Live Updates | ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆ ಸಲ್ಲಿಸುವಾಗ ಎಡವಿದ ಜಯ್ ಶಾ; ಟ್ವಿಟರ್‌ನಲ್ಲಿ ಟ್ರೋಲ್

Date:

Advertisements

28 Sep 2023, 03:45 PM

ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆ ಸಲ್ಲಿಸುವಾಗ ಎಡವಿದ ಜಯ್ ಶಾ; ಟ್ವಿಟರ್‌ನಲ್ಲಿ ಟ್ರೋಲ್

ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಸಾಲಿನ ಏಷ್ಯನ್‌ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್‌ನಲ್ಲಿ ಶ್ರೀಲಂಕಾವನ್ನು ಭಾರತೀಯ ಮಹಿಳಾ ತಂಡವು 19 ರನ್‌ಗಳಿಂದ ಸೋಲಿಸಿ, ಚಿನ್ನದ ಪದಕ ಗಳಿಸಿತ್ತು. ಹೀಗಾಗಿ, ಮಹಿಳಾ ತಂಡವನ್ನು ಬಿಸಿಸಿಐ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಗ ಜಯ್ ಶಾ ಅಭಿನಂದನಾ ಭಾಷಣ ಮಾಡುವ ವೇಳೆ ಎಡವಿದ್ದು, ಈ ವಿಡಿಯೋ ಈಗ ಟ್ವಿಟರ್‌ನಲ್ಲಿ ಟ್ರೋಲ್‌ಗೆ ಕಾರಣವಾಗಿದೆ. ಸ್ಮೃತಿ ಮಂಧಾನಾ ಹೆಸರನ್ನು ಉಲ್ಲೇಖಿಸಿ ಅಭಿನಂದಿಸುವಾಗ ಎಡವಿದ್ದರು. ವಿಡಿಯೋ ಈಗ ವೈರಲಾಗಿದೆ.


28 Sep 2023, 03:00 PM

Advertisements

ಕರ್ನಾಟಕ ಬಂದ್ | ಸಾರಿಗೆ ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ

ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ನೂರಾರು ಕನ್ನಡಪರ ಸಂಘಟನೆಗಳು ಸೆ.29ರಂದು ಕರ್ನಾಟಕ ಬಂದ್​ಗೆ ಕರೆ ಕೊಟ್ಟಿವೆ. ಆದರೆ ಈ ನಡುವೆ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳ ಸಂಚಾರ ಇರಲಿದ್ದು, ನೌಕರರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚನೆ ನೀಡಿದೆ.

bmtc ksrtc 1

28 Sep 2023, 03:00 PM

ಸುಮಲತಾರಿಗೆ 2 ಗಂಟೆಯಲ್ಲಿ ಪ್ರಧಾನಿ ಭೇಟಿ ಸಿಗುವ ಅವಕಾಶ ಸಿಎಂಗೆ ಯಾಕಿಲ್ಲ? ಕಾಂಗ್ರೆಸ್ ವಕ್ತಾರ ಲಕ್ಷ್ಮಣ್

ಕಾವೇರಿ ವಿಚಾರವಾಗಿ ಪ್ರಧಾನಿ ಭೇಟಿಗೆಂದು ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸಹಿತ ಕ್ಯಾಬಿನೆಟ್ ಸಚಿವರು ದೆಹಲಿಗೆ ಹೋಗಿ ನಾಲ್ಕು ದಿವಸ ಕಾದರೂ ಅವಕಾಶ ನೀಡಿಲ್ಲ. ಆದರೆ ಪ್ರಧಾನಿಗೆ ಪತ್ರ ಬರೆದ ಎರಡು ಗಂಟೆಯಲ್ಲಿ ಮಂಡ್ಯ ಸಂಸದೆ ಸುಮಲತಾರಿಗೆ ಅವಕಾಶ ಸಿಗುತ್ತದೆ. 10 ಗಂಟೆಗೆ ಪತ್ರ ಬರೆದರೆ 12 ಗಂಟೆಗೆ ಭೇಟಿಯಾಗಲು ಅವಕಾಶ ಸಿಗುತ್ತದೆ. ಅದಕ್ಕೆ ನಮಗೆ ಹೊಟ್ಟಿಕಿಚ್ಚಿಲ್ಲ. ಓರ್ವ ಸಿಎಂ, ಡಿಸಿಎಂಗೆ ಅವಮಾನ ಮಾಡ್ತೀರಿ. ವಿಪಕ್ಷ ನಾಯಕರಿಗೂ ಬೆಲೆ ಇಲ್ಲವೇ? ಎಂದು ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಪ್ರಶ್ನಿಸಿದ್ದಾರೆ.

ಎಂ ಲಕ್ಷ್ಮಣ್‌

28 Sep 2023, 11:20 PM

ಕಲಬುರಗಿ | ಭಗತ್ ಸಿಂಗ್ ಜನ್ಮದಿನದಂದು ಗಾಂಧಿ ಹಂತಕ ಗೋಡ್ಸೆ ಫೋಟೊ ಮೆರವಣಿಗೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ನಡೆದ ಭಗತ್ ಸಿಂಗ್ ಜನ್ಮದಿನದ ಪ್ರಯುಕ್ತ ನಡೆದ ಮೆರವಣಿಗೆಯಲ್ಲಿ ಗಾಂಧೀಜಿ ಹಂತಕ ನಾಥೂರಾಮ್ ಗೋಡ್ಸೆಯ ಫೋಟೊವನ್ನು ಮೆರವಣಿಗೆ ಮಾಡಲಾಗಿದೆ. ವೈಜೂ ಸಾಹುಕಾರ ಮುರಗಾನೂರ ಇವರ ಮುಂದಾಳತ್ವದಲ್ಲಿ ನಡೆದ ಮೆರವಣಿಗೆಯಲ್ಲಿ, ಭಗತ್ ಸಿಂಗ್, ರಾಣಿ ಚೆನ್ನಮ್ಮ, ಸರ್ದಾರ್ ವಲ್ಲಭಭಾಯಿ ಪಟೇಲ್ ಮುಂತಾದ ರಾಷ್ಟ್ರ ನಾಯಕರ ಫೋಟೊ ಜೊತೆಗೆ ಸಾವರ್ಕರ್ ಮತ್ತು ಗಾಂಧಿ ಹಂತಕ ಗೋಡ್ಸೆಯ ಫೋಟೋವನ್ನೂ ಮೆರವಣಿಗೆ ಮಾಡಲಾಗಿದೆ.

godse pic

28 Sep 2023, 11:00 PM

ಕರ್ನಾಟಕ ಬಂದ್: ಸಿನಿಮಾ ಬಿಡುಗಡೆ ಮುಂದೂಡಲು ನಿರ್ಮಾಪಕರ ಸಂಘ ಮನವಿ

ಕಾವೇರಿ ನೀರಿನ ವಿಚಾರವಾಗಿ ಕನ್ನಡಪರ ಸಂಘಟನೆಗಳು ನಾಳೆ(ಸೆ.29) ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈ ವಾರ ಸಿನಿಮಾಗಳನ್ನು ಬಿಡುಗಡೆ ಮಾಡದಂತೆ ಕರ್ನಾಟಕ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ತಿಳಿಸಿದ್ದಾರೆ. ಈಗಾಗಲೇ ಸಂಬಂಧಪಟ್ಟ ನಿರ್ಮಾಪಕರ ಜೊತೆ ಮಾತನಾಡಲಾಗಿದೆ. ಅವರು ಕೂಡ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಹೇಳಿದರು.

karnataka bund pic
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X