ಧಾರವಾಡ | ವೇತನ ಪರಿಷ್ಕರಣೆ ಬಾಕಿ ಮಂಜೂರಿಗೆ ಎನ್‌ಡಬ್ಲ್ಯೂಕೆಆರ್‌ಟಿಸಿ ನೌಕರರ ಸಂಘ ಆಗ್ರಹ

Date:

Advertisements

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್‌ಡಬ್ಲ್ಯೂಕೆಆರ್‌ಟಿಸಿ)ಯ ನಿವೃತ್ತ ನೌಕರರಿಗೆ ಬರಬೇಕಾದ 2020ರ ವೇತನ ಪರಿಷ್ಕರಣೆ ಬಾಕಿ ಮತ್ತು ರಜೆ ನಗದೀಕರಣದ ವ್ಯತ್ಯಾಸದ ಬಾಕಿ ಹಣವನ್ನು ಮಂಜೂರು ಮಾಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮತ್ತು ನಿವೃತ್ತ ನೌಕರರ ಸಂಘದಿಂದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್‌ ಭರತ್‌ ಅವರಿಗೆ ಮನವಿ ಸಲ್ಲಿಸಿದರು.

“ನಿವೃತ್ತ ನೌಕರರಿಗೆ ಸಂಬಂಧಿಸಿದ 2016–17ರಿಂದ 2019–20 ರವರೆಗಿನ ನಗದೀಕರಣ ಬಾಕಿ ಹಣವನ್ನು ಈವರೆಗೆ ಪಾವತಿಸಿಲ್ಲ. ಆ ಹಣವನ್ನು ಕೂಡಲೇ ಮಂಜೂರು ಮಾಡಬೇಕು. ಪ್ರತಿ ವರ್ಷ ಬಸ್‌ಪಾಸ್‌ಗೆ ಪಡೆಯುತ್ತಿರುವ ₹500 ಸಂಸ್ಕರಣಾ ಶುಲ್ಕವನ್ನು ರದ್ದು ಮಾಡಬೇಕು. ನಿವೃತ್ತ ನೌಕರರಿಗೆ ಸಾರಿಗೆ ಬಸ್‌ಗಳಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸಲು ಕ್ರಮಕೈಗೊಳ್ಳಬೇಕು. ವೈದ್ಯಕೀಯ ವೆಚ್ಚದ ಪುನರ್‌ ಪಾವತಿ ಸೌಲಭ್ಯ ಕಲ್ಪಿಸಿಕೊಡಬೇಕು” ಎಂದು ಸಂಘಟನಾಕಾರರು ಆಗ್ರಹಿಸಿದರು.

“ಫೆಬ್ರವರಿ 2023ರ ನಂತರ ನಿವೃತ್ತಿಯಾದ ನೌಕರರಿಗೆ ಉಪದಾನ ಮತ್ತು ರಜೆ ನಗದೀಕರಣ ಹಣವನ್ನು ಮಂಜೂರು ಮಾಡಬೇಕು. ಸಕಾಲದಲ್ಲಿ ನಿವೃತ್ತಿ ಹಣ ಸಂದಾಯಕ್ಕೆ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

Advertisements

“ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟ್‌ ಪಡೆದ ಸ್ಥಳದವರೆಗೆ ಪ್ರಯಾಣ ಮಾಡದೆ ಮಾರ್ಗ ಮಧ್ಯದಲ್ಲಿಯೇ ಇಳಿದು ಹೋದರೆ, ದೂರದ ಪ್ರಯಣದ ಟಿಕೆಟ್‌ ವಿತರಿಸಿದ ಆರೋಪದ ಮೇಲೆ ನಿರ್ವಾಹಕರನ್ನು ಅಮಾನತು ಮಾಡುವ ಕ್ರಮ ಅವೈಜ್ಞಾನಿಕ. ಇದನ್ನು ತೆಗೆದುಹಾಕಬೇಕು. ಹಾಲಿ ನೌಕರರ ಬೇಡಿಕೆಗಳ ಈಡೇರಿಕೆಗೂ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಸಂಸದರು ಯುವಕರಲ್ಲಿ ಹಿಂದು ದ್ವೇಷದ ಬೀಜ ಬಿತ್ತಿ ದಿಕ್ಕು ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ

ಸಂಘದ ಅಧ್ಯಕ್ಷ ಎಚ್‌ ಜಿ ಕೊಪ್ಪದ, ಪ್ರಧಾನ ಕಾರ್ಯದರ್ಶಿ ಎಂ ಬಿ ತಹಶೀಲ್ದಾರ, ಪ್ರಮುಖರುಗಳಾದ ಎ ಎಚ್‌ ಜವಳಿ, ಎಸ್‌ ಎಸ್ ಪಾಟೀಲ, ಎಂ ಎಂ ಹಿರೇಮಠ, ಬಿ ಎಸ್‌ ದೋತ್ರದ, ಐ ಸಿ ವಾಲಿಶೆಟ್ಟಿ, ಗುಡಗೇರಿ, ವಿ ಐ ಭದ್ರಾಪೂರ, ಹುಗ್ಗಣ್ಣವರ, ಹುಸೇನಪ್ಪಾ ವೀರೇಶ ಸೊರಬದ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X