ಧಾರವಾಡ | ವೇತನ ಪರಿಷ್ಕರಣೆ ಬಾಕಿ ಮಂಜೂರಿಗೆ ಎನ್‌ಡಬ್ಲ್ಯೂಕೆಆರ್‌ಟಿಸಿ ನೌಕರರ ಸಂಘ ಆಗ್ರಹ

Date:

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್‌ಡಬ್ಲ್ಯೂಕೆಆರ್‌ಟಿಸಿ)ಯ ನಿವೃತ್ತ ನೌಕರರಿಗೆ ಬರಬೇಕಾದ 2020ರ ವೇತನ ಪರಿಷ್ಕರಣೆ ಬಾಕಿ ಮತ್ತು ರಜೆ ನಗದೀಕರಣದ ವ್ಯತ್ಯಾಸದ ಬಾಕಿ ಹಣವನ್ನು ಮಂಜೂರು ಮಾಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಮತ್ತು ನಿವೃತ್ತ ನೌಕರರ ಸಂಘದಿಂದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್‌ ಭರತ್‌ ಅವರಿಗೆ ಮನವಿ ಸಲ್ಲಿಸಿದರು.

- Advertisement -

“ನಿವೃತ್ತ ನೌಕರರಿಗೆ ಸಂಬಂಧಿಸಿದ 2016–17ರಿಂದ 2019–20 ರವರೆಗಿನ ನಗದೀಕರಣ ಬಾಕಿ ಹಣವನ್ನು ಈವರೆಗೆ ಪಾವತಿಸಿಲ್ಲ. ಆ ಹಣವನ್ನು ಕೂಡಲೇ ಮಂಜೂರು ಮಾಡಬೇಕು. ಪ್ರತಿ ವರ್ಷ ಬಸ್‌ಪಾಸ್‌ಗೆ ಪಡೆಯುತ್ತಿರುವ ₹500 ಸಂಸ್ಕರಣಾ ಶುಲ್ಕವನ್ನು ರದ್ದು ಮಾಡಬೇಕು. ನಿವೃತ್ತ ನೌಕರರಿಗೆ ಸಾರಿಗೆ ಬಸ್‌ಗಳಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸಲು ಕ್ರಮಕೈಗೊಳ್ಳಬೇಕು. ವೈದ್ಯಕೀಯ ವೆಚ್ಚದ ಪುನರ್‌ ಪಾವತಿ ಸೌಲಭ್ಯ ಕಲ್ಪಿಸಿಕೊಡಬೇಕು” ಎಂದು ಸಂಘಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಫೆಬ್ರವರಿ 2023ರ ನಂತರ ನಿವೃತ್ತಿಯಾದ ನೌಕರರಿಗೆ ಉಪದಾನ ಮತ್ತು ರಜೆ ನಗದೀಕರಣ ಹಣವನ್ನು ಮಂಜೂರು ಮಾಡಬೇಕು. ಸಕಾಲದಲ್ಲಿ ನಿವೃತ್ತಿ ಹಣ ಸಂದಾಯಕ್ಕೆ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟ್‌ ಪಡೆದ ಸ್ಥಳದವರೆಗೆ ಪ್ರಯಾಣ ಮಾಡದೆ ಮಾರ್ಗ ಮಧ್ಯದಲ್ಲಿಯೇ ಇಳಿದು ಹೋದರೆ, ದೂರದ ಪ್ರಯಣದ ಟಿಕೆಟ್‌ ವಿತರಿಸಿದ ಆರೋಪದ ಮೇಲೆ ನಿರ್ವಾಹಕರನ್ನು ಅಮಾನತು ಮಾಡುವ ಕ್ರಮ ಅವೈಜ್ಞಾನಿಕ. ಇದನ್ನು ತೆಗೆದುಹಾಕಬೇಕು. ಹಾಲಿ ನೌಕರರ ಬೇಡಿಕೆಗಳ ಈಡೇರಿಕೆಗೂ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಸಂಸದರು ಯುವಕರಲ್ಲಿ ಹಿಂದು ದ್ವೇಷದ ಬೀಜ ಬಿತ್ತಿ ದಿಕ್ಕು ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ

ಸಂಘದ ಅಧ್ಯಕ್ಷ ಎಚ್‌ ಜಿ ಕೊಪ್ಪದ, ಪ್ರಧಾನ ಕಾರ್ಯದರ್ಶಿ ಎಂ ಬಿ ತಹಶೀಲ್ದಾರ, ಪ್ರಮುಖರುಗಳಾದ ಎ ಎಚ್‌ ಜವಳಿ, ಎಸ್‌ ಎಸ್ ಪಾಟೀಲ, ಎಂ ಎಂ ಹಿರೇಮಠ, ಬಿ ಎಸ್‌ ದೋತ್ರದ, ಐ ಸಿ ವಾಲಿಶೆಟ್ಟಿ, ಗುಡಗೇರಿ, ವಿ ಐ ಭದ್ರಾಪೂರ, ಹುಗ್ಗಣ್ಣವರ, ಹುಸೇನಪ್ಪಾ ವೀರೇಶ ಸೊರಬದ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ರೇಷ್ಮೆ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಆಯೋಜನೆ

ಶ್ರೀನಿವಾಸಪುರ ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ...

ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು...

ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...