ಮಲೆನಾಡಿನ ಜನರ ಪಾಲಿಗೆ ‘ಮರಣಶಾಸನ’ವಾಗಿ ಪರಿಣಮಿಸಿರುವ ಅರಣ್ಯ ಕಾಯ್ದೆಗಳಲ್ಲೊಂದಾದ ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ಸೆ.19ರ ಶನಿವಾರ ರೈತರು ಹಾಗೂ ಸಾರ್ವಜನಿಕರು ಬೃಹತ್ ಪಾದಯಾತ್ರೆಯನ್ನು ನಡೆಸಲಾಯಿತು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ
ಕೇಂದ್ರ ಸರ್ಕಾರ ಮಲೆನಾಡಿನ ಜನತೆಗೆ ಕಾಯ್ದೆ ಕಾನೂನನ್ನು ತಂದು ಸಂಕಷ್ಟಕ್ಕೆ ಸಿಲುಕಿಸಿದೆ. ಚಿಕ್ಕಮಗಳೂರು ತಾಲೂಕಿನ ಸಂಗಮೇಶ್ವರಪೇಟೆಯಿಂದ ಆರಂಭವಾದ ಈ ಪಾದಯಾತ್ರೆ ಬಾಳೆಹೊನ್ನೂರುವರೆಗೆ ನಿರಂತರವಾಗಿ ಸಾಗಿತು. ಪಾದಯಾತ್ರೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್. ಡಿ ತಮ್ಮಯ್ಯ ಪಾಲ್ಗೊಂಡಿದ್ದರು.




