ಕೇಂದ್ರ ಸರ್ಕಾರದ ಬಜೆಟ್‌ ನಡುವೆಯೇ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

Date:

Advertisements

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮುನ್ನವೇ ಕೇಂದ್ರ ಸರ್ಕಾರವು ಇಂದು ಮಧ್ಯಂತರ ಬಜೆಟ್ ಮಂಡನೆ ಮಾಡಿದೆ. ಇದರ ನಡುವೆಯೇ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಗ್ರಾಹಕರಿಗೆ ಸರ್ಕಾರ ಶಾಕ್ ನೀಡಿದೆ.

ವಾಣಿಜ್ಯ ಬಳಕೆಯ 19 ಕೆಜಿಯಷ್ಟಿರುವ ಸಿಲಿಂಡರ್​ ದರವನ್ನು 14 ರೂಪಾಯಿ ಏರಿಕೆ ಮಾಡಲಾಗಿದೆ. ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಪರಿಷ್ಕೃತ ಬೆಲೆ ಇಂದಿನಿಂದಲೇ (ಫೆಬ್ರವರಿ 1) ಅನ್ವಯವಾಗಲಿದೆ ಎಂದು ತೈಲ ಕಂಪನಿಗಳು ಮಾಹಿತಿ ನೀಡಿದೆ.

ಕಳೆದ ತಿಂಗಳು ಕೂಡ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ತುಸು ಹೆಚ್ಚಳ ಮಾಡಿದ್ದವು. ಪ್ರಸಕ್ತ ಬೆಲೆ ಏರಿಕೆಯ ನಂತರ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ದೆಹಲಿಯಲ್ಲಿ 1,769.50 ರೂ. ಆಗಿದೆ.

Advertisements

ಯಾವ ನಗರದಲ್ಲಿ ಎಷ್ಟು ದರ?
ದೆಹಲಿ- 1769.50 ರೂ.
ಕೋಲ್ಕತ್ತಾ- 1887.00 ರೂ.
ಮುಂಬೈ-1723.50 ರೂ.
ಚೆನ್ನೈ- 1937 ರೂ.

ಗೃಹಬಳಕೆಯ ಸಿಲಿಂಡರ್‌ ಬೆಲೆ 17 ಬಾರಿ ಬದಲಾವಣೆ
ಕಳೆದ ಮೂರು ವರ್ಷಗಳಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ದರ 17 ಬಾರಿ ಬದಲಾಗಿದೆ. ವಾಣಿಜ್ಯ ಸಿಲಿಂಡರ್​ಗಳ ದರ ಬಹುತೇಕ ಪ್ರತಿ ತಿಂಗಳು ಬದಲಾಗುತ್ತಿದೆ. ಈ ಬದಲಾವಣೆಗಳಿಂದಾಗಿ, ಕೆಲವೊಮ್ಮೆ ಗ್ರಾಹಕರಿಗೆ ಪ್ರಯೋಜನವಾದರೆ ಇನ್ನು ಕೆಲವೊಮ್ಮೆ ಸಮಸ್ಯೆಗಳನ್ನು ಎದುರಿಸಬೇಕಾಗಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ನೀಡಿರುವ ಅಂಕಿ-ಅಂಶಗಳ ಪ್ರಕಾರ, ಜನವರಿ 1, 2021 ರಂದು ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,349 ರೂ ಇತ್ತು. ಅಂದಿನಿಂದ ಸುಮಾರು 50 ಬಾರಿ ದರ ಪರಿಷ್ಕರಣೆಯಾಗಿದೆ.

ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಆಗಸ್ಟ್ 30 ರಂದು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕೊನೆಯ ಬಾರಿ ಬದಲಾವಣೆ ಮಾಡಲಾಗಿತ್ತು. ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ದೆಹಲಿಯಲ್ಲಿ 903 ರೂ., ಕೋಲ್ಕತ್ತಾದಲ್ಲಿ 929 ರೂ., ಮುಂಬೈಯಲ್ಲಿ 902.50 ರೂ., ಚೆನ್ನೈನಲ್ಲಿ 918.50 ರೂ. ಇದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X