ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಪ್ರವೇಶಕ್ಕೆ ತಡೆಯಾಜ್ಞೆ ವಿಧಿಸಿದ್ದ ಜಿಲ್ಲಾಡಳಿತ: ತೆರವುಗೊಳಿಸಿದ ಹೈಕೋರ್ಟ್‌

Date:

Advertisements

ಸಂಘಪರಿವಾರದ ಮುಖಂಡ, ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಕಲಬುರಗಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದರಿಂದ ಮಧ್ಯರಾತ್ರಿ 1 ಗಂಟೆಗೆ ಸೂಲಿಬೆಲೆ ಅವರನ್ನು ತಡೆದ ಪೊಲೀಸರು ವಾಪಸ್ ಕಳುಹಿಸಿದ್ದರು.

ಕಲಬುರಗಿ ಜಿಲ್ಲೆಯ ಕಮಲಾಪೂರ ಬಳಿ ಮಧ್ಯರಾತ್ರಿ ಬೀದರ್ ಜಿಲ್ಲೆಯ ಬಾಲ್ಕಿಯಿಂದ ಕಲಬುರಗಿ ಜಿಲ್ಲೆಯೊಳಗೆ ಆಗಮಿಸಲು ಪೊಲೀಸರು ಬಿಡಲಿಲ್ಲ. ಸೂಲಿಬೆಲೆ ಚಕ್ರವರ್ತಿ ಅವರಿಗೆ ಕಲಬುರಗಿ ಜಿಲ್ಲೆಗೆ ಪ್ರವೇಶ ನಿಬಂಧ ವಿಧಿಸಿ ಉಪ ವಿಭಾಗಾಧಿಕಾರಿ ರೂಪೇಂದ್ರ ಕೌರ್ ಆದೇಶ ಹೊರಡಿಸಿದ್ದರು.

ಚಕ್ರವರ್ತಿ ಸೂಲಿಬೆಲೆ ಪ್ರಚೋದನಾಕಾರಿ ಭಾಷಣದಿಂದ ಶಾಂತಿಗೆ ಧಕ್ಕೆ ಬರುವ ಸಾಧ್ಯತೆ ಎನ್ನುವ ಕಾರಣಕ್ಕೆ ಪ್ರವೇಶ ನಿರ್ಬಂಧ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಒಂದು ಗಂಟೆಗೆ ಸೂಲಿಬೆಲೆಯವರನ್ನು ಕಮಲಾಪೂರ ಪೊಲೀಸರು ತಡೆದಿದ್ದರು. ಉಪವಿಭಾಗಾಧಿಕಾರಿ ಅವರ ಆದೇಶದ ಹಿನ್ನಲೆ ಸೂಲಿಬೆಲೆ ಅವರಿಗೆ ಜಿಲ್ಲೆಯೊಳಗೆ ಪ್ರವೇಶಕ್ಕೆ ಅವಕಾಶ ನೀಡದೇ ಮರಳಿ ಬೀದರ್ ಕಡೆಗೆ ಕಳುಹಿಸಿದ್ದರು. ಈ ವೇಳೆ ಪೊಲೀಸರು ಮತ್ತು ಸೂಲಿಬೆಲೆ ಚಕ್ರವರ್ತಿ ನಡುವೆ ವಾಗ್ವಾದ ಕೂಡ ನಡೆದಿತ್ತು.

Advertisements

ಕಲಬುರಗಿ ಪಟ್ಟಣದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಚಕ್ರವರ್ತಿ ಸೂಲಿಬೆಲೆ ಹೊರಟಿದ್ದರು. ಕಲಬುರಗಿ ಜಿಲ್ಲಾ ಗಡಿ ಪ್ರವೇಶ ತಡೆದದ್ದನ್ನು ಪ್ರಶ್ನಿಸಿ ಬಿಜೆಪಿ ನಾಯಕರು ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯವು ಜಿಲ್ಲಾಡಳಿತ ವಿಧಿಸಿದ್ದ ತಡೆಯಾಜ್ಞೆಯನ್ನು ಕಲಬುರಗಿ ಹೈಕೋರ್ಟ್‌ ತೆರವುಗೊಳಿಸಿರುವುದಾಗಿ ಬಿಜೆಪಿ ಮುಖಂಡರು ತಿಳಿಸಿದ್ದಾರೆ.

“ನಮೋ ಭಾರತ್ ಕಾರ್ಯಕ್ರಮವನ್ನು ಅನೇಕ ಕಡೆ ತಡೆಯುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕಾರ್ಯಕ್ರಮ ತಡೆಯುವ ಕೆಲಸ ಆಗಿದೆ. ಪ್ರಧಾನಿ ಮೋದಿ ಸಾಧನೆ ಬಗ್ಗೆ ಮಾತನಾಡುವುದನ್ನು ಅವರಿಂದ ಸಹಿಸೋಕೆ ಆಗುತ್ತಿಲ್ಲ” ಎಂದು ಚಕ್ರವರ್ತಿ ಸೂಲಿಬೆಲೆ ಆರೋಪಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X