ಬೀದರ್ | ಅಮಿತ್ ಶಾ ರಾಜೀನಾಮೆಗೆ ದಲಿತ ಹಕ್ಕುಗಳ ಸಮಿತಿ ಆಗ್ರಹ

Date:

Advertisements

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿ.18ರಂದು ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್‌ ಪಡೆದು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಲಿತ ಹಕ್ಕುಗಳ ಸಮಿತಿ ಆಗ್ರಹಿಸಿದೆ.

ಸೋಮವಾರ ಸಮಿತಿಯ ಪದಾಧಿಕಾರಿಗಳು ಹುಮನಾಬಾದ್ ಪಟ್ಟಣದ ಪ್ರವಾಸಿ ಮಂದಿರದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ಕೇಂದ್ರ ಸರ್ಕಾರ ಹಾಗೂ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಾತನಾಡುವ ವೇಳೆ ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿದೆ. ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದರ ಬದಲು ದೇವರ ಹೆಸರು ಹೇಳಿದರೆ ಏಳೇಳು ಜನ್ಮದಲ್ಲೂ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು’ ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ’ ಎಂದು ಕಿಡಿಕಾರಿದರು.

Advertisements

ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿರುವ ಅವರಿಗೆ ಗೃಹಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆಯು ಇರುವುದಿಲ್ಲ. ನಾಲಿಗೆ ಹರಿಬಿಟ್ಟಿರುವ ಅಮಿತ್ ಶಾ ದೇಶದ ಜನತೆಗೆ ಕ್ಷಮೆ ಕೇಳಬೇಕು. ಹಾಗೆಯೇ ಕೇಂದ್ರ ಸರ್ಕಾರ ಅವರಿಂದ ರಾಜೀನಾಮೆ ಪಡೆದು ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ರೂಪಿಸಲಾಗುವುದು’ ಎಂದು ಎಚ್ಚರಿಸಿದರು.

ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮಹಿಳೆಯರನ್ನು ತುಚ್ಛವಾಗಿ ಮಾತನಾಡಿರುವುದು ತೀವ್ರವಾಗಿ ಖಂಡಿಸುತ್ತೇವೆ. ಮಹಿಳೆಯರ ಕುರಿತು ಮನುವಾದಿಗಳ ನಡವಳಿಕೆ ಒಪ್ಪಲಾಗದು ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಲೋಕಾಯುಕ್ತ ದಾಳಿ : ಲಂಚ ಪಡೆದ ನೋಟು ನುಂಗಿದ ಸಹಕಾರಿ ಸಂಘಗಳ ಉಪನಿಬಂಧಕ!

ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಸಂಚಾಲಕ ಶಶಿಕಾಂತ್ ಡಾಂಗೆ, ಸಹ ಸಂಚಾಲಕ ಪ್ರಭು ಸಂತೋಷಕರ್ ಹಾಗೂ ಪ್ರಮುಖರಾದ ಅಂಬುಬಾಯಿ ಮಾಳಗೆ, ಗೌಸೋದ್ದೀನ್, ರೇಷ್ಮಾ ಹಂಸರಾಜ್, ಇಸಾಮೋದ್ದೀನ್ ಮೀರಾಸಾಬ್, ಬಸವರಾಜ ಮಾಳಗೆ, ಶ್ರೀಮಂತ, ಜೈಭೀಮ್, ಅನೀಲ್ ದೊಡ್ಡಿ, ಯುವರಾಜ್‌ ಐಹೊಳ್ಳಿ ಸೇರಿದಂತೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X