ಗದಗ | ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ

Date:

Advertisements

ಪ್ರಜಾಪ್ರಭುತ್ವವು ಮೂರು ಸ್ಥಂಭಗಳನ್ನು ಹೊಂದಿದೆ – ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ‌ – ಈ ಮೂರರಲ್ಲಿ ಯಾವುದಾದರೊಂದು ಕುಂಟಿತಗೊಂಡರೆ ಸಂವಿಧಾನ ಉಳಿಯುವುದಿಲ್ಲವೆಂದು ಅಂಬೇಡ್ಕರ್ ಹೇಳಿದ್ದರು ಎಂದು  ಡಿಎಸ್ಎಸ್ ಹಿರಿಯ ಮುಖಂಡ ಎಚ್.ಡಿ. ಪೂಜಾರ ಹೇಳಿದ್ದಾರೆ.

ಗದಗ ಪಟ್ಟಣದ ಶ್ರೀತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ರಾಜ್ಯ ಸಮಿತಿ ಹಾಗೂ ಗದಗ ಸಮಿತಿ ಸಹಯೋಗದೊಂದಿಗೆ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ರಕ್ಷಣೆಗಾಗಿ, ಪ್ರಜಾಪ್ರಭುತ್ವ ಉಳಿವಿಗಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಹಮ್ಮಿಕೊಂಡಿತ್ತು.

ಈ ಸಮಾವೇಶದಲ್ಲಿ ದಲಿತ ಮುಖಂಡ ಎಚ್.ಡಿ. ಪೂಜಾರ ಮಾತನಾಡಿ, ಸ್ವಾತಂತ್ರ್ಯ ಸಿಕ್ಕಿದೆ. ಆದರೆ, ಇನ್ನೂ ದಲಿತರಿಗೆ ಸ್ವಾತಂತ್ರ್ಯ ಸಿಕ್ಕಿಲ್ಲ. ಜಾತಿವಾದಿಗಳಿಗೆ ಮನುವಾದಿಗಳಿಗೆ ಮಾತ್ರ ಸಿಕ್ಕಿದೆ. ಬೌದ್ಧ, ಜೈನ ಅನೇಕ ಧರ್ಮಗಳಿವೆ. ಆದರೆ, ಇಲ್ಲಿ ಸಹೋದರತೆ, ಭ್ರಾತೃತ್ವ‌ ಭಾವನೆ ಇದೇಯೇ… ಮನುವಾದಿಗಳು ಇವುಗಳನ್ನು ಕುಂಟಿತಗೊಳಿಸುತ್ತಿದ್ದಾರೆ. ಇವುಗಳನ್ನು ಗಟ್ಟಿಗೋಳಿಸಬೇಕು. ಬಿದ್ದವರನ್ನು, ಬಿಳುವವರನ್ನು ಮೇಲಕ್ಕೆತ್ತುವುದೇ ಧರ್ಮ. ಮೀಸಲಾತಿ ಹೆಚ್ಚು ಮಾಡಿ ಎಂದರೆ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಾಸ್ತಾವಿಕ ಮಾತುಗಳಲ್ಲಿ ಅಸಮಧಾನ ವ್ಯಕ್ತಪಡಿಸಿದರು.

Advertisements

ಡಿಎಸ್ಎಸ್ ಅಂಬೇಡ್ಕರ್‌ವಾದ ರಾಜ್ಯ ಉಪ ಪ್ರಧಾನ ಸಂಚಾಲಕ ನಾಗಣ್ಣ ಬಡಿಗೇರ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಹೊಟ್ಟೆ ಹಸಿವನ್ನು ನೋಡಿಕೊಂಡಿದ್ದರೆ. ನಾವು ಇವತ್ತು ಈ ರೀತಿಯಲ್ಲಿ ಇರುತ್ತಿರಲಿಲ್ಲ. ಸ್ವಾತಂತ್ರ್ಯ ಸಿಕ್ಕು ಇಷ್ಟು ವರ್ಷಗಳಾಗಿವೆ, ನಾವೆಲ್ಲರೂ ಅವಲೋಕನ ಮಾಡಿಕೊಳ್ಳಬೇಕು.

ಸರಿಯಾಗಿ ಸಂವಿಧಾನ ಜಾರಿಯಾಗಿದೆಯೇ ಎಂದು ಪ್ರಶ್ನಾರ್ಥಕವಾಗಿಯೇ ಉಳಿದುಕೊಂಡಿದೆ. ಮನುಸ್ಮೃತಿಯು ನಮ್ಮ ತಲೆಯಿಂದ ಹೋಗಿಯೇ ಇಲ್ಲ. ಕೆಲವು ಕೋಮುವಾದಿಗಳು ಸಂವಿಧಾ‌ನ ಬದಲಿಸಲಿಕ್ಕೆ ನಾವು ಬಂದಿದ್ದೇವೆ ಎಂದು ಹೇಳುತ್ತಿದ್ದಾರೆ. ನಾವೆಲ್ಲರೂ ಸಂವಿಧಾನ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಎಲ್ಲ ಧರ್ಮಗಳ ಮನುಕುಲ ಒಳತಿಗಾಗಿ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದ್ದಾರೆ ಎಂದರು.

ಡಿಎಸ್ಎಸ್ ಗದಗ ಜಿಲ್ಲಾ ಸಂಚಾಲಕ ಬಾಲರಾಜ್ ಅರಬರ್ ಅಧ್ಯಕ್ಷತೆ ವಹಿಸಿದ್ದರು. ಇಂದಿರಾ ಕೃಷ್ಣಪ್ಪ ದಸಂಸ (ಅಂಬೇಡಕರ ವಾದ) ರಾಜ್ಯ ಸಮಿತಿ ಸದಸ್ಯ ಎಸ್.ಎಸ್. ಪಟ್ಟಣಶೆಟ್ಟರ, ರಾಜ್ಯ ಮುಖಂಡರು, ಮೋಹನ ಅಲೈಲಕರ, ಕೃಷ್ಣಗೌಡ ಪಾಟೀಲ, ಹನಮಂತ ಭೀ, ವೀರಾಪೂರ ಕೊರಮ, ಸುರೇಶ ಕಟ್ಟಿಮನಿ, ಬಸವರಾಜ ಕಡೇಮನಿ, ವೆಂಕಟೇಶಯ್ಯ, ಪೀರಸಾಬ ಕೌತಾಳ, ಸತೀಶ ಪಾಸಿ ಮೋಹನಲಾಲ ಟಿ.ಸಿ, ಯುಸೂಫ್ ನಮಾಜಿ, ಸಿದ್ದಪ್ಪ ಅಂಗಧಾಳ, ವೆಂಕನಗೌಡ್ರ, ಗೋವಿಂದಗೌಡ್ರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X