕಳೆದುಹೋಗಿದ್ದ ಬ್ಯಾಗನ್ನು ಹಿಂದುರಿಗಿಸಿ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ದೇಗುಲದ ಬಳಿ ಸಿಕ್ಕಿದ್ದ ₹48,190 ನಗದು ಮತ್ತು ಇತರೆ ದಾಖಲೆಗಳಿರುವ ಬ್ಯಾಗ್‌ ಅನ್ನು ಯುವಕ ಯಾವುದೇ ಆಸೆಪಡೆದೆ ಪೊಲೀಸರಿಗೆ ಒಪ್ಪಿಸಿ, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಏನಿದು ಘಟನೆ?

ದೇವಸ್ಥಾನಕ್ಕೆ ಬಂದಿದ್ದ ಹೈದರಾಬಾದ್ ಮೂಲದ ಪ್ರವಾಸಿಗರು ಆಕಸ್ಮಿಕವಾಗಿ ತಮ್ಮ ಬ್ಯಾಗ್‌ ಅನ್ನು ದೇವಸ್ಥಾನದ ಆವರಣದಲ್ಲಿ ಕಳೆದುಕೊಂಡಿದ್ದರು. ಇದೇ ವೇಳೆ, ಗರಡಿಗಡ್ಡೆಯ ವಿಷ್ಣು ನಾಗಪ್ಪ ನಾಯ್ಕ ಅವರಿಗೆ ಈ ಬ್ಯಾಗ್‌ ಸಿಕ್ಕಿತು. ಯಾವುದೇ ವಿಳಂಬ ಮಾಡದೆ ಅವರು ತಕ್ಷಣವೇ ಬ್ಯಾಗ್‌ ಅನ್ನು ಮುರುಡೇಶ್ವರ ಪೊಲೀಸ್‌ ಠಾಣೆಗೆ ತಲುಪಿಸಿ, ತಮ್ಮ ಪ್ರಾಮಾಣಿಕತೆ ಮೆರೆದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಅರಣ್ಯ ಭೂಮಿ ಸ್ವಾಧೀನಕ್ಕೆ ಸುಪ್ರೀಂ ಕೋರ್ಟ್ ಆದೇಶ – ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ ರಚನೆ.

ಪೊಲೀಸರ ಮೂಲಕ ಹಸ್ತಾಂತರ ನಂತರ, ಪಿಎಸ್‌ಐ ಹನುಮಂತ ಬಿರಾದರ್ ಅವರ ಸಮ್ಮುಖದಲ್ಲಿ ಕಳೆದುಹೋದ ಬ್ಯಾಗ್‌ ಅನ್ನು ಅದರ ವಾರಸುದಾರರಾದ ಪ್ರವಾಸಿಗರಿಗೆ ಹಸ್ತಾಂತರಿಸಲಾಯಿತು. ಅಷ್ಟೊಂದು ದೊಡ್ಡ ಮೊತ್ತದ ನಗದನ್ನು ಪ್ರಾಮಾಣಿಕವಾಗಿ ಹಿಂದಿರುಗಿಸಿದ ವಿಷ್ಣು ನಾಯ್ಕ ಅವರ ಕಾರ್ಯಕ್ಕೆ ಪ್ರವಾಸಿಗರು ಧನ್ಯವಾದ ಸಲ್ಲಿಸಿದರು. ಅಲ್ಲದೆ, ಪೊಲೀಸರು ಹಾಗೂ ಸಾರ್ವಜನಿಕರಿಂದಲೂ ವಿಷ್ಣು ನಾಯ್ಕ ಅವರ ಸಮಯಪ್ರಜ್ಞೆ ಮತ್ತು ಪ್ರಾಮಾಣಿಕ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡದ ಮುಂಗಾರು ವರದಿ: ಕೋಟ್ಯಂತರ ಮೌಲ್ಯದ ಸಾರ್ವಜನಿಕ ಆಸ್ತಿಗೆ ಹಾನಿ!

ಈ ವರ್ಷ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ...

ರಾಯಚೂರು |ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ನಿರ್ಲಕ್ಷ್ಯ : ಅಧಿಕಾರಿ ಅಮಾನತು

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ತಾಲ್ಲೂಕು...

ಕುಮಟಾ ಶಾಸಕ ದಿನಕರ ಶೆಟ್ಟಿ ಗೆಲುವಿಗೆ ಹೈಕೋರ್ಟ್ ಮುದ್ರೆ: ಮತ ಎಣಿಕೆ ಅಕ್ರಮದ ಆರೋಪ ತಳ್ಳಿಹಾಕಿದ ನ್ಯಾಯಾಲಯ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುಮಟಾ-ಹೊನ್ನಾವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ದಿನಕರ...

ಚಿಕ್ಕಮಗಳೂರು l ಹದಗೆಟ್ಟ ರಸ್ತೆ; ಅಧಿಕಾರಿಗಳ ನಿರ್ಲಕ್ಷ್ಯ; ಸುಮೊಟೊ ಪ್ರಕರಣ ದಾಖಲು

ಮಲೆನಾಡಿನ ಭಾಗಗಳಲ್ಲಿ ಅದೆಷ್ಟೋ ರಸ್ತೆಗಳು ಹಳ್ಳ ಗುಂಡಿಗಳ ರೀತಿಯಲ್ಲಿ ಕಾಣಿಸುತ್ತಿದೆ, ವಾಹನ...

Download Eedina App Android / iOS

X