ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

Date:

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ ಸಂತ್ರಸ್ತರ ಸಮಸ್ಯೆಗೆ ಇಂದಿಗೂ ಪರಿಹಾರ ಸಿಗದಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ್ ಗುರೂಜಿ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಶಿಕಾಂತ್ ಗುರೂಜಿ, “ಮನೆ, ಮಠ ಹಾಗೂ ಜಮೀನು ಕಳೆದುಕೊಂಡು ಪುನರ್ವಸತಿಗಾಗಿ ಕಾಯುತ್ತಿರುವ ಸಂತ್ರಸ್ತರಿಗೆ ಇಂದಿಗೂ ಹಕ್ಕುಪತ್ರ ಮತ್ತು ಉತಾರಿ ದೊರೆಯದಿರುವುದು ನೋವಿನ ಸಂಗತಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಕೊಲ್ಹಾರ ಪಟ್ಟಣದ ಸ್ಟೇಟ್ ಬ್ಯಾಂಕ್ ಹಿಂಭಾಗದಲ್ಲಿ ಸುಮಾರು 25 ವರ್ಷಗಳಿಂದ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸಂತ್ರಸ್ತರಿಗೆ ಕೂಡಲೇ ನಿವೇಶನ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿರೇಶ್ ಹಟ್ಟಿಯವರಿಗೆ ಒತ್ತಾಯಿಸಿದರು. ನಿವೇಶನ ಮಂಜೂರಾಗುವವರೆಗೆ ಅವರಿಗೆ ಯಾವುದೇ ತೊಂದರೆ ನೀಡದೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದೂ ಅವರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಒನಪ್ಪ ಪೂಜಾರಿ ಮಾತನಾಡಿ, “ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳಾದ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳ, ಭೂ ಪರಿಹಾರ ಮತ್ತು ನೀರಾವರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

Advertisements

ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ, ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಹಾಗೂ ತಾಲೂಕು ಅಧ್ಯಕ್ಷ ಸೋಮು ಬಿರಾದಾರ ಮಾತನಾಡಿದರು. ಮೂರು ದಶಕಗಳಿಂದ ಮನೆ-ಮಠ ಕಳೆದುಕೊಂಡ ಸಂತ್ರಸ್ತರು ತಮ್ಮ ಹಕ್ಕುಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಅವರು ಹೇಳಿದರು. ಸರ್ಕಾರ ಹಾಗೂ ಅಧಿಕಾರಿಗಳು ಇನ್ನಾದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಹಕ್ಕುಪತ್ರ ವಿತರಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರಮುಖ ಬೇಡಿಕೆಗಳು

  • ಆಲಮಟ್ಟಿ ಜಲಾಶಯಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಹಕ್ಕುಪತ್ರ ವಿತರಿಸುವುದು.
  • ವಿಜಯಪುರ ಜಿಲ್ಲೆಯ ಎಲ್ಲ ಕೆರೆಗಳನ್ನು ಮುಳವಾಡ ಏತ ನೀರಾವರಿ ಯೋಜನೆಯ ಮೂಲಕ ತುಂಬಿಸುವುದು.
  • ಜನವರಿಯಿಂದ ಜುಲೈವರೆಗೆ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ 20 ಟಿಎಂಸಿ ನೀರು ಕಾಯ್ದಿರಿಸುವುದು.
  • ರೈತರ ಜಮೀನುಗಳಿಗೆ ಸಮರ್ಪಕವಾಗಿ ತ್ರೀ-ಫೇಸ್ ಹಾಗೂ ಸಿಂಗಲ್-ಫೇಸ್ ವಿದ್ಯುತ್ ಪೂರೈಸುವುದು.

ನಾಲ್ಕು ತಿಂಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ

ಪ್ರತಿಭಟನೆಯ ಹಿನ್ನೆಲೆಯಲ್ಲಿ ಯುಕೆಪಿ ವಿಶೇಷ ಜಿಲ್ಲಾಧಿಕಾರಿ, ವಿಜಯಪುರ ಅಪರ ಜಿಲ್ಲಾಧಿಕಾರಿ, ಹೆಸ್ಕಾಂ ಅಧಿಕಾರಿಗಳು, ಸ್ಥಳೀಯ ತಾಲೂಕು ದಂಡಾಧಿಕಾರಿ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳೊಂದಿಗೆ ಪ್ರತಿಭಟನಾಕಾರರು ಮಾತುಕತೆ ನಡೆಸಿದರು. ಬಾಕಿ ಉಳಿದಿರುವ ಮುಳುಗಡೆ ಸಂತ್ರಸ್ತರ ಬೇಡಿಕೆಗಳನ್ನು ನಾಲ್ಕು ತಿಂಗಳೊಳಗೆ ಬಗೆಹರಿಸುವುದಾಗಿ ಅಧಿಕಾರಿಗಳು ಲಿಖಿತ ಭರವಸೆ ನೀಡಿದರು. ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.

ಪ್ರತಿಭಟನೆಯಲ್ಲಿ ಅಪ್ಪು ಗೌಡ ಮನಗೋಳಿ, ರಾಹುಲ್ ಕೋಬಕಡ್ಡಿ, ಮಲ್ಲಪ್ಪ ಅಂಗಡಿ, ಪ್ರೇಮ್ ಚೌಗಲಾ, ಪ್ರಕಾಶ್ ಉಮ್ರಾಣಿ, ಶಿವಾನಂದ, ಸಿದ್ದು ಬಾಲಗೊಂಡ, ವಿಜಯ ಮಹಾಂತೇಶ ಗೆಡ್ಡಪ್ಪಗೋಳ, ಸಿ.ಎಸ್. ಗಿಡ್ಡಪ್ಪಗೋಳ, ಈರಣ್ಣಗೌಡ ಕೋಮಾರ, ಸಿಎಂ ಗಣಕುಮಾರ ಮತ್ತು ಪೀರ್ ಮೊಹಮ್ಮದ್ ಗಿರಿಗಾವಿ ಸೇರಿದಂತೆ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಂತ್ರಸ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...

ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್‌ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ...

ಉಡುಪಿಯಲ್ಲಿ ಆನಂದ್ ಡೆಂಟಲ್‌ ಆ್ಯಂಡ್‌ ಆರ್ಥೋಅಲೈನರ್ಸ್‌ ನೂತನ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌

ಕಳೆದ 18 ವರ್ಷಗಳಿಂದ ದಂತ ಆರೈಕೆ ಮತ್ತು ಚಿಕಿತ್ಸಾ ಕ್ಷೇತ್ರದಲ್ಲಿ ಗುಣಮಟ್ಟದ...

ಚಿಕ್ಕಮಗಳೂರು | ಮಾದರಿಯಾದ ಗೊಂಡೇದಹಳ್ಳಿ; ಸೌಹಾರ್ದ ಪರಂಪರೆ ಎತ್ತಿಡಿದ ಗ್ರಾಮ 

ಹಳ್ಳಿಯಿಂದ ದಿಲ್ಲಿಯವರೆಗೆ ಸೌಹಾರ್ದ ಪರಂಪರೆ, ವಿಶ್ವಾಸ, ಕಲೆ, ಸಾಹಿತ್ಯ, ಸಂಸ್ಕೃತಿ ನಾವು...