ಮುಸ್ಲಿಂ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸರಿಗೆ 14 ದಿನ ಜೈಲು; ಗುಜರಾತ್ ಹೈಕೋರ್ಟ್

Date:

ಗುಜರಾತ್‌ ಖೇಡಾ ಜಿಲ್ಲೆಯಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಐವರು ಮುಸ್ಲಿಂ ಯುವಕರಿಗೆ ಸಾರ್ವಜನಿಕವಾಗಿ ಥಳಿಸಿದ್ದಕ್ಕಾಗಿ ಗುಜರಾತ್ ಹೈಕೋರ್ಟ್ 4 ಗುಜರಾತ್ ಪೊಲೀಸ್ ಅಧಿಕಾರಿಗಳನ್ನು ನ್ಯಾಯಾಲಯದಿಂದ ನಿಂದನೆ ತಪ್ಪಿತಸ್ಥರೆಂದು ಘೋಷಿಸಿದ್ದು, ಅಪರಾಧಿಗಳಿಗೆ 14 ದಿನಗಳ ಸರಳ ಜೈಲು ಶಿಕ್ಷೆ ಹಾಗೂ 2 ಸಾವಿರ ದಂಡವನ್ನು ವಿಧಿಸಿದೆ.

- Advertisement -

ದಂಡ ತೆರಲು ತಪ್ಪಿದ್ದಲ್ಲಿ ಇನ್ನೂ ಮೂರು ದಿನಗಳ ಕಾಲ ಜೈಲು ಶಿಕ್ಷೆಯನ್ನು ಅನುಭವಿಸಬೇಕು ಎಂದು ಹೈಕೋರ್ಟ್ ಎಚ್ಚರಿಸಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚಾಮರಾಜ ಕ್ಷೇತ್ರದ ಮೇಲೆ ‘ನಿರುದ್ಯೋಗಿ’ ಪ್ರತಾಪ್ ಸಿಂಹ ಕಣ್ಣು;...

ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಈಗ 2028ರ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಟಿ. ನರಸೀಪುರದ ಗಣೇಶೋತ್ಸವದಿಂದ ಹಿಡಿದು ಮೈಸೂರಿನ ಹಲವು ಧಾರ್ಮಿಕ–ಸಾಂಸ್ಕೃತಿಕ ವಿವಾದಗಳವರೆಗೆ ಮತ್ತೆ ಮುಂಚೂಣಿಯಲ್ಲಿ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ನ್ಯಾಯಮೂರ್ತಿ ಎ ಎಸ್ ಸುಪೇಹಿಯಾ ಮತ್ತು ನ್ಯಾಯಮೂರ್ತಿ ಗೀತಾ ಗೋಪಿ ಅವರ ವಿಭಾಗೀಯ ಪೀಠವು ಅಕ್ಟೋಬರ್ 18 ರಂದು ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಘಟನೆಯನ್ನು “ಅಮಾನವೀಯ” ಮತ್ತು “ಮಾನವೀಯತೆಯ ವಿರುದ್ಧದ ಕೃತ್ಯ” ಎಂದು ತಿಳಿಸಿದೆ.

ಅಪರಾಧಿ ಪೊಲೀಸರಿಗೆ ತಲಾ 2 ಸಾವಿರ ರೂ. ದಂಡವನ್ನು ವಿಧಿಸಿದ್ದು, ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಆರೋಪಿ ಪರ ವಕೀಲರು ಅವಕಾಶ ಕೋರಿದ ಹಿನ್ನೆಲೆಯಲ್ಲಿ ಶಿಕ್ಷೆಯ ಆದೇಶವನ್ನು ಮೂರು ತಿಂಗಳ ಕಾಲ ತಡೆಹಿಡಿಯಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಷಾಹಾರ ಸೇವನೆ: ಅಲಿಗಢ ಮುಸ್ಲಿಂ ವಿವಿಯ 300ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಕಳೆದ ವರ್ಷ ಅಕ್ಟೋಬರ್ 4 ರಂದು ಗುಜರಾತ್‌ ಖೇಡಾ ಜಿಲ್ಲೆಯ ಉಂಧೇಲಾ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾದ ಪೊಲೀಸರು ಐವರು ಮುಸ್ಲಿಂ ಯುವಕರನ್ನು ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಥಳಿಸಲಾಗಿತ್ತು.

ಆದರೆ, ಅಕ್ಟೋಬರ್ 16 ರಂದು, ಅಪರಾಧಿ ಪೊಲೀಸರಿಂದ ಹಣದ ಪರಿಹಾರವನ್ನು ಸ್ವೀಕರಿಸಲು ಸಂತ್ರಸ್ತರು ನಿರಾಕರಿಸಿದ್ದರು.

ಪೊಲೀಸರು, ಕಾನೂನು ಮತ್ತು ಸುವ್ಯವಸ್ಥೆಯ ಪಾಲಕರಾಗಿ ತಮ್ಮ ಕರ್ತವ್ಯ ರಕ್ಷಣೆಗಾಗಿ ನಾಗರಿಕ ಸ್ವಾತಂತ್ರ್ಯವನ್ನು ಹರಣಗೊಳಿಸಬಾರದು ಎಂದು ನ್ಯಾಯಾಲಯ ಹೇಳಿದೆ.

ವಿಚಾರಣೆಯ ಸಂದರ್ಭದಲ್ಲಿ, ಪೊಲೀಸ್ ಇಲಾಖೆಯಲ್ಲಿ ಈಗಾಗಲೇ 10-15 ವರ್ಷಗಳ ಸೇವೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಿದರೆ ಅವರ ವೃತ್ತಿಪರ ದಾಖಲೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಪೊಲೀಸರ ಪರ ವಾದ ಮಂಡಿಸಿದ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು .

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು...

ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...

ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್‌ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ...