ದಾವಣಗೆರೆ | ಕೆಎಸ್ಸಾರ್ಟಿಸಿ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಬಸವ ಜಯಂತಿ ಆಚರಣೆ.‌

Date:

Advertisements

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ದಾವಣಗೆರೆ ವಿಭಾಗ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಬಸವ ಜಯಂತಿ ಮತ್ತು ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನವರಿಗೆ ಅಭಿನಂದನಾ ಸಮಾರಂಭವನ್ನು ದಾವಣಗೆರೆ ಕೆಎಸ್ಸಾರ್ಟಿಸಿ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

1001972209

ಸಮಾರಂಭದ ಸಾನಿಧ್ಯವನ್ನು ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಶ್ರೀ ಗಳು ವಹಿಸಿಕೊಂಡು ಮಾತನಾಡಿದ ಅವರು, “ವಿರಕ್ತಮಠದಿಂದ ಬಸವ ಜಯಂತಿಯ ಅಂಗವಾಗಿ ಆಯೋಜಿಸಿದ ಬಸವ ಜ್ಯೋತಿ ಕಾರ್ಯಕ್ರಮಕ್ಕೆ ಇಲ್ಲಿನ ಸಮಾಜದ ನೌಕರರ ಸಂಘದವರು ಭಾಗವಹಿಸಿ ಸಹಕರಿಸಿದ್ದಾರೆ. ದಾವಣಗೆರೆಯಲ್ಲಿ ನಿರ್ಮಿಸಿರುವ ಈ ಸರ್ಕಾರಿ ಬಸ್ ನಿಲ್ದಾಣ ಕರ್ನಾಟಕದಲ್ಲಿ ಅತ್ಯುತ್ತಮ ನಿಲ್ದಾಣವಾಗಿದೆ” ಎಂದು ಪ್ರಶಂಸಿಸಿದರು.

1001972210
ದಾವಣಗೆರೆ ಕೆಎಸ್ಸಾರ್ಟಿಸಿ ಆವರಣದಲ್ಲಿ ಬಸವ ಜಯಂತಿ ಕಾರ್ಯಕ್ರಮ.

“ಲಿಂಗಾಯತ ಸಮಾಜ ಇಂದು ಒಳಪಂಗಡಗಳಾಗಿ ಒಡೆದು ಸಂಕಷ್ಟದ ಸ್ಥಿತಿಯಲ್ಲಿದೆ.‌ ಇನ್ನು ಮುಂದಾದರು ನಮ್ಮಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಟ್ಟಾಗಬೇಕು. ಇಡೀ ವೀರಶೈವ ಲಿಂಗಾಯತ ಸಮಾಜವನ್ನು ನಾಯಕರು ಮತ್ತು ಎಲ್ಲರೂ ಸೇರಿ ಮುನ್ನಡೆಸಬೇಕಾದ ಅವಶ್ಯಕತೆ ಇದೆ. ಜಾತಿ ಗಣತಿ ನಡೆಯುತ್ತಿರುವ ಈ ಸಂದರ್ಭದಲ್ಲಿ ಸಮಾಜ ಬಾಂಧವರು ಎಚ್ಚೆತ್ತು ಒಗ್ಗಟ್ಟಿನ ದೃಷ್ಟಿಯಿಂದ, ಸಮಾಜದ ಮಕ್ಕಳ ಭವಿಷ್ಯದ ಪ್ರಶ್ನೆಯಿಂದ “ವೀರಶೈವ ಲಿಂಗಾಯತ” ಎಂದು ದಾಖಲಿಸಬೇಕು” ಎಂದು ಸಮಾಜಕ್ಕೆ ಸಂದೇಶ ನೀಡಿದರು.‌

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭಾರತದ ಯಶಸ್ಸಿಗೆ, ಯೋಧರ ಸುರಕ್ಷತೆಗೆ ಪ್ರಾರ್ಥಿಸಿ, ದುರ್ಗಾಂಬಿಕಾ ದೇಗುಲ, ದರ್ಗಾದಲ್ಲಿ ವಿಶೇಷ ಪೂಜೆ.

ಮಾಜಿ ಸಚಿವ ಎಸ್.ಎ. ರವೀಂದ್ರನಾಥ್‌, ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ, ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಮಾಜಿ ವಿಧಾನಪರಿಷತ್ ಸದಸ್ಯ ಎ.ಹೆಚ್. ಶಿವಯೋಗಿಸ್ವಾಮಿ, ಮಾಜಿ ಶಾಸಕ ಟಿ. ಗುರುಸಿದ್ದನಗೌಡ್ರು, ವೀರಶೈವ ಲಿಂಗಾಯತ ಸಮಾಜ ಮುಖಂಡ ಎನ್. ಕೊಟ್ರೇಶ್, ರಾಷ್ಟ್ರೀಯ ಉಪಾಧ್ಯಕ್ಷ ರಾಜಣ್ಣ ಅಣಬೇರು, ಹುಬ್ಬಳ್ಳಿಯ ಮುಖ್ಯಯಾಂತ್ರಿಕ ಅಭಿಯಂತರ ಸಿದ್ದೇಶ್ವರ್ ಎನ್. ಹೆಬ್ಬಾಳ್, ಅರುಂಡಿ ನಾಗರಾಜ, ಕಮ್ಮತ್ತಹಳ್ಳಿ ಮಂಜುನಾಥ್, ಚಂದ್ರಶೇಖರ್ ಪೂಜಾರ್, ಅಶೋಕ್ ಗೋಪನಹಾಳ್, ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಕಿರಣಕುಮಾರ ಎಫ್. ಬಸಾಪುರ, ರುದ್ರೇಶ್ ಮರಿಕುಂಟೆ, ನೌಕರರ ಸಂಘದ ಪದಾಧಿಕಾರಿಗಳಾದ ಸಿಜಿ ಈಶಪ್ಪ, ಲಿಂಗೇಶ್, ರೇಣುಕಾ, ಹನುಮಂತಪ್ಪ ಜ್ಯೋತಿ, ಮಂಜುನಾಥ ಕಾಶೀಪುರ, ಚನ್ನಪ್ಪ ಶಿವಕುಮಾರ, ಸಿದ್ದಲಿಂಗಯ್ಯ ಸಾಲಿಮಠ, ಬಸವರಾಜ್ ತಾವರಗೊಂದಿ, ರಾಜೇಶ್ವರಿ, ಅನಿಲ್ ಕುಮಾರ್, ಪ್ರಶಾಂತ್, ಭೀಮರಾವ್ ಬಿರಾದಾರ್, ವನಜಾಕ್ಷಿ, ಸತೀಶ್ ಎ.ವಿ.ಪರಮೇಶ್ ಪೂಜಾರ್, ಪರಮೇಶಪ್ಪ ನಂದಿಗಾವಿ, ಮಂಜುನಾಥ ಟಿ, ವಿಶ್ವನಾಥ್,‌ದೇವಕ್ಕ ಇಟ್ಟಿಗಿಮಠ, ಅಣಬೇರ್ ರವಿಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X