ಮಧ್ಯ ಪ್ರದೇಶ | ಕೆಲಸ ಕಳೆದುಕೊಳ್ಳುವ ಭಯ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

Date:

ಮಧ್ಯಪ್ರದೇಶದ ಇಂದೋರ್‌ನಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ 35 ವರ್ಷದ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ, ಪೇಟಿಎಂ ಸಿಬ್ಬಂದಿ ಗೌರವ್ ಗುಪ್ತಾ ಅವರು ಕಳೆದ ಕೆಲವು ದಿನಗಳಿಂದ ಕಂಪನಿ ಮುಚ್ಚಬಹುದು ಮತ್ತು ಕೆಲಸ ಕಳೆದುಕೊಳ್ಳಬಹುದು ಎಂಬ ಭಯದಿಂದ ಒತ್ತಡದಲ್ಲಿದ್ದರು. ಈ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸ್ ಇನ್ಸ್‌ಪೆಕ್ಟರ್ ತಾರೇಶ್ ಕುಮಾರ್ ಸೋನಿ ಅವರು ಹೇಳಿದ್ದಾರೆ.

ಗೌರವ್ ಗುಪ್ತಾ ಅವರು ಭಾನುವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆ ನಡೆದ ಸ್ಥಳದಲ್ಲಿ ಪೊಲೀಸರಿಗೆ ಯಾವುದೇ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹಗರಣ | ಚೇರ್‌ಮೆನ್ ಹುದ್ದೆಯಿಂದ ಕೆಳಗಿಳಿದ ವಿಜಯ್ ಶೇಖರ್ ಶರ್ಮಾ

ಇತ್ತೀಚಿಗಷ್ಟೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಮಾರ್ಚ್ 15ರ ನಂತರ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ಗಳನ್ನು ಸ್ವೀಕರಿಸದಂತೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅನ್ನು ನಿರ್ಬಂಧಿಸಿದೆ. ಅಲ್ಲದೇ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಚೇಯರ್ ಮೆನ್ ಸ್ಥಾನದಿಂದ ವಿಜಯ್ ಶೇಖರ್ ಶರ್ಮಾ ಸೋಮವಾರ ಕೆಳಗಿಳಿದಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1993ರ ಸರಣಿ ಸ್ಪೋಟದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಿದ ಟಾಡಾ ಕೋರ್ಟ್

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು...

ಜಾರ್ಖಂಡ್ | ಭೀಕರ ರೈಲು ಅಪಘಾತ: 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದ ಎಕ್ಸ್‌ಪ್ರೆಸ್ ರೈಲು

ಜಾರ್ಖಂಡ್‌ನ ಜಮ್ತಾರಾದಲ್ಲಿ ಭೀಕರ ರೈಲು ಅವಘಡ ಸಂಭವಿಸಿರವುದಾಗಿ ವರದಿಯಾಗಿದೆ. ಜಮ್ತಾರಾದ ಕಲ್ಜಾರಿಯಾ...

ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಗಗನಯಾನ್‌ನ ಭಾಗವಾಗಿ ಕಕ್ಷೆಗೆ ಹಾರುವ ನಾಲ್ಕು...

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...