ವಿಚಿತ್ರ ಘಟನೆ | ಪತಿ ಹೆಚ್ಚು ಟೊಮ್ಯಾಟೋ ಬಳಸಿದ್ದಕ್ಕೆ ಮನೆ ಬಿಟ್ಟು ತೆರಳಿದ ಪತ್ನಿ!

Date:

Advertisements
  • ಮಧ್ಯಪ್ರದೇಶದ ಶಹದೋಲ್‌ನಲ್ಲಿ ನಡೆದ ಘಟನೆ
  • ಪತ್ನಿಯ ಹುಡುಕುವಂತೆ ಪೊಲೀಸರ ಮೊರೆ ಹೋದ ಪತಿ

ಟೊಮ್ಯಾಟೋ ಬೆಲೆ ಏರಿಕೆಯಿಂದ ಜನರ ಜೇಬಿಗೆ ಪೆಟ್ಟು ಬಿದ್ದಿರುವುದೇನೋ ನಿಜ. ಬೆಲೆ ಏರಿಕೆಯ ಪರಿಣಾಮದಿಂದ ಹಲವಾರು ರೆಸ್ಟೋರೆಂಟ್‌ಗಳು ಟೊಮ್ಯಾಟೋ ಆಧಾರಿತ ತಿಂಡಿಗಳನ್ನು ಮಾಡುವುದನ್ನೇ ಕೈಬಿಟ್ಟಿವೆ. ಆದರೆ ಇದಕ್ಕೆಲ್ಲ ವ್ಯತಿರಿಕ್ತ ಎನ್ನುವಂತಹ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.

ವಿಚಿತ್ರ ಘಟನೆಯೊಂದರಲ್ಲಿ ಮಧ್ಯಪ್ರದೇಶದ ಶಹದೋಲ್‌ನಲ್ಲಿ ಅಡುಗೆಗೆ ಪತಿ ತನ್ನನ್ನು ಕೇಳದೆಯೇ ಟೊಮ್ಯಾಟೋ ಬಳಸಿದ್ದಕ್ಕೆ ಮಗಳನ್ನು ಕರೆದುಕೊಂಡು ಮನೆ ಬಿಟ್ಟು ಹೋಗಿರುವ ಬಗ್ಗೆ ಪೊಲೀಸರಿಗೆ ಪತಿರಾಯ ದೂರು ನೀಡಿದ್ದಾನೆ.

ಸಣ್ಣ ಡಾಬಾ ನಡೆಸುತ್ತಿರುವ ಸಂದೀಪ್ ಬರ್ಮನ್ ಎಂಬಾತ ತನ್ನ ಪತ್ನಿ ಆರತಿ ಬರ್ಮನ್ ಅಡುಗೆಗೆ ಟೊಮ್ಯಾಟೋ ಬಳಸಿದ್ದಕ್ಕೆ ಕೋಪಗೊಂಡು ತನ್ನನ್ನು ಬಿಟ್ಟು ತೆರಳಿರುವುದಾಗಿ ತಿಳಿಸಿದ್ದಾನೆ.

Advertisements

“ನಾನು ಬಸ್‌ ನಿಲ್ದಾಣದ ಬಳಿ ಸಣ್ಣ ಡಾಬಾ ನಡೆಸುತ್ತಿದ್ದೇನೆ. ಅಡುಗೆ ಮಾಡುವಾಗ ಪತ್ನಿಯನ್ನು ಕೇಳದೆಯೇ ಹೆಚ್ಚುವರಿ ಎರಡು ಟೊಮ್ಯಾಟೋ ಬಳಸಿದ್ದೆ. ದರ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಿ, ನನ್ನೊಂದಿಗೆ ಜಗಳ ಪ್ರಾರಂಭಿಸಿದಳು. ಆ ಬಳಿಕ ಬೆಳಗ್ಗೆ 10.30ರ ಬಸ್ಸಿನಲ್ಲಿ ನನ್ನ ಮಗಳನ್ನೂ ಕರೆದುಕೊಂಡು ಹೊರಟುಬಿಟ್ಟಳು. ಮೂರು ದಿನಗಳಿಂದ ಹುಡುಕುತ್ತಿದ್ದೇನೆ. ಸಿಗದಿದ್ದಕ್ಕೆ ಇಬ್ಬರ ಫೋಟೋವನ್ನು ಪೊಲೀಸರಿಗೆ ನೀಡಿದ್ದೇನೆ. ಟೊಮ್ಯಾಟೋದಿಂದಾಗಿ ನನ್ನ ಕುಟುಂಬಕ್ಕೆ ಈ ಪರಿಸ್ಥಿತಿ ಬಂದಿದೆ” ಎಂದು ಸಂದೀಪ್ ಬರ್ಮನ್ ಹೇಳಿಕೆ ನೀಡಿದ್ದಾನೆ.

ಸಂದೀಪ್ ದೂರು ನೀಡಿರುವುದನ್ನು ಖಚಿತಪಡಿಸಿರುವ ಶಹದೋಲ್‌ನ ಧನಪುರಿ ಸ್ಟೇಷನ್ ಹೌಸ್ ಆಫೀಸರ್ ಸಂಜಯ್ ಜೈಸ್ವಾಲ್, ‘ಟೊಮ್ಯಾಟೋ ಬಳಸಿದ ವಿಚಾರವಾಗಿ ಜಗಳವಾಗಿರುವುದಾಗಿ ತಿಳಿಸಿದ್ದಾನೆ. ಆ ಬಳಿಕ ಆತನ ಪತ್ನಿ ಮನನೊಂದು ಮನೆ ಬಿಟ್ಟು ಹೋಗಿದ್ದಾಳೆ. ಪತಿ-ಪತ್ನಿ ಪರಸ್ಪರ ಮಾತನಾಡುವಂತೆ ತಿಳಿಸಿದ್ದೇವೆ. ಅವರು ಶೀಘ್ರದಲ್ಲೇ ಹಿಂದಿರುವುದಾಗಿ ತಿಳಿಸಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.

ದೇಶದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಟೊಮ್ಯಾಟೋಗಳ ಉತ್ಪಾದನೆ ಕಡಿಮೆಯಾಗಿದ್ದು, ಇದರಿಂದ ಮಾರುಕಟ್ಟೆಯಲ್ಲಿ ಬೆಲೆ ಗಗನಕ್ಕೇರಿದೆ. ಹಲವು ಕಡೆಗಳಲ್ಲಿ ಕೆ ಜಿ ಗೆ ₹200ರ ಗಡಿ ಸಮೀಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X