ಬದುಕಿನ ಹಾಡು ಮುಗಿಸಿದ ದೇಶದ ಖ್ಯಾತ ಗಝಲ್ ಗಾಯಕ ಪಂಕಜ್ ಉಧಾಸ್

Date:

Advertisements

ದೇಶದ ಹಿರಿಯ ಗಝಲ್ ಗಾಯಕ, ಪದ್ಮಶ್ರೀ ಪಂಕಜ್ ಉಧಾಸ್ ಅವರು ನಿಧನರಾಗಿದ್ದಾರೆ.

“ದೀರ್ಘಕಾಲದ ಅನಾರೋಗ್ಯದ ನಂತರ 73ನೇ ವಯಸ್ಸಿನಲ್ಲಿ ಪಂಕಜ್ ಉಧಾಸ್ ಇಂದು ನಿಧನರಾದರು” ಎಂದು ಅವರ ಕುಟುಂಬ ದೃಢಪಡಿಸಿದೆ. ಈ ಬಗ್ಗೆ ಉಧಾಸ್ ಕುಟುಂಬವು ಅಧಿಕೃತ ಹೇಳಿಕೆಯನ್ನು ಮಾಧ್ಯಮಗಳಿಗೆ ಬಿಡುಗಡೆಗೊಳಿಸಿದೆ.

“ದೀರ್ಘಕಾಲದ ಅನಾರೋಗ್ಯದಿಂದ ಫೆಬ್ರವರಿ 26ರಂದು ಪದ್ಮಶ್ರೀ ಪಂಕಜ್ ಉಧಾಸ್ ಅವರ ನಿಧನದ ದುಃಖದ ಸುದ್ದಿಯನ್ನು ತುಂಬಾ ಭಾರವಾದ ಹೃದಯದಿಂದ ನಿಮಗೆ ತಿಳಿಸುತ್ತಿದ್ದೇವೆ ” ಎಂದು ಹೇಳಿಕೆಯಲ್ಲಿ ಕುಟುಂಬ ತಿಳಿಸಿದೆ.

Advertisements

ಪಂಕಜ್ ಉಧಾಸ್ ಅವರು ದೇಶದ ಕಂಡ ಒಬ್ಬ ಅತ್ಯುತ್ತಮ ಗಝಲ್ ಗಾಯಕರಲ್ಲಿ ಅಗ್ರಗಣ್ಯರಾಗಿದ್ದಾರೆ. ಉರ್ದು ಶೈಲಿಯ ಕಾವ್ಯವನ್ನು ಸಂಗೀತಕ್ಕೆ ಹೊಂದಿಸುವುದನ್ನು ಒಳಗೊಂಡಿರುವ ವಿಶಿಷ್ಟವಾದ ಗಾಯನ ಶೈಲಿಯನ್ನು ಜನಪ್ರಿಯಗೊಳಿಸಿದ ಕಾರಣದಿಂದ ಅವರು ವ್ಯಾಪಕವಾಗಿ ಗುರುತಿಸಲ್ಪಟ್ಟಿದ್ದಾರೆ.

ಅವರು ಜಗಜಿತ್ ಸಿಂಗ್ ಮತ್ತು ತಲತ್ ಅಝೀಝ್ ಅವರಂತಹ ಜೊತೆಗಾರರ ಜೊತೆಗೆ ಈ ಕಲಾ ಪ್ರಕಾರವನ್ನು ದೇಶಾದ್ಯಂತ ವ್ಯಾಪಕವಾದ ಪ್ರೇಕ್ಷಕರಿಗೆ ಪರಿಚಯಿಸುವಲ್ಲಿ ಬಹುಮುಖ್ಯ ಕೊಡುಗೆ ನೀಡಿದ್ದಾರೆ.

ಉಧಾಸ್ ಏಪ್ರಿಲ್ 17, 1951 ರಂದು ಗುಜರಾತ್‌ನ ಸಾವರ್ಕುಂಡ್ಲಾದಲ್ಲಿ ಜನಿಸಿದ್ದರು. ನಾಮ್ (1986) ಚಿತ್ರದ ‘ಚಿಟ್ಟಿ ಆಯೀ ಹೈ’ ಹಾಡಿನ ಮೂಲಕ ಅವರು ವೃತ್ತಿಪರ ಗಾಯಕರಾಗಿ ಗುರುತಿಸಿಕೊಂಡರು. ಅಂದಿನಿಂದ, ಅವರು ಹಲವಾರು ಆಲ್ಬಂಗಳನ್ನು ರಚಿಸಿದ್ದಾರೆ. ಕನ್ನಡದಲ್ಲಿ ಸುದೀಪ್ ನಾಯಕ ನಟನಾಗಿ ನಟಿಸಿದ್ದ ‘ಸ್ಪರ್ಶ’ ಚಿತ್ರಕ್ಕೂ ಕೂಡ ಹಾಡಿದ್ದು, ಚಿತ್ರದ ‘ಚೆಂದಕ್ಕಿಂತ ಚೆಂದ ನೀನೇ ಸುಂದರ’ ಎಂಬ ಹಾಡನ್ನು ಕೂಡ ಹಾಡಿದ್ದಾರೆ.

ಪ್ರಸಿದ್ಧ ಗಝಲ್ ಗಾಯಕರಾಗಿ ಜಗತ್ತಿನ ವಿವಿಧ ದೇಶಗಳಲ್ಲಿ ಕೂಡ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಹಲವಾರು ಬಾಲಿವುಡ್ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದು, ಜೊತೆಗೆ ಹಿನ್ನೆಲೆ ಗಾಯಕರಾಗಿ ಗುರುತಿಸಿಕೊಂಡಿದ್ದರು. ಇವರ ಸಂಗೀತ ಸೇವೆಯನ್ನು ಗುರುತಿಸಿ 2006ರಲ್ಲಿ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ, ಗೌರವಿಸಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X