ಗುಜರಾತ್ | ಕಡಲ ಕಿನಾರೆಯಲ್ಲಿ ಅನಾಥವಾಗಿ ಬಿದ್ದಿದ್ದ 800 ಕೋಟಿ ಮೌಲ್ಯದ ಕೊಕೇನ್ ವಶಕ್ಕೆ

Date:

Advertisements
  • ಗಾಂಧಿಧಾಮ್‌ನಿಂದ 30 ಕಿಮೀ ದೂರದಲ್ಲಿರುವ ಮಿಥಿ ರೋಹರ್ ಗ್ರಾಮದಲ್ಲಿ ಬಿದ್ದಿದ್ದ 80 ಕೆ ಜಿ ಕೊಕೇನ್
  • ಕರಾವಳಿ ಮತ್ತು ಹಳ್ಳಿಗಳಲ್ಲಿ ಗಸ್ತು ಮತ್ತು ತಪಾಸಣೆಯನ್ನು ತೀವ್ರಗೊಳಿಸಿದ ಪೊಲೀಸರು

ಗುಜರಾತ್‌ನ ಕಚ್ ಜಿಲ್ಲೆಯ ಗ್ರಾಮವೊಂದರ ಕಡಲ ಕಿನಾರೆಯಲ್ಲಿ ಅನಾಥವಾಗಿ ಬಿದ್ದಿದ್ದ ಸುಮಾರು 800 ಕೋಟಿ ಮೌಲ್ಯದ 80 ಕೆ ಜಿ ಕೊಕೇನ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.

ಸ್ಥಳೀಯ ಪೊಲೀಸರು ಗುರುವಾರ ಬಂದರು ಪಟ್ಟಣ ಗಾಂಧಿಧಾಮ್‌ನಿಂದ 30 ಕಿಮೀ ದೂರದಲ್ಲಿರುವ ಮಿಥಿ ರೋಹರ್ ಗ್ರಾಮದಲ್ಲಿ ನಿರ್ದಿಷ್ಟ ಮಾಹಿತಿಯ ಮೇರೆಗೆ ಗಸ್ತು ತಿರುಗುತ್ತಿದ್ದಾಗ ಕಡಲ ದಡದಲ್ಲಿ ಚದುರಿದ್ದ ಹಲವಾರು ಅನುಮಾನಾಸ್ಪದ ಪ್ಯಾಕೆಟ್‌ ಮತ್ತು ಕೆಲವು ನೀರಿನಲ್ಲಿ ತೇಲುತ್ತಿರುವುದನ್ನು ಗಮನಿಸಿದ್ದಾರೆ.

ತಲಾ ಒಂದು ಕೆಜಿಯ 80 ಪ್ಯಾಕೆಟ್ ಗಳಿದ್ದು, ಅದರಲ್ಲಿ ಕೊಕೇನ್ ಅಂಶವಿರುವುದನ್ನು ವಿಧಿವಿಜ್ಞಾನ ತಜ್ಞರು ಖಚಿತಪಡಿಸಿದ್ದಾರೆ. ಇದರ ಮಾರುಕಟ್ಟೆ ಮೌಲ್ಯವು ಸುಮಾರು 800 ಕೋಟಿ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕಚ್ (ಪೂರ್ವ) ಪೊಲೀಸ್ ಅಧೀಕ್ಷಕ ಸಾಗರ್ ಬಾಗ್ಮಾರ್, ಅಂತಾರಾಷ್ಟ್ರೀಯ ಮಾದಕ ಸಾಗಾಟ ಮಾಡುವವರ ಇದೊಂದು ಹೊಸ ರೀತಿಯ ಯೋಜನೆ. ಕೆಲ ನಿರ್ಜನ ಪ್ರದೇಶಗಳಲ್ಲಿ ಮಾದಕ ವಸ್ತುಗಳನ್ನು ಬಿಟ್ಟು ಹೋಗುತ್ತಾರೆ. ಆ ಬಳಿಕ ಅದು ಯಾರಿಗೆ ಸೇರಬೇಕೋ ಅವರು ಬಂದು ಅದನ್ನು ತೆಗೆದುಕೊಳ್ಳುತ್ತಾರೆ. ಪೊಲೀಸರು ಕೈಗೆ ಸಿಕ್ಕಿ ಬೀಳುವ ಭಯದಿಂದ ನೇರವಾಗಿ ಹಸ್ತಾಂತರಿಸುವುದಿಲ್ಲ. ಈ ಪ್ರಕರಣ ಅದಕ್ಕೆ ಸಾಕ್ಷಿ” ಎಂದು ತಿಳಿಸಿದ್ದಾರೆ.

cocaine gujarat

“ಡ್ರಗ್ಸ್ ವಿರುದ್ಧದ ನಮ್ಮ ಅಭಿಯಾನದ ಭಾಗವಾಗಿ ನಾವು ಕರಾವಳಿ ಮತ್ತು ಹಳ್ಳಿಗಳಲ್ಲಿ ಗಸ್ತು ಮತ್ತು ತಪಾಸಣೆಯನ್ನು ತೀವ್ರಗೊಳಿಸಿದ್ದೇವೆ. ಈಗ ದೊರೆತಿರುವ ಕೊಕೇನನ್ನು ರವಾನಿಸಿದವರು ಯಾರು ಎಂಬುದನ್ನು ಪತ್ತೆ ಹಚ್ಚಲು ತನಿಖೆ ನಡೆಸುತ್ತಿದ್ದೇವೆ” ಎಂದು ಬಾಗ್ಮಾರ್ ಹೇಳಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ), ಗಡಿ ಭದ್ರತಾ ಪಡೆ (ಬಿಎಸ್ಎಫ್), ಗುಜರಾತ್ ಸೇರಿದಂತೆ ವಿವಿಧ ಕಡೆಗಳಲ್ಲಿ ಹಾಗೂ ಪಾಕಿಸ್ತಾನಕ್ಕೆ ಹತ್ತಿರವಿರುವ ಜಿಲ್ಲೆಯಲ್ಲಿ ಇಂತಹ ಹಲವಾರು ಸರಕುಗಳನ್ನು ವಶಪಡಿಸಿಕೊಂಡಿವೆ.

ಕಳೆದ ವರ್ಷವು ಮುಂದ್ರಾ ಬಂದರಿನಲ್ಲಿ ಕಂಟೈನರ್‌ನಲ್ಲಿ ಬಟ್ಟೆಯ ರೋಲ್‌ಗಳಲ್ಲಿ ಬಚ್ಚಿಟ್ಟಿದ್ದ 376 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X