ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

Date:

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು ಭವಿಷ್ಯದ ಸಮಾಜವನ್ನು ಮುನ್ನಡೆಸುವ ಹೊಣೆಗಾರಿಕೆಯನ್ನು ರೂಪಿಸುವ ಮಹತ್ವದ ವೇದಿಕೆಗಳಾಗಿವೆ ಎಂದು ನಿವೃತ್ತ ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಎಂ ಅವರು ಹೇಳಿದರು.

- Advertisement -

ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ 2026-27ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಪೂರಕವಾದ ಸಹಮತದ ನಾಯಕತ್ವಗುಣದ ಜೊತೆಗೆ ವಿದ್ಯಾರ್ಥಿಗಳು ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಕೌಶಲ್ಯಗಳನ್ನು ರೂಢಿಸಿಕೊಳ್ಳುವ ಹೊಣೆಗಾರಿಕೆಯನ್ನು ಮರೆಯಬಾರದು ಎಂಬ ಕಿವಿಮಾತನ್ನೂ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್‌ ಅವರು ತಮ್ಮ ಬಲ ಮತ್ತು ಸಂಖ್ಯೆಗಿಂತ ಈ ದೇಶದ ಸಂವಿಧಾನವನ್ನು ಗೌರವಿಸುವ ಮೂಲಕ ಚರಿತ್ರೆಯ ಖಳನಾಯಕರಾಗದಂತೆ ತಮ್ಮನ್ನು ತಾವೇ ರಕ್ಷಿಸಿಕೊಳ್ಳುವ ಹೊಣೆ ವಿದ್ಯಾರ್ಥಿಗಳ ಮೇಲಿದೆ ಎಂದರು.

ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಸಂಚಾಲಕಿ ಡಾ. ಸೌಮ್ಯಲತಾ ಪಿ ಇವರು ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಐಕ್ಯುಎಸಿ ಸಂಚಾಲಕ ಡಾ. ಲಿತಿನ್ ಬಿ. ಎಂ. ಮತ್ತು ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷೆ ದೀಕ್ಷಾ ಹಾಗೂ ಉಪಾಧ್ಯಕ್ಷೆ ದೀಕ್ಷಾ ಮತ್ತು ಇತರ ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದರು. ಶ್ರಾವ್ಯ ಸ್ವಾಗತಿಸಿ, ವರ್ಷ ವಂದಿಸಿದ ಈ ಕಾರ್ಯಕ್ರಮವನ್ನು ಶಶಾಂಕ್‌ ಪೈ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು...

ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...

ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್‌ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ...