10 ಗಂಟೆ ಇಂಡಿಗೋ ವಿಮಾನ ವಿಳಂಬ: ಪೈಲಟ್ ಮೇಲೆ ಹಲ್ಲೆಗೈದ ಪ್ರಯಾಣಿಕ; ವಿಡಿಯೋ ವೈರಲ್

Date:

Advertisements

10 ಗಂಟೆಗಳ ಕಾಲ ಇಂಡಿಗೋ ವಿಮಾನ ಪ್ರಯಾಣ ವಿಳಂಬಗೊಂಡ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಪ್ರಯಾಣಿಕನೋರ್ವ ಪೈಲಟ್ ಮೇಲೆಯೇ ಹಲ್ಲೆಗೈದ ಆಘಾತಕಾರಿ ಘಟನೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಘಟನೆಯ ದೃಶ್ಯ ಪ್ರಯಾಣಿಕರೋರ್ವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ದೆಹಲಿಯಿಂದ ಗೋವಾಕ್ಕೆ ಹೊರಟಿದ್ದ ಇಂಡಿಗೋ 6E2175 ಸಂಖ್ಯೆಯ ವಿಮಾನವು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 10 ಗಂಟೆಗಳ ಕಾಲ ಹೊರಡಲು ತಡವಾಗಿತ್ತು. ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡುತ್ತಿದ್ದ ಸಹ ಪೈಲಟ್ ಅನೂಪ್ ಕುಮಾರ್ ಎಂಬುವವರ ಮೇಲೆ ಕುಪಿತಗೊಂಡ ಪ್ರಯಾಣಿಕನೋರ್ವ ಹಲ್ಲೆಗೈದಿದ್ದಾನೆ. ಹಲ್ಲೆಗೈದವನನ್ನು ಸಾಹಿಲ್ ಕಟಾರಿಯಾ ಎಂದು ಗುರುತಿಸಲಾಗಿದೆ.

Advertisements

ಕೊನೆಯ ಸೀಟಿನಲ್ಲಿ ಕುಳಿತಿದ್ದ ಸಾಹಿಲ್ ಕಟಾರಿಯಾ ಆಕ್ರೋಶದಿಂದ ಸಹಕ್ಯಾಪ್ಟನ್ ಬಳಿ ಓಡಿಹೋಗಿ ಹಲ್ಲೆಗೈದಿದ್ದಾನೆ. ಆಹಾರ ಸೇವೆ ನೀಡುವ ಟ್ರಾಲಿಯನ್ನು ಕೂಡ ಹಾರಿ, ಮತ್ತೆ ಹಲ್ಲೆಗೈಯ್ಯಲು ಯತ್ನಿಸಿದಾಗ ಗಗನಸಖಿಯರು ಹಾಗೂ ಇತರೆ ಪ್ರಯಾಣಿಕರು ತಡೆದಿದ್ದಾರೆ. ಈ ಎಲ್ಲ ಬೆಳವಣಿಗೆ ಪ್ರಯಾಣಿಕರೋರ್ವರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಅವರು ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವಿಡಿಯೋ ವೈರಲಾಗಿದೆ.

ಹಲ್ಲೆಗೈದ ಬಳಿಕ ಆರೋಪಿಯು, ಕ್ಯಾಪ್ಟನ್‌ಗೆ, “ಚಲಾಯಿಸುವುದಾದದರೆ ಚಲಾಯಿಸು, ನೀನು ಚಲಾಯಿಸುವುದಿಲ್ಲ ಎಂದಾದರೆ ಇಲ್ಲಿಂದ ತೊಲಗು” ಎಂದು ಹಿಂದಿಯಲ್ಲಿ ಹೇಳಿದ್ದಾನೆ. ಈ ವೇಳೆ ಗಗನಸಖಿಯೋರ್ವರು ಭಾವುಕರಾಗಿ, “ನೀವು ಈ ರೀತಿಯಾಗಿ ಮಾಡಬಾರದು” ಎಂದು ಎರಡು ಮೂರು ಸಲ ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಇಂಡಿಗೋ ತಡ: ಅಂತಾರಾಷ್ಟ್ರೀಯ ವಿಮಾನ ಮಿಸ್ ಮಾಡಿಕೊಂಡ ಪ್ರಯಾಣಿಕ

ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದು ಇಲ್ಲಿಂದ ಅಂತಾರಾಷ್ಟ್ರೀಯ ವಿಮಾನದಲ್ಲಿ ಪ್ರಯಾಣಿಸಬೇಕಿದ್ದ ಪ್ರಯಾಣಿಕರೊಬ್ಬರು ಇಂಡಿಗೋ ವಿಮಾನ ತಡವಾದ ಕಾರಣಕ್ಕೆ ವಿಮಾನ ಮಿಸ್ ಮಾಡಿಕೊಂಡ ಘಟನೆ ಕೂಡ ಬೆಳಕಿಗೆ ಬಂದಿದೆ.

ದೇಬರ್ಘ್ಯಾ ದಾಸ್‌ ಎಂಬುವವರು ಈ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದು, “ಶನಿವಾರ ಮಧ್ಯಾಹ್ನ ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊರಡಬೇಕಿತ್ತು. ಆರು ಬಾರಿ ನಾನಾ ಕಾರಣ ನೀಡಿ ಪ್ರಯಾಣ ಮುಂದೂಡಲಾಯಿತು. ಕೊನೆಗೆ ಬೆಳಗಿನ ಜಾವ ವಿಮಾನ ಹೊರಡುವ ಸಮಯ ಪ್ರಕಟಿಸಲಾಯಿತು. ಆದರೆ ಅದು ಸ್ಪಷ್ಟವಾಗಿರಲಿಲ್ಲ. ಈ ಬಗ್ಗೆ ಇಂಡಿಗೋ ಸಂಸ್ಥೆಯ ಸಿಬ್ಬಂದಿಗೂ ಸ್ಪಷ್ಟತೆ ಇರಲಿಲ್ಲ. ನಾನು ಬೆಳಗಿನ ಜಾವ ಬೆಂಗಳೂರಿಗೆ ತೆರಳಿ ಅಲ್ಲಿಂದ ಅಂತಾರಾಷ್ಟ್ರೀಯ ವಿಮಾನದಲ್ಲಿ ಪ್ರಯಾಣ ಮುಂದುವರೆಸಬೇಕು ಎನ್ನುವ ಮಾಹಿತಿ ನೀಡಿದರೂ ಸೂಕ್ತ ಉತ್ತರ ಬರಲಿಲ್ಲ. ಕೊನೆಗೆ ಕೋಲ್ಕತ್ತಾದಿಂದಲೇ ಬೆಂಗಳೂರಿಗೆ ನೇರ ವಿಮಾನದಲ್ಲಿ ಹೋಗುವ ನಿರ್ಧಾರ ಕೈಗೊಂಡ ದಾಸ್‌ ಅವರು ಪ್ರಯಾಣ ದರ ಹಿಂದಿರುಗಿಸುವಂತೆ ಕೋರಿದರು. ಅದಕ್ಕೂ ಸೂಕ್ತ ಸ್ಪಂದನೆ ಬರಲಿಲ್ಲ” ಎಂದು ತಮಗಾದ ಕಹಿ ಅನುಭವವನ್ನು ಎಕ್ಸ್‌ ಪೋಸ್ಟ್‌ ಮೂಲಕ ಹಂಚಿಕೊಂಡರು.

“ತಮ್ಮದೇ ತಪ್ಪು ಇಟ್ಟುಕೊಂಡು ನಮ್ಮ ಮೇಲೆಯೇ ತಪ್ಪು ಹೇರುವ ಪ್ರಯತ್ನವನ್ನು ಇಂಡಿಗೋ ಸಿಬ್ಬಂದಿ ಮಾಡಿದರು. ನೀವು ಮೊದಲೇ ಪ್ರಯಾಣ ಆರಂಭಿಸಬೇಕಿತ್ತು ಎನ್ನುವ ಉಪದೇಶವನ್ನು ನೀಡಿದರು. ನೀವು ಮೊದಲ ಬಾರಿಗೆ ಅಂತಾರಾಷ್ಟ್ರೀಯ ವಿಮಾನದಲ್ಲಿ ಪ್ರಯಾಣ ಮಾಡುತ್ತಿರಬೇಕು ಎಂದು ಹೀಯಾಳಿಸಿದರು. ಇದೆಲ್ಲವನ್ನೂ ಎದುರಿಸಿ ಪ್ರಯಾಣ ನಡೆಸಬೇಕಾಯಿತು. ಜನರ ಹಣ ಹಾಗೂ ಸಮಯಕ್ಕೆ ಶೂನ್ಯ ಬೆಲೆ ಇದೆ ಎನ್ನುವುದು ಇಡೀ ಘಟನೆಯಿಂದ ಸಾಬೀತಾಗಿದೆ” ಎಂದು ದಾಸ್‌ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಒತ್ತಡಕ್ಕೆ ಮಣಿದು ಕೊನೆಗೂ ಇಂಡಿಗೋ ಸಂಸ್ಥೆ ಎರಡು ಗಂಟೆಯ ಬಳಿಕ ಟಿಕೆಟ್‌ ಹಣ ವಾಪಸ್‌ ನೀಡಲು ಸಮ್ಮತಿಸಿದರು” ಎಂದು ದೇಬರ್ಘ್ಯಾ ದಾಸ್‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X