ಚಿಕ್ಕಮಗಳೂರು l ದಯಾಮರಣ ಕೋರಿ ಏಕಾಂಗಿ ಪ್ರತಿಭಟಿಸಿದ ರೈತ 

Date:

Advertisements

ರಸ್ತೆ ಅಗಲೀಕರಣದಿಂದ ಮನೆ ಹಾಗೂ ಜಮೀನು ಕಳೆದುಕೊಳ್ಳುವ ಆತಂಕದಲ್ಲಿ ರೈತರೊಬ್ಬರು ದಯಾಮರಣ ನೀಡುವಂತೆ ಹಗ್ಗ, ಕತ್ತಿ, ವಿಷದ ಬಾಟಲಿಯನ್ನು ಇಟ್ಟುಕೊಂಡು ಏಕಾಂಗಿಯಾಗಿ ಪ್ರತಿಭಟನೆಗೆ ಕುಳಿತಿರುವ ಘಟನೆಯೊಂದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತಹಶೀಲ್ದಾರ್ ಕಚೇರಿಯ ಮುಂದೆ ಮಂಗಳವಾರ ನಡೆದಿದೆ.

Screenshot 2025 03 20 19 31 03 57 7352322957d4404136654ef4adb64504
ರೈತ ಐ ಎಂ ಶ್ರೀನಿವಾಸ್ ಕತ್ತಿ, ಹಗ್ಗ , ವಿಷದ ಬಾಟಲಿ ಇಟ್ಟು ಏಕಾಂಗಿ ಪ್ರತಿಭಟನೆ

ಕನ್ನಾಪುರ ಮಾರ್ಗವಾಗಿ ಹಾದು ಹೋಗಿರುವ ವಿರಾಜಪೇಟೆ, ಬೈಂದೂರು ರಾಜ್ಯ ಹೆದ್ದಾರಿಯನ್ನು 50 ಅಡಿ ಅಗಲೀಕರಣ ಮಾಡುವುದಾಗಿ ನೋಟಿಸನ್ನು ಅಧಿಕಾರಿಗಳು ನೀಡಿದ್ದಾರೆ. ಹಾಗೆಯೇ, ರಸ್ತೆ ಅಗಲೀಕರಣ ಮಾಡಲು ಜಾಗವನ್ನು ಗುರುತು ಪಡಿಸಿದ್ದಾರೆ. ರಸ್ತೆ ಅಗಲೀಕರಣದಿಂದಾಗಿ ನಮ್ಮ ಮನೆ, ಜಮೀನು ಕಳೆದುಕೊಳ್ಳಬೇಕಾಗುತ್ತದೆ. ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಏನೂ ಪ್ರಯೋಜನವಿಲ್ಲ, ಗಂಟೆಗಟ್ಟಲೆ ಬೆಳಗ್ಗೆಯಿಂದ ರಾತ್ರಿಯವರೆಗೂ ಅಧಿಕಾರಿಗಳ ಕಚೇರಿ ಮುಂದೆ ಕೂರಿಸಿಕೊಂಡು ನಂತರ ಮನೆಗೆ ಹೋಗಿ ಎಂದು ಅಧಿಕಾರಿಗಳು ಹೇಳುತ್ತಾರೆ, ಎಂದು ದಯಾಮರಣ ಕೋರಿದ ರೈತ ಐ ಎಂ ಶ್ರೀನಿವಾಸ್ ಈದಿನ.ಕಾಮ್ ಜೊತೆ ಮಾತಾಡಿದ್ದಾರೆ.

Screenshot 2025 03 20 20 50 53 69 a49c29324e15581d7b6335d31382dfc2
ರೈತ ದಯಾಮರಣ ಕೋರಿರುವ ಪತ್ರ

ದಯಾಮರಣ ಅರ್ಜಿ ಸಲ್ಲಿಸಿ 60 ದಿನ ಕಳೆದರೂ ಯಾವುದೇ ವಿಚಾರಣೆ ನಡೆಯದ ಕಾರಣ ಮತ್ತು ಅಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದು ಸಾಕಾಗಿ ಕೊನೆಗೆ ನ್ಯಾಯ ಕೊಡಿ ಇಲ್ಲ ಸಾಯಲು ಬಿಡಿ, ಎಂದು ಮೂಡಿಗೆರೆ ತಹಶೀಲ್ದಾರ್ ಕಚೇರಿ ಮುಂದೆ ರೈತರಾದ ಐ ಎಂ ಶ್ರೀನಿವಾಸ್ ಎಂಬ ವ್ಯಕ್ತಿ ವಿಷದ ಬಾಟಲಿ, ಹಗ್ಗ, ಕತ್ತಿ ಇಟ್ಟುಕೊಂಡು ಪ್ರತಿಭಟಿಸಿದ್ದಾರೆ. ಸುಮಾರು 30 ವರ್ಷದಿಂದ ನ್ಯಾಯಾಲಯದ ಆದೇಶವನ್ನು ತಾಲ್ಲೂಕು ಕಛೇರಿಯಲ್ಲಿ ಇಲ್ಲಿತನಕ ವಿಚಾರಣೆ ಮಾಡದೇ ಇರುವುದರಿಂದ, ಲೋಕೋಪಯೋಗಿ ಇಲಾಖೆಯವರು ನಿಮಗೆ ಪ್ರಶ್ನೆ ಮಾಡುವ ಅಧಿಕಾರ ಇಲ್ಲವೆಂದು ಹೇಳುತ್ತಾರೆ. ನನ್ನ ಮನವಿಗೆ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದ ಕಾರಣ  ಸಾಯಲು ಮುಂದಾಗಿದ್ದೇನೆಂದು ಐ ಎಂ ಶ್ರೀನಿವಾಸ್ ತಿಳಿಸಿದರು. 

Advertisements
Screenshot 2025 03 20 19 35 57 76 7352322957d4404136654ef4adb64504
ಅಧಿಕಾರಿಗಳಿಗೆ ಸಲ್ಲಿಸಿರುವ ಅರ್ಜಿ

ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಯಾದ ಮೀನಾ ನಾಗರಾಜ್ ಅವರಿಗೆ ಮನವಿ ಮಾಡಿ ಏಕಾಂಗಿ ಪ್ರತಿಭಟನೆಗೆ ಕುಳಿತಿದ್ದೆ. ಇದನ್ನೂ ಗಮನಿಸಿದ ಮೂಡಿಗೆರೆ ತಾಲೂಕಿನ ಪೊಲೀಸರು ಹಗ್ಗ, ಕತ್ತಿ, ವಿಷದ ಬಾಟಲಿಯನ್ನೂ ವಶಕ್ಕೆ ಪಡೆದಿದ್ದಾರೆ ಎಂದು ರೈತರಾದ ಐ ಎಂ ಶ್ರೀನಿವಾಸ್ ಈದಿನ.ಕಾಮ್ ಗೆ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪರೀಕ್ಷೆಯಲ್ಲಿ ಅನುತ್ತೀರ್ಣ ಭಯದಿಂದ ವಿದ್ಯಾರ್ಥಿನಿ ಅತ್ಮಹತ್ಯೆ 

ನ್ಯಾಯ ದೊರೆತ್ತಿಲ್ಲವೆಂದರೆ ನ್ಯಾಯಕ್ಕಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಗಾಂಧಿಜೀಗೆ ಮನವಿ ಸಲ್ಲಿಸಿ. ಹಾಗೆಯೇ,  ಅಜಾದ್ ಪಾರ್ಕ್ ವೃತ್ತದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತೇನೆಂದು ಐ ಎಂ ಶ್ರೀನಿವಾಸ್ (ರೈತ) ತಿಳಿಸಿದರು. ಆದಷ್ಟು ಬೇಗ ರೈತರಾದ ಐ ಎಂ ಶ್ರೀನಿವಾಸ್ ಅವರಿಗೆ ನ್ಯಾಯ ಸಿಗಲಿ ಎಂದು ಆಶಿಸೋಣ.

WhatsApp Image 2024 10 24 at 12.02.30
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X